Karnataka

ಮಂಡ್ಯ ಜಿಲ್ಲೆಗೆ ಕುಮಾರಸ್ವಾಮಿ ಕೊಡುಗೆ ಏನು ಸ್ವಾಮಿ ? ಮಂಡ್ಯ ಜಿಲ್ಲಾ ಮಂತ್ರಿ ಪ್ರಶ್ನೆ

ಮಂಡ್ಯ : ಜಿಲ್ಲೆಗೆ, ಕಾವೇರಿ ಅಚ್ಚುಕಟ್ಟಿನ ಪ್ರದೇಶಗಳಿಗೆ ಕುಮಾರಸ್ವಾಮಿ ಕೊಡುಗೆ ಏನು ಎಂದು ಅವರನ್ನು ಸಚಿವ ಚಲುವರಾಯಸ್ವಾಮಿ ಪ್ರಶ್ನಿಸಿದ್ದಾರೆ.

ಮಂಡ್ಯದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಚಲುವರಾಯಸ್ವಾಮಿ ಅವರು, ಕುಮಾರಸ್ವಾಮಿ ಸಾಧನೆ ಏನು ಅಂತಾ ನಮಗೂ ಗೊತ್ತಿದೆ. ವೋಟ್ ಹಾಕಿಸಿಕೊಳ್ಳಲು ಏನು ಮಾತಾಡ್ಬೇಕೋ ಅದನ್ನು ಮಾಡುತ್ತಾರೆ. ಅವರ ತಂದೆ ಕೊಡುಗೆಯನ್ನೇ ಎಷ್ಟು ಸಲ ಹೇಳುತ್ತಾರೆ? ಅವರ ತಂದೆ ಕೊಡುಗೆ ಕೊಟ್ಟಾಯ್ತು, ಜನರು ಕೃತಜ್ಞತೆ ಸಲ್ಲಿಸಿದ್ದಾಯ್ತು. ಕುಮಾರಸ್ವಾಮಿಯವರ ವೈಯಕ್ತಿಕ ಕೊಡುಗೆ ಏನು? ದೇವೇಗೌಡರ ಕೊಡುಗೆ ಮೇಲೆ ರಾಜಕಾರಣ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ತಮಿಳುನಾಡಿಗೆ ಕೆಆರ್ ಎಸ್ ಜಲಾಶಯದಿಂದ ನೀರು ಹರಿಸುತ್ತಿರುವ ಬಗ್ಗೆ ಚಲುವರಾಯಸ್ವಾಮಿ, ರಾಜ್ಯದ ಜೆಡಿಎಸ್, ಬಿಜೆಪಿ ಸಂಸದರು ಪ್ರಧಾನಿ ಬಳಿ ಹೋಗಿ ಕೇಳಲಿ ಎಂದರು.

ಸಿಎಂ ಸಿದ್ದರಾಮಯ್ಯ ಬಳಿ ನಮ್ಮ ಶಾಸಕರು ಬಂದು ಮಾತನಾಡಿದ ಹಾಗೆ ಪ್ರಧಾನಿ ಮೋದಿ ಜೊತೆ ಬಿಜೆಪಿ, ಜೆಡಿಎಸ್ ನಾಯಕರು ಮಾತನಾಡಲಿ. ಲೋಕಸಭಾ ಚುನಾವಣೆಯಲ್ಲಿ ಏನೋ ಸಾಧನೆ ಮಾಡುವುದಕ್ಕಾಗಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿವೆ ಎಂದರು.ಮಹಿಷ ದಸರಾ ತಡೆಯಲು : ಚಲೋ ಚಾಮುಂಡಿ ಬೆಟ್ಟ ಜಾಥಾ:ಸಂಸದ ಪ್ರತಾಪ್ ಸಿಂಹ

ನಾವು ರೈತರ ಹಿತರಕ್ಷಣೆಗೆ ಬದ್ಧರಾಗಿದ್ದೇವೆ. ಆದೇಶ ಉಲ್ಲಂಘಿಸಿ ರೈತರನ್ನು ರಕ್ಷಿಸುತ್ತಿದ್ದೇವೆ, ನಮ್ಮ ಶಾಸಕರು, ಸಚಿವರು, ಸಿಎಂ,ಡಿಸಿಎಂ ಎಲ್ಲರು ರೈತರ ಹಿತ ಕಾಯಲು ಯತ್ನಿಸುತ್ತಿದ್ದೇವೆ ಎಂದಿದ್ದಾರೆ.

Team Newsnap
Leave a Comment

Recent Posts

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024

ನಾಳೆ ( May 9 ) SSLC ಫಲಿತಾಂಶ ಪ್ರಕಟ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ

ಬೆಂಗಳೂರು : ರಾಜ್ಯದಲ್ಲಿ ನಡೆದ ಎರಡು ಹಂತದ ಚುನಾವಣೆಯಲ್ಲಿ 28 ಕ್ಷೇತ್ರಗಳ ಮತದಾನ ಸಮಗ್ರ ವಿವರ. Join WhatsApp Group… Read More

May 8, 2024

ಹೆಚ್‌.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್‌ ಆಸ್ಪತ್ರೆಗೆ ಶಿಫ್ಟ್‌!

ಹೆಚ್‌.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್‌ ಟೆಸ್ಟ್ ಮಾಡಿಸಿದ್ದ ಎಸ್‌ಐಟಿ ಅಧಿಕಾರಿಗಳು ಎದೆ ಉರಿ… Read More

May 7, 2024

ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು

ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More

May 7, 2024