Mysuru

ಪ್ರತಿ ಪ್ರಶ್ನೆಗೂ ಡಿಸಿಪಿ ಕಡೆ ಏಕೆ ನೋಡುತ್ತೀರಿ: ಸಿದ್ದು ಪ್ರಶ್ನೆ

ತಾವು ಕೇಳಿದ ಪ್ರಶ್ನೆಗೆ ಡಿಸಿಪಿ ಕಡೆ ನೋಡುತ್ತಿದ್ದ ಇನ್ಸ್ಪೆಕ್ಟರ್‌ರನ್ನು ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡರು.


ಇತ್ತೀಚಿಗೆ ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರಗುಡ್ಡದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬುಧವಾರ ಸ್ಥಳಕ್ಕೆ ಭೇಟಿ ನೀಡಿದ್ದರು.


ಈ ಸಂದರ್ಭದಲ್ಲಿ ಸಾಕಷ್ಟು ಪ್ರಶ್ನೆಗಳನ್ನು ಆಲನಹಳ್ಳಿ ಠಾಣೆ ಇನ್ಸ್ಪೆಕ್ಟರ್ ರವಿಶಂಕರ್‌ಗೆ ಕೇಳಿದಾಗ ಅವರು ಡಿಸಿಪಿ ಕಡೆ ನೋಡುತ್ತಿದ್ದರು. ಇದರಿಂದ ಕೆರಳಿದ ಸಿದ್ದು, ಪ್ರತಿ ಪ್ರಶ್ನೆಗೂ ನೀವು (ರವಿಶಂಕರ್) ಡಿಸಿಪಿ ಪ್ರದೀಪ್ ಗುಂಟಿ ಮುಖ ನೋಡುತ್ತಿರುವುದು ಏಕೆ ಎಂದು ಪ್ರಶ್ನಿಸಿದರು.


ಘಟನೆ ನಡೆಯುವುದಕ್ಕೆ ಮೊದಲು ಈ ಜಾಗಕ್ಕೆ ಎಷ್ಟು ಸಲ ಬಂದಿದ್ದೀರಿ? ಸೆರೆ ಸಿಕ್ಕವರು ಹ್ಯಾಬಿಚಿಯುಲ್ ಅಫೆಂಡರ್ಸಾ? ಈ ಜಾಗದಿಂದ ರಿಂಗ್ ರಸ್ತೆ ಎಷ್ಟು ದೂರವಾಗುತ್ತೆ ಎಂಬ ಪ್ರಶ್ನೆಗಳಿಗೆ ಇನ್ಸ್ಪೆಕ್ಟರ್ ಸರಿಯಾಗಿ ಉತ್ತರಿಸದೇ ತಮ್ಮ ಹಿರಿಯ ಅಧಿಕಾರಿಗಳತ್ತ ನೋಡುತ್ತಿದ್ದರಿಂದ ಸಿದ್ದು ಗರಂ ಆದರು. ಎಲ್ಲ ಮುಗಿದ ಮೇಲೆ ಗರುಡಾ ವಾಹನ ಓಡಾಡಿದರೆ ಏನು ಪ್ರಯೋಜನ ಎಂದು ತಮ್ಮ ಅಸಮಧಾನ ವ್ಯಕ್ತಪಡಿಸಿದರು.


ಘಟನೆ ನಡೆದ ಕೆಲವು ಗಂಟೆಗಳಲ್ಲಿ ವಿಷಯ ತಿಳಿದರೂ ಪೊಲೀಸರು ಪ್ರಕರಣ ದಾಖಲಿಸಲು 15 ತಾಸು ವಿಳಂಬ ಮಾಡಿದ್ದು ಏಕೆ ಎಂದು ಅವರು ಕೇಳಿದರು.
ತುಂತುರು ಮಳೆ ಇದ್ದ ಕಾರಣ ಸಿದ್ದರಾಮಯ್ಯ ಅವರೇ ಛತ್ರಿಯನ್ನು ಹಿಡಿದುಕೊಂಡು ಸ್ಥಳದಲ್ಲಿದ್ದ ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಡಾ. ಎಚ್.ಸಿ. ಮಹದೇವಪ್ಪ, ಮಾಜಿ ಶಾಸಕ ಎಂ.ಕೆ. ಸೋಮಶೇಖರ್ ಮತ್ತಿತರರು ಇದ್ದರು.

Team Newsnap
Leave a Comment
Share
Published by
Team Newsnap

Recent Posts

ಮಂಡ್ಯ : ಭಾರಿ ಮಳೆಗೆ ಕಾರಿನ ಮೇಲೆ ಮರ ಬಿದ್ದು ವ್ಯಕ್ತಿ ದುರ್ಮರಣ

ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More

May 7, 2024

ಕರ್ತವ್ಯಕ್ಕೆ ತೆರಳುತ್ತಿದ್ದ ಚುನಾವಣಾ ಸಿಬ್ಬಂದಿ ಹೃದಯಾಘಾತದಿಂದ ಸಾವು

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More

May 6, 2024

ಪೋಷಕರ ಕಣ್ಣೆದುರೇ ಮಕ್ಕಳು ನೀರುಪಾಲು

ಮಂಗಳೂರು : ಬಂಟ್ವಾಳದ (Bantwal) ನಾವೂರಿನಲ್ಲಿ ಪೋಷಕರ ಎದುರೇ ಇಬ್ಬರು ಮಕ್ಕಳು ನೀರುಪಾಲಾದ ಘಟನೆ ನಡೆದಿದೆ. ಅನ್ಸಾರ್ ಅವರ ಪುತ್ರಿ… Read More

May 6, 2024

ಪ್ರೀತಿಯೆಂದರೆ…. ಇಷ್ಟೇನಾ

(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More

May 6, 2024

ಹಾಸನ ಅಶ್ಲೀಲ ವಿಡಿಯೋಗಳನ್ನು ಹಂಚುವುದು ಶಿಕ್ಷಾರ್ಹ ಅಪರಾಧ: ಎಸ್‌ಐಟಿ

ಬೆಂಗಳೂರು : ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿ.ಕೆ.ಸಿಂಗ್ , ಹಾಸನದ ಅಶ್ಲೀಲ ಮತ್ತು ಶೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ… Read More

May 6, 2024

ಕುಸ್ತಿಪಟು ಭಜರಂಗ್ ಪುನಿಯಾ ನಾಡಾದಿಂದ ಅಮಾನತು

ನವದೆಹಲಿ: ಕುಸ್ತಿಪಟು ಭಜರಂಗ್ ಪುನಿಯಾ ( Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಸಂಸ್ಥೆ (NADA )… Read More

May 5, 2024