ಪ್ರಾಣಿಗಳೇ ಗುಣದಲಿ ಮೇಲು…….
ದೊಡ್ಡ ಮೀನುಗಳು ಸಣ್ಣ ಮೀನುಗಳನ್ನು ತಿಂದು ಬದುಕುತ್ತವಂತೆ,
ಏಡಿಗಳು ಮೇಲಕ್ಕೇರಲು ಪ್ರಯತ್ನಿಸುವ ಮತ್ತೊಂದು ಏಡಿಯ ಕಾಲು ಹಿಡಿದು ಕೆಳಕ್ಕೆ ಎಳೆಯುತ್ತವಂತೆ,
ತಲೆತಗ್ಗಿಸಿ ನಡೆಯುವ ಕುರಿಗಳು ಮುಂದೆ ಸಾಗುತ್ತಿದ್ದ ಕುರಿಯೊಂದು ಹಳ್ಳಕ್ಕೆ ಬಿದ್ದರೆ ಹಿಂಬಾಲಿಸುತ್ತಿದ್ದ ಎಲ್ಲಾ ಕುರಿಗಳು ಹಳ್ಳಕ್ಕೆ ಬೀಳುತ್ತವಂತೆ,
ಕೆರೆ ತಟದ ಕಪ್ಪೆಯೊಂದು ಒಮ್ಮೆ ವಟವಟ ಶುರು ಮಾಡಿದರೆ ಇಡೀ ಕಪ್ಪೆಗಳ ಸಮೂಹವೇ ವಟವಟ ಎನ್ನಲು ಪ್ರಾರಂಭಿಸುತ್ತವಂತೆ,
ಕೋಗಿಲೆಗಳು ಮರಿ ಮಾಡಿಸಲು ತಮ್ಮ ಮೊಟ್ಟೆಗಳನ್ನು ಕಾಗೆಗಳ ಗೂಡಿನಲ್ಲಿ ಇಟ್ಟು ಹೋಗುತ್ತದಂತೆ.
ಇನ್ನೊಂದು ಪ್ರಾಣಿಯ ಆಹಾರವನ್ನು ವಂಚಿಸಿ ತಿನ್ನುವುದೇ ನರಿ ಬುದ್ದಿಯಂತೆ,
ಇನ್ನೊಬ್ಬರ ರಕ್ತಹೀರಿ ಬದುಕುವುದೇ ಸೊಳ್ಳೆಗಳ ಕೆಲಸವಂತೆ,
ಮೋರಿಗಳಲ್ಲಿ ಹೊರಳಾಡಿ ತನ್ನ ದೇಹವನ್ನು ಗಲೀಜು ಮಾಡಿಕೊಳ್ಳುವುದೇ ಹಂದಿಗಳಿಗೆ ಸಂಭ್ರಮವಂತೆ,
ಊಸರವಳ್ಳಿ ತನ್ನ ಬಣ್ಣ ಆಗಾಗ ಬದಲಾಯಿಸುತ್ತಾ ಇತರ ಪ್ರಾಣಿಗಳನ್ನು ವಂಚಿಸುತ್ತದಂತೆ.
ಇನ್ನೊಂದೆಡೆ,……..
ನಾಯಿಯು ಅನ್ನ ಹಾಕಿದ ಒಡೆಯನಿಗೆ ತುಂಬಾ ನಿಯತ್ತಾಗಿರುತ್ತದಂತೆ,
ಹೊಟ್ಟೆ ಹಸಿವಾದಾಗ ಮಾತ್ರ ಹುಲಿಯು ಬೇಟೆಯಾಡುತ್ತದಂತೆ,
ಗೀಜಗ ಮಳೆ ಗಾಳಿ ಚಳಿಗೂ ನಾಶವಾಗದ ಗೂಡನ್ನು ನಿರ್ಮಿಸುತ್ತದಂತೆ,
ವಿಷದ ಹಾವುಗಳು ಕೂಡ ತಮ್ಮ ಜೀವಕ್ಕೆ ಅಪಾಯವಾದಾಗ ಮಾತ್ರ ಇತರರನ್ನು ಕಚ್ಚುತದಂತೆ,
ಅನೇಕ ಚಿಟ್ಟೆಗಳು – ಕೀಟಗಳು ಸಸ್ಯಗಳಿಗೆ ಪರಾಗಸ್ಪರ್ಶ ಮಾಡಿಸಿ ರೈತರ ಫಸಲು ಉತ್ತಮವಾಗಲು ಸಂಜೀವಿನಿಯಂತೆ ಕೆಲಸ ಮಾಡುತ್ತವಂತೆ,
ಎರೆ ಹುಳುಗಳು ಕೃಷಿ ಭೂಮಿಯನ್ನು ಫಲವತ್ತು ಮಾಡುತ್ತವಂತೆ,
ಹಸುವಿನ ಹಾಲು ತುಪ್ಪ ಬೆಣ್ಣೆ ಮೊಸರು ಕೊನೆಗೆ ಅದರ ಮಾಂಸವು ವಿಶ್ವದ ಆಹಾರ ಪದ್ದತಿಯ ಬಹುಮಖ್ಯ ಭಾಗವಂತೆ,
ಇವೆಲ್ಲವೂ ನಮ್ಮ ಸುತ್ತಲ ಪರಿಸರದ ಪ್ರಾಣಿ ಪಕ್ಷಿಗಳ ಗುಣ ದೋಷಗಳು.
ಈ ಮನುಷ್ಯನೆಂಬ ಪ್ರಾಣಿ ಬಹುತೇಕ ಈ ಎಲ್ಲಾ ಗುಣಗಳನ್ನೂ ತನ್ನಲ್ಲಿ ಅಡಗಿಸಿಕೊಂಡಿದ್ದಾನೆ. ಆದರೆ ತನ್ನ ಚಿಂತನಾಕ್ರಮದ, ಸ್ವಾರ್ಥ ದುರಾಸೆಯಿಂದ ಯಾವ ಗುಣ, ಯಾವ ಸಾಮರ್ಥ್ಯ, ಯಾವ ಕಲೆ ಯಾವ ವಿದ್ಯೆ ಯಾವಾಗ ಉಪಯೋಗಿಸಬೇಕು ಎಂದು ಸರಿಯಾಗಿ ಅರ್ಥಮಾಡಿಕೊಳ್ಳದೆ ಗೊಂದಲಕ್ಕೆ ಒಳಗಾಗಿದ್ದಾನೆ. ಅದಕ್ಕಾಗಿ ತನ್ನದಲ್ಲದ ಮುಖವಾಡ ತೊಟ್ಟಿದ್ದಾನೆ.
ಒಂದುವೇಳೆ ಆತ ಈ ಮುಖವಾಡ ಕಳಚಿ ಸ್ವಾರ್ಥ ತ್ಯಜಿಸಿ ತಾನು ಸಂಘಜೀವಿ ತ್ಯಾಗಜೀವಿ ಎಂದು ಭಾವಿಸಿ ಆ ರೀತಿ ವರ್ತಿಸಿದ್ದೇ ಆದರೆ ಅವನಂತಹ ಅತ್ಯದ್ಭುತ ಪ್ರಾಣಿ ಈ ವಿಶ್ವದಲ್ಲೇ ಇಲ್ಲ. ನಾವೆಲ್ಲ ಹಾಗಾಗೋಣ ಎಂಬ ನಿರೀಕ್ಷೆಯ ಆಶಯದೊಂದಿಗೆ
ಮೈಸೂರು : ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಗಳು ಪ್ರತಿಮಾ ಪ್ರಸಾದ್… Read More
ಮೈಸೂರು : ಉದಯಗಿರಿ ಪೊಲೀಸ್ ಠಾಣೆಯಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಗರ್ಭಪಾತ ಜಾಲ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿ… Read More
ಬೆಂಗಳೂರು: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (76) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಮೂತ್ರಕೋಶ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಅವರು… Read More
ರಾಯಚೂರು : ರಾಯಚೂರಿನ ತಾಪಮಾನ ಹೆಚ್ಚಳದಿಂದ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ. ಜನರು ಬಿಸಿ ಗಾಳಿಯಿಂದಾಗಿ ತತ್ತರಿಸುತ್ತಿದ್ದು ,… Read More
ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
This website uses cookies.
Leave a Comment