ರಾಮನಗರದಲ್ಲಿ ಡಿ ಕೆ ಸುರೇಶ್ ಬೆಂಬಲಿಗರಿಂದ ಹಲ್ಲೆ ಯತ್ನ ಹಾಗೂ ಗೂಂಡಾಗಿರಿ ಸಂಸ್ಕೃತಿಯಿಂದ ಬಂದವರಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ
ಮೈಸೂರಿನಲ್ಲಿ ರಾಮನಗರದ ಸಿಎಂ ಕಾರ್ಯಕ್ರಮದಲ್ಲಿ ನಡೆದ ಗಲಾಟೆ ಕುರಿತಂತೆ ಮಾತನಾಡಿದ ಕುಮಾರಸ್ವಾಮಿ, ಸಿಎಂ ಕಾರ್ಯಕ್ರಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿ ಇಂತಹ ಜನಪ್ರತಿನಿಧಿಗಳಿಂದ ಜನರು ಹುಷಾರಾಗಿರಬೇಕು ಎಂದರು.
ಜನಪ್ರತಿನಿಧಿಗಳ ಈ ರೀತಿಯ ನಡುವಳಿಕೆ ಜನರಲ್ಲಿ ಭೀತಿಯನ್ನು ಹುಟ್ಟಿಸಿದೆ. ಅವರು ಗೂಂಡಾಗಿರಿಯ ಸಂಸ್ಕೃತಿಯಿಂದ ಬಂದವರು ಇವರಿಂದ ಇದನ್ನ ಬಿಟ್ಟು ಬೇರೆ ಏನನ್ನು ನಿರೀಕ್ಷೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಮನಗರ ಇಷ್ಟು ದಿನ ಶಾಂತಿಯಿಂದ ಕೂಡಿತ್ತು. ಇವತ್ತು ಅಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನಗಳು ನಡೆದಿದೆ.
ಇವರು ಸರ್ಕಾರಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದಾರೆ ಅಂದ್ರೆ ತಾಳ್ಮೆ ಇರಬೇಕು. ಇವರ ಈ ನಡವಳಿಕೆ ಜನರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತೆ ಎಂಬುದನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಅಶ್ವಥ್ ನಾರಾಯಣ್ ಅವರ ಪದ ಬಳಕೆ ಸರಿಯಾದುದಲ್ಲ. ಇವರನ್ನು ತುಂಬಾ ಹತ್ತಿರದಿಂದ ನೋಡಿದ್ದೇವೆ ಇವರದ್ದು ದಬ್ಬಾಳಿಕೆಯ ರಾಜಕೀಯ ಇವರ ಮೇಲೆ ಕಾನೂನಿನ ಪ್ರಕಾರ ಕೇಸ್ ದಾಖಲಿಸಬೇಕೆಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment