ಮೋದಿ ಪಕ್ಕ ನಿಂತ ಅಧಿಕಾರಿ ಯಾರು ಎಂದು ಜನರು ಸಾಮಾಜಿಕ ಜಾಲ ತಾಣದಲ್ಲಿ ಹುಡುಕಾಡಲು ಶುರುವಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರದ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಉದ್ಘಾಟನೆ ವೇಳೆ ಪ್ರಧಾನಿ ಮೋದಿ ಪಕ್ಕದಲ್ಲಿ ನಿಂತಿದ್ದ ಕರ್ನಾಟಕ ಪೊಲೀಸ್ ಸೇವೆಯ ಭದ್ರತಾ ಅಧಿಕಾರಿ ಹೆಸರು ರೀಣಾ ರಘು ಸುವರ್ಣ. ಸದ್ಯ ಜೆಸಿ ನಗರದ ಎಸಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ರೀನಾ ಸುವರ್ಣ 2014 ರಲ್ಲಿ ಕರ್ನಾಟಕ ಪೊಲೀಸ್ ಸೇವೆಗೆ ಸೇರಿದ್ದರು. ಪ್ರೊಬೇಷನರಿ ಅವಧಿಯಲ್ಲಿಯೇ ಹಿರಿಯ ಅಧಿಕಾರಿಗಳ ಗಮನ ಸೆಳೆದಿದ್ದ ರೀನಾ ರಘು ಸುವರ್ಣಾ ಇದೀಗ ಪ್ರಧಾನಿ ಪಕ್ಕದಲ್ಲೇ ನಿಂತು ಭದ್ರತೆ ಒದಗಿಸಿ ಭಾರೀ ಸುದ್ದಿಯಾಗಿದ್ದಾರೆ.
ಸೋಮವಾರ ಬಳಗ್ಗೆ ಮಲ್ಲೇಶ್ವರಂ ಬಳಿ ಇರುವ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಬ್ರೈನ್ ಸೆಂಟರ್ ಪ್ರಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅಡಿಗಲ್ಲು ಹಾಕುವ ಕಾರ್ಯಕ್ರಮವಿತ್ತು. ಈ ವೇಳೆ ಪ್ರಧಾನಿ ಅಕ್ಕ ಪಕ್ಕ ಇದ್ದಿದ್ದು ಎನ್ಎಸ್ ಜಿ ಪಡೆ.
ರಾಜ್ಯದಿಂದಲೂ ಸಾಕಷ್ಟು ಪೊಲೀಸ್ ಸಿಬ್ಬಂದಿಯನ್ನು ಪ್ರಧಾನಿ ಭದ್ರತೆಗಾಗಿ ನಿಯೋಜಿಸಲಾಗಿತ್ತು. ಆದರೆ, ಮೋದಿ ಅವರಿಂದ ಕೇವಲ ಎರಡು ಮೀಟರ್ ಅಂತರದಲ್ಲಿ ನಿಂತು ಗಮನ ಸೆಳೆದಿದ್ದು ಎಸಿಪಿ ರೀನಾ ಸುವರ್ಣಾ. ಪ್ರಧಾನಿಗಳಿಗೆ ಸಮೀಪ ಹೋಗಿ ಭದ್ರತೆ ಒದಗಿಸಿದ ಅವಕಾಶ ರೀನಾ ಅವರಿಗೆ ಸಿಕ್ಕಿದ್ದು ಇದೀಗ ಭಾರೀ ಚರ್ಚೆಗೆ ನಾಂದಿ ಹಾಡಿದೆ.
2014 ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ವ್ಯಾಸಂಗದ ಅವಧಿಯಲ್ಲಿ ಬೆಂಗಳೂರು ವಿವಿಯಲ್ಲಿ ಚಿನ್ನದ ಪದಕ ಗಿಟ್ಟಿಸಿದ್ದ ರೀನಾ ಸುವರ್ಣ ಅವರು, ರಾಜ್ಯ ಪೊಲೀಸ್ ಸೇವೆಗೆ ಆಯ್ಕೆಯಾಗಿದ್ದರು. ಪ್ರೊಬೆಷನರಿ ಅವಧಿಯಲ್ಲಿಯೇ ನಾನಾ ಅಪರಾಧ ಪ್ರಕರಣಗಳನ್ನು ಪತ್ತೆ ಮಾಡುವ ಮೂಲಕ ಬೆಂಗಳೂರಿನಲ್ಲಿ ಸದ್ದು ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ವಿಭಾಗದಲ್ಲಿ ಕಾರ್ಯ ನಿರ್ವಹಿಸಿದ ರೀನಾ ಸುವರ್ಣ ಅವರು ಸುಮಾರು ಹನ್ನೊಂದು ಮಿಸ್ಸಿಂಗ್ ಪ್ರಕರಣ ಪತ್ತೆ ಮಾಡುವ ಮೂಲಕ ಸುದ್ದಿಯಾಗಿದ್ದರು. ಅತ್ತಿಬೆಲೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಸ್ಕೋ ಪ್ರಕರಣವನ್ನು ಒಂದು ದಿನದಲ್ಲಿ ಪತ್ತೆ ಮಾಡುವ ಮೂಲಕ ರೀನಾ ಅವರ ತನಿಖಾ ಶೈಲಿ ಅಧಿಕಾರಿಗಳ ಗಮನ ಸೆಳೆಯಿತು. ಜಿಗಣಿ ಪೊಲೀಸ್ ಠಾಣೆಯಲ್ಲಿ ಪತ್ತೆಯಾಗದೇ ಉಳಿದಿದ್ದ ಅಪರಿಚಿತ ಶವ ಪ್ರಕರಣವನ್ನು ಬೇಧಿಸಿದ್ದರು. ಹೀಗೆ ಅಪರಾಧ ಪ್ರಕರಣಗಳನ್ನು ಕ್ಷಾಣಾಕ್ಷತೆಯಿಂದ ಪತ್ತೆ ಮಾಡುವ ಮೂಲಕ ರೀನಾ ಸುವರ್ಣ ಬೆಂಗಳೂರಿನಲ್ಲಿ ಸುದ್ದಿಯಾಗಿದ್ದಾರೆ.
ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More
ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More
ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More
ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More
ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More
ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನ ಹೊರವಲಯದಲ್ಲಿ ಅಪಘಾತಕ್ಕೀಡಾಗಿರುವ ಘಟನೆ ಬುಧವಾರ ರಾತ್ರಿ 11.50 ರ ಸುಮಾರಿಗೆ ನಡೆದಿದೆ.… Read More
This website uses cookies.
Leave a Comment