ಕೊರೊನಾ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಈ ಬಾರಿಯೂ ಸರಳವಾಗಿಯೂ ಸಾಂಪ್ರದಾಯಕವಾಗಿಯೂ ಆಚರಿಸಲು ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದೆ. ಅದರೆ ದಸರಾ ಉದ್ಘಾಟಕರ ಹೆಸರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯೇ ಪ್ರಕಟಿಸುವರು.
ಈ ವಿಷಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ಹೇಳಿದರು. ನಾವು ಯಾವುದೇ ಉದ್ಘಾಟಕರ ಹೆಸರು ಸೂಚಿಸಿಲ್ಲ. ಈ ಬಾರಿ ಮುಖ್ಯಮಂತ್ರಿಗಳೇ ಉದ್ಘಾಟಕರು ಯಾರೆಂದು ತಿಳಿಸುವರು. ಕೋವಿಡ್ ಮೂರನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆ ನೀಡಿರುವ ಕಾರಣ ಎಷ್ಟುಜನರಿಗೆ ದಸರಾದಲ್ಲಿ ಪ್ರವೇಶ ನೀಡಬೇಕೆಂಬ ಕುರಿತು ಸದ್ಯದಲ್ಲೇ ಪ್ರಚುರಪಡಿಸಲಾಗುವುದು ಎಂದರು.
ಜಂಬೂ ಸವಾರಿ ಅರಮನೆ ಆವರಣದಲ್ಲೇ ನಡೆಯಲಿದೆ. 9 ದಿನಗಳ ಸಾಂಸ್ಕೃತಿಕ ಕಾರ್ಯಕ್ರಮ ಅಲ್ಲೇ ಏರ್ಪಡಿಸಲಾಗುವುದು. ದಸರ ಆಚರಣೆ ಸಂಬಂಧ ಮೈಸೂರಿನಲ್ಲಿ ಸೆಪ್ಟೆಂಬರ್ 8 ರಂದು ದಸರಾ ಕಾರ್ಯಕಾರಿ ಸತಿ ಸಭೆ ಏರ್ಪಡಿಸಲಾಗಿದೆ. ಮೈಸೂರು ದಸರಾಗೆ ಐದು ಕೋಟಿರೂ. ಕೇಳಲಾಗಿತ್ತು. ಶ್ರೀರಂಗಪಟ್ಟಣ ಹಾಗೂ ಚಾಮರಾಜನಗರ ದಸರಾ ಆಚರಣೆ ಸೇರಿ ಆರು ಕೋಟಿರೂ.ಗಳನ್ನು ಸಿಎಂ ನೀಡಿದ್ದಾರೆಂದು ಸೋಮಶೇಖರ್ ವಿವರಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ