Karnataka

ಮಗಳು ಆಸ್ತಿ ಕೇಳಿದಾಗ ವರದಕ್ಷಿಣೆಯನ್ನು ಆಸ್ತಿಯೆಂದೇ ಪರಿಗಣಿಸಬೇಕು -ಹೈಕೋರ್ಟ್​

ಮಗಳು ಆಸ್ತಿಯಲ್ಲಿ ಪಾಲು ಕೇಳಿದಾಗ ಈ ಹಿಂದೆ ಆಕೆಯ ಮದುವೆ ಸಂದರ್ಭದಲ್ಲಿ ಗಂಡನ ಮನೆಯವರು ವರದಕ್ಷಿಣೆ ರೂಪದಲ್ಲಿ ಪಡೆದ ಆಸ್ತಿಯನ್ನೂ ಸೇರಿಸಬೇಕು ಎಂದು ಹೈಕೋರ್ಟ್​ ಮಹತ್ವದ ಆದೇಶ ನೀಡಿದೆ.

ಹಿಂದೆ ಪಡೆದ ವರದಕ್ಷಿಣೆ ಆಸ್ತಿಯನ್ನೂ ಕೂಡ ಡಿವೈಡ್ ಆಗುವಾಗ ಪರಿಗಣನೆ ಮಾಡಬೇಕು. ಹಿಂದೂ ಉತ್ತರಾಧಿಕಾರ ಕಾಯ್ದೆಯಡಿ ಮಗಳು ಆಸ್ತಿ ಕೇಸ್ ಹಾಕುವಾಗ ವರದಕ್ಷಿಣೆಯಾಗಿ ಪಡೆದ ಆಸ್ತಿಯನ್ನೂ ಅರ್ಜಿಯಲ್ಲಿ ಸೇರಿಸ್ಬೇಕು. ಭಾಗ ಕೇಳಿದಾಗ ವರದಕ್ಷಿಣೆ ಪಡೆದ ಆಸ್ತಿಗಳನ್ನು ಅರ್ಜಿಯಲ್ಲಿ ಸೇರಿಸಬೇಕು ಅಂತಾ ನ್ಯಾಯಮೂರ್ತಿ ಸೂರಜ್ ಗೋವಿಂದರಾಜರ ನೇತೃತ್ವದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ಪ್ರಕರಣದ ಹಿನ್ನೆಲೆ ಏನು ?

ಬೆಂಗಳೂರಿನ ಹೇಮಲತಾ ಎಂಬುವವರು ಸಹೋದರರ ವಿರುದ್ಧ ಹಿಂದೂ ಉತ್ತರಾಧಿಕಾರಿ ಕಾಯ್ದೆಯ ಸೆಕ್ಷನ್ 6 ಅಡಿಯಲ್ಲಿ ಆಸ್ತಿಗಾಗಿ ಅರ್ಜಿ ಸಲ್ಲಿಸಿದ್ದರು.

ತಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ಕೇಳಿ ಹೇಮಲತಾ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಸಹೋದರಿಯ ಅರ್ಜಿಗೆ ವಿರುದ್ಧವಾಗಿ ಆಕೆಯ ಮದುವೆ ವೇಳೆ ವರದಕ್ಷಿಣೆಗಾಗಿ ಆಸ್ತಿ ನೀಡಿದ್ದೆ. ಅದನ್ನು ಸಹ ಅರ್ಜಿಯಲ್ಲಿ ಅವರು ಸೇರಿಸಬೇಕು ಎಂದು ಸಹೋದರ ಆಕ್ಷೇಪಣೆ ಅರ್ಜಿ ಸಲ್ಲಿಸಿದ್ದರು.

ಜೊತೆಗೆ ಹೇಮಲತಾ ಅರ್ಜಿಯಲ್ಲಿ ವರದಕ್ಷಿಣೆ ಆಸ್ತಿಯನ್ನೂ ಸೇರಿಸುವಂತೆ ಕೋರಿದ್ದರು.

ಅದರಂತೆ ವಿಚಾರಣೆ ನಡೆಸಿದ್ದ ಸಿಟಿ ಸಿವಿಲ್ ಕೋರ್ಟ್ 2018 ಆಗಸ್ಟ್ 8 ರಂದು ಅರ್ಜಿಯನ್ನ ಮಾರ್ಪಾಡು ಮಾಡುವಂತೆ ಸೂಚನೆ ನೀಡಿತ್ತು.

ಹೈಕೋರ್ಟ್ ಆದೇಶದಲ್ಲಿ ಏನಿದೆ ?

ಅವಿಭಕ್ತ ಕುಟುಂಬದ ಆಸ್ತಿಯಲ್ಲಿ ಅರ್ಜಿದಾರರು ಆಸ್ತಿ ಪಡೆದಿದ್ದರೆ ಸೇರಿಸಬೇಕು.

ಮೂಲ ಆಸ್ತಿಯ ವಿಭಜನೆ ಬಂದಾಗ ಆ ಆಸ್ತಿಯನ್ನು ಪರಿಗಣನೆ ಆಗಬೇಕು.

ಮಗಳು ವರದಕ್ಷಿಣೆ ರೂಪದಲ್ಲಿ ಆಸ್ತಿ ಪಡೆದಿದ್ದರೂ ಸಹ ಸೇರಿಸಿ ಭಾಗವಾಗ್ಬೇಕು.

ಮಗಳು ಅದನ್ನು ಸ್ವಂತ ಹಣದಲ್ಲಿ ಖರೀದಿ ಮಾಡಿದ್ದರೆ ಸೇರಿಸಬೇಕಾಗಿರುವುದಿಲ್ಲ.

ಈ ಕೇಸ್​ನಲ್ಲಿ ಅದು ವರದಕ್ಷಿಣೆ ಇಲ್ಲ, ಖರೀದಿ ಅನ್ನೋದು ನಿರ್ಧಾರ ಆಗ್ಬೇಕು. ವಿಚಾರಣೆ ನಡೆಸುತ್ತಿರುವ ಅಧೀನ ನ್ಯಾಯಾಲಯ ವಿಚಾರಣೆಯಲ್ಲಿ ನಿರ್ಧರಿಸಲಿ ಎಂದು ಹೈಕೋರ್ಟ್​ ಆದೇಶ ನೀಡಿದೆ.

Team Newsnap
Leave a Comment
Share
Published by
Team Newsnap

Recent Posts

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 1, 2024

2024ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತ ತಂಡ ಪ್ರಕಟ

ನವದೆಹಲಿ : ಟೀಂ ಇಂಡಿಯಾ ಮುಂಬರುವ ಟಿ20 ವಿಶ್ವಕಪ್‍ಗಾಗಿ 15 ಮಂದಿ ಆಟಗಾರರ ತಂಡವನ್ನು ಪ್ರಕಟಿಸಿದೆ. ಇಂದು ಭಾರತೀಯ ಕ್ರಿಕೆಟ್… Read More

April 30, 2024

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024