ಮದುವೆಯಾಗಿ ಮನೆಗೆ ಬರುವ ಸೊಸೆ ಹೊಸದಾಗಿಯೇ ಬರೋದು, ಸೊಸೆಗೆ ನೀನು ವಲಸೆ ಬಂದವಳು ಅಂತ ಹೇಳೋಕಾಗುತ್ತಾ? ಎಂದು ಮಾರ್ಮಿಕವಾಗಿ ಕಾಂಗ್ರೆಸ್ನ ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಪ್ರಶ್ನೆ ಮಾಡಿದರು.
ಸುದ್ದಿಗಾರರ ಜೊತೆ ಮಾತನಾಡಿದ ಇಬ್ರಾಹಿಂ, ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಪೈಪೋಟಿಯ ಬಗ್ಗೆ ಪ್ರತಿಕ್ರಿಯೆ ನೀಡಿ, ಸೊಸೆ ಬಂದು ಕೆಲವು ದಿನಕ್ಕೆ ಕೀಲಿಕೈ ಅವಳ ಕೈಗೆ ಸೇರುತ್ತದೆ. ಈಗ ಸಿದ್ದರಾಮಯ್ಯ ಕೈಗೆ ಕೀಲಿಕೈ ಸಿಕ್ಕಿದೆ. ವಲಸಿಗ ಹೊಸಬ ಎಂಬ ಜಟಾಪಟಿ ಮುಂದೆ ನಡೆಯಲ್ಲ.ಎಂದರು.
ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಿದ್ದು ಯಾರು? ಬಳ್ಳಾರಿ ಪಾದಯಾತ್ರೆಯಲ್ಲಿ ಅವರನ್ನು ಮುಂದೆ ತಂದಿದ್ಯಾರು?. ಇಂಥವನೊಬ್ಬ ಇದ್ದಾನೆ ಎಂದು ಹೇಳಿದ್ದೇ ನಾವು’ ಎಂದು ಸಿ.ಎಂ.ಇಬ್ರಾಹಿಂ ಹೇಳಿದರು.
ಹೀರೋ ಇದ್ದರೂ ಹಿನ್ನೆಲೆ ಗಾಯಕರು ಯಾರು? ಸ್ವಲ್ಪ ಕ್ಯಾಸೆಟ್ ತೆಗೆದು ನೋಡಿ, ಹಿನ್ನೆಲೆ ಗಾಯಕ ಕಾಣಿಸಲ್ಲ. 1ರೂ.ಗೆ ಅಕ್ಕಿ, ಮಧ್ಯಾಹ್ನದ ಊಟ ತಂದವರು ಯಾರು? ಆ ಯೋಜನೆಯನ್ನು ತಮಿಳುನಾಡಿನಲ್ಲಿ ಕುಳಿತು ಅಧ್ಯಯನ ಮಾಡಿ ನಾನು ಪರಿಚಯಿಸಿದ್ದೆ. ಯೋಜನಾ ಆಯೋಗದ ಉಪಾಧ್ಯಕ್ಷನಾಗಿ ಯೋಜನೆ ಕೊಟ್ಟಿದ್ದೆ. ಆ ಯೋಜನೆ ಸಕ್ಸಸ್ ಆಯಿತು ಎಂದರು.
ಸಿದ್ದರಾಮಯ್ಯ ಸಿಎಂ ಆದಾಗ ಒಳ್ಳೆಯ ಟೀಂ ಸಿಕ್ಕಿತ್ತು, ಆದರೆ ಬಿಎಸ್ವೈಗೆ ಸಿಗಲಿಲ್ಲ. ಸಿಎಂ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಇಬ್ಬರೇ ಟೀಂ ಆಗಿದ್ದಾರೆ. ಸಿಎಂ ಯಡಿಯೂರಪ್ಪಗೆ ಜಾತಿ ಬೆಂಬಲ ಇದೆ. ಬಿಎಸ್ವೈ ಬಿಜೆಪಿ ಬಿಟ್ಟರೆ ಬಿಜೆಪಿಗೆ ಬರೋದು 40 ಸೀಟು ಎಂದು ಅವರು ವ್ಯಾಖ್ಯಾನಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ