Editorial

ಒಳ್ಳೆಯದನ್ನೇ ನೆನಪಿಸಿಕೊಳ್ಳಬೇಕು ಎಂದು ನಿರ್ಧರಿಸಿದಾಗ ಕಂಡದ್ದು……………….

ಪುಟ್ಟ ಕಂದ ಬೆಳಗಿನ ನಿದ್ರೆಯಿಂದ ಎದ್ದು ಕಣ್ಣು ಬಿಟ್ಟು ಪಕ್ಕದಲ್ಲಿ ಮಲಗಿದ್ದ ಅಮ್ಮನನ್ನು ತನ್ನ ಎರಡೂ ಕೈಗಳಿಂದ ಬಾಚಿತಬ್ಬಿ ಆಕೆಯ ಎದೆಯ ಮೇಲೆ ಮತ್ತೆ ಮಲಗಿದಾಗ ತಾಯಿ ತನ್ನೆಲ್ಲಾ ಅಕ್ಕರೆಯಿಂದ ಅದಕ್ಕೆ ಮುತ್ತಿಟ್ಟದ್ದು……….

ರಸ್ತೆ ದಾಟುತ್ತಿದ್ದ ಹಿರಿಯರೊಬ್ಬರು ಇದ್ದಕ್ಕಿದ್ದಂತೆ ತಲೆತಿರುಗಿ ಬಿದ್ದಾಗ ಅಲ್ಲಿಯೇ ಕಾಲೇಜಿಗೆ ಹೋಗುತ್ತಿದ್ದ ಹುಡಗನೊಬ್ಬ ತನ್ನ ಬ್ಯಾಗಿನಲ್ಲಿದ್ದ ನೀರಿನ ಬಾಟಲಿನಿಂದ ಮುಖದ ಮೇಲೆ ನೀರು ಚಿಮುಕಿಸಿ ಅವರನ್ನು ಎಚ್ಚರಿಸಿದಾಗ ಆ ಹಿರಿಯರು ಅವನನ್ನು ತಬ್ಬಿಕೊಂಡು ಕೃತಜ್ಞತೆ ಹೇಳಿದ್ದು……

ವ್ಯಕ್ತಿಯೊಬ್ಬ ಹೋಟೆಲಿನಲ್ಲಿ ಮಸಾಲೆ ದೋಸೆ ತಿನ್ನುತ್ತಿರುವಾಗ ಅಲ್ಲಿಗೆ ಭಿಕ್ಷೆ ಬೇಡುತ್ತಾ ಬಂದು ಅನಾಥನೊಬ್ಬ ಕೈ ಮುಗಿದು ಬೇಡಿದಾಗ ಆ ವ್ಯಕ್ತಿ ಅವನಿಗೆ ಒಂದು ಬೆಣ್ಣೆ ಮಸಾಲೆ ಪಾರ್ಸಲ್ ಕೊಡಿಸಿದಾಗ ಆ ಅನಾಥ ಭಿಕ್ಷುಕನ ಕಣ್ಣುಗಳಲ್ಲಿ ಹೊಳೆದ ಆಸೆಯ ಹೊಳಪನ್ನು ಕಂಡದ್ದು……….

ಅಪಘಾತವಾಗಿ ಪ್ರಜ್ಞೆ ತಪ್ಪಿದ್ದ ವ್ಯಕ್ತಿಗೆ ಮತ್ತೆ ಪ್ರಜ್ಞೆ ಮರಳಿದಾಗ ಡಾಕ್ಟರ್ ಪಕ್ಕದಲ್ಲಿದ್ದ ಒಬ್ಬ ವ್ಯಕ್ತಿಯನ್ನು ತೋರಿಸಿ ಇವರು ನಿಮ್ಮನ್ನು ಸಕಾಲಕ್ಕೆ ಆಸ್ಪತ್ರೆಗೆ ಸೇರಿಸಿದ್ದರಿಂದಲೇ ನಿಮ್ಮ ಪ್ರಾಣ ಉಳಿಯಿತು ಎಂದು ಅಪರಿಚಿತರನ್ನು ಪರಿಚಯಿಸಿದಾಗ ಗಾಯಗೊಂಡ ವ್ಯಕ್ತಿಯ ಮುಖದಲ್ಲಿ ಮೂಡಿದ ಭಾವನೆ ಮತ್ತು ಆ ಅಪರಿಚಿತರ ಮನದಲ್ಲಿ ಆದ ತೃಪ್ತಿಯ ಭಾವ ಕಂಡದ್ದು….

ಕಾಲೇಜಿನ ಕ್ಯಾಂಪಸ್‌ನಲ್ಲಿ ಏನೋ ಕಾರಣದಿಂದ ಆಳುತ್ತಿದ್ದ ಹುಡುಗಿಯನ್ನು ಎದೆಗವುಚಿಕೊಂಡು ಸಂತೈಸುತ್ತಿದ್ದ ಹುಡುಗನ ಕಣ್ಣಲ್ಲೂ ನೀರನ್ನು ನೋಡಿದಾಗ……

ಮೊದಲ ಬಾರಿಗೆ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದಲ್ಲಿ ತಮ್ಮ ಮಗ ಶತಕದ ರನ್ನು ಹೊಡೆದ ಸಾಧನೆಯನ್ನು ಟಿವಿಯಲ್ಲಿ ನೋಡುತ್ತಿದ್ದ ಅಜ್ಜ ಅಜ್ಜಿ ತಂದೆ ತಾಯಿ ತಂಗಿ ಏಕದಂ ಆಕಾಶಕ್ಕೆ ನೆಗೆದು ಸಂತೋಷದಿಂದ ಕೂಗಿದ ಘಟನೆಯನ್ನು ವೀಕ್ಷಿಸಿದಾಗ……..

ಏಳು ವರುಷಗಳ ಶ್ರಮದ ನಂತರ ಉಪಗ್ರಹವೊಂದು ಯಶಸ್ವಿಯಾಗಿ ಉಡಾವಣೆಯಾದ ಸಂದರ್ಭದಲ್ಲಿ ತಾಯಿ ಮಗುವನ್ನು ಹೆಡದಷ್ಟೇ ಸಂಭ್ರಮಿಸಿದ ವಿಜ್ಞಾನಿಗಳ ಹರ್ಷೋದ್ಘಾರಗಗಳನ್ನು ಕಂಡಾಗ…..

  • ವಿವೇಕಾನಂದ. ಹೆಚ್.ಕೆ.
Team Newsnap
Leave a Comment
Share
Published by
Team Newsnap

Recent Posts

2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸುವಂತೆ ‘CWMA’ ಸೂಚನೆ

ನವದೆಹಲಿ : ಇಂದು ಸಭೆ ನಡೆಸಿದ ಕಾವೇರಿ ನಿರ್ವಹಣಾ ಪ್ರಾಧಿಕಾರ ( CWMA ) ಮೇ ತಿಂಗಳ ಭಾಗವಾಗಿ ತಮಿಳುನಾಡಿಗೆ… Read More

May 21, 2024

5 ವರ್ಷದ ಬಾಲಕ ಸಂಪ್ ಗೆ ಬಿದ್ದು ಸಾವು

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರಂನ ಅಯ್ಯಪ್ಪ ನಗರದಲ್ಲಿ ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ… Read More

May 21, 2024

ಜ್ಞಾನಬುತ್ತಿ ಸಂಸ್ಥೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನಡೆಯುವ ಉಚಿತ ತರಬೇತಿ ಶಿಬಿರದ ಉದ್ಘಾಟನೆ

ಮೈಸೂರು: “ಸಮಾಜ ಸೇವೆ ಮಾಡಲು ನಾನು ಐ.ಎ.ಎಸ್.‌ ಮತ್ತು ಕೆ.ಎ.ಎಸ್‌ ಅಧಿಕಾರಿಯಾಗಬೇಕು ಎನ್ನುತ್ತಾರೆ ಹಲವರು. ಆದರೆ ನನ್ನ ಪ್ರಕಾರ ಸಮಾಜ… Read More

May 21, 2024

ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ : ಬಾಲಕಿಯರೇ ಮೇಲುಗೈ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ , ದ್ವಿತೀಯ ಪಿಯುಸಿ… Read More

May 21, 2024

ಮೈಸೂರಿನಲ್ಲಿ ಕಲುಷಿತ ನೀರು ಸೇವಿಸಿ ಯುವಕ ಸಾವು : 40 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಮೈಸೂರು : ಯುವಕನೊಬ್ಬ ಜಿಲ್ಲೆಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿದ್ದಾನೆ . ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಒಟ್ಟು‌… Read More

May 21, 2024

ಬೆಂಗಳೂರಿನಲ್ಲಿ ರೇವ್ ಪಾರ್ಟಿ : ನಟಿ ಹೇಮಾ, ನಟ ಶ್ರೀಕಾಂತ್ ಬಂಧನ

ಬೆಂಗಳೂರು : ಬೆಂಗಳೂರಿನ ಹೊರ ವಲಯದ ರೆಸಾರ್ಟ್ ವೊಂದರಲ್ಲಿ ನಡೆದ ರೇವ್ ಪಾರ್ಟಿಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ. ಪಾರ್ಟಿಯಲ್ಲಿ ನಟ,… Read More

May 21, 2024