ನಿಖಿಲ್ಗೌಡ ಎಂಬ ವ್ಯಕ್ತಿಯೊಬ್ಬ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ ಮನೆ ಮುಂದೆ ಭಾನುವಾರ ಗಲಾಟೆ ಮಾಡಿರುವ ವಿಡಿಯೋ ಎಲ್ಲೆಡೆ ವೈರಲ್ ಅಗಿದೆ.
ಭಾನುವಾರ ಮುಂಜಾನೆ ಹಲ್ಮಿಡಿ ಗ್ರೂಪ್ಸ್ ಮುಖ್ಯಸ್ಥನಾಗಿರುವ ನಿಖಿಲ್ಗೌಡ ಎಂಬ ವ್ಯಕ್ತಿ ಕುಡಿದ ಮತ್ತಿನಲ್ಲಿ ಎಸ್ಪಿ ಮನೆ ಮುಂದೆ ಆಗಮಿಸಿ ಮನಬಂದಂತೆ ಅವಾಚ್ಯ ಶಬ್ಧಗಳಿಂದ ನಿಂದಿಸಿ, ಕೂಗಾಟ, ಕಿರುಚಾಟ ಮಾಡುವ ಮೂಲಕ ರಂಪಾಟ ಮಾಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಈ ಸಂದರ್ಭದಲ್ಲಿ ಮನೆಗೆ ಪ್ರವೇಶಿಸಿಲು ನಿಖಿಲ್ಗೌಡ ಮುಂದಾಗಿದ್ದಾನೆ. ಆದರೆ ಮನೆ ಮುಂದೆ ಪಹರೆಯಲ್ಲಿದ್ದ ಪೊಲೀಸ್ ಪೇದೆಯೊಬ್ಬರು ಆತನನ್ನು ಮನೆಗೆ ಪ್ರವೇಶಿಸದಂತೆ ತಡೆಯೊಡ್ಡಿ ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.
ಯಾವುದೇ ಕ್ರಮ ಕೈಗೊಳ್ಳದ ಅಧಿಕಾರಿಗಳು:
ನಿಖಿಲ್ ಎಂಬ ವ್ಯಕ್ತಿ ಮನಬಂದಂತೆ ಬೈದರೂ ಎಸ್ಪಿ ಡಾ.ಎಂ.ಅಶ್ವಿನಿ ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೆ, ಯಾವುದೇ ದೂರು ಸಹ ನೀಡಿಲ್ಲ ಎಂಬ ಆರೋಪವೂ ಕೇಳಿ ಬಂದಿದೆ
ಕುಡಿದು ರಂಪಾಟ ಮಾಡಿದವನಿಗೂ, ಎಸ್ಪಿಗೂ ಏನು ಸಂಬಂಧ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.
ಇಲಾಖೆಯ ಹಲವು ಕಾರ್ಯಕ್ರಮಗಳಲ್ಲಿ ಭಾಗಿ:
ಸದಾ ಎಸ್ಪಿ ಜತೆ ಇರುತ್ತಿದ್ದ ನಿಖಿಲ್ ಹಲವು ಬಾರಿ ಇಲಾಖೆ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದನು. ಎಸ್ಪಿ ಹೆಸರಲ್ಲಿ ನಿಖಿಲ್ ವಸೂಲಿ ಮಾಡುತ್ತಿದ್ದ ಆರೋಪವೂ ಕೇಳಿ ಬಂದಿತ್ತು.
ಎಸ್ಪಿ ಅಶ್ವಿನಿ ನಿಖಿಲ್ನನ್ನು ದೂರವಿಟ್ಟಿದ್ದರು ಎಂಬ ಮಾಹಿತಿ ಹರಿದಾಡಿತ್ತು. ಇದರಿಂದ ಕುಪಿತಗೊಂಡ ನಿಖಿಲ್ ಭಾನುವಾರ ಬೆಳಿಗ್ಗೆ ಕುಡಿದ ಮತ್ತಿನಲ್ಲಿ ಎಸ್ಪಿ ಮನೆ ಮುಂದೆ ಗಲಾಟೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.
ಇದಕ್ಕೂ ಮುನ್ನ ನಿಖಿಲ್ ಕೆಲವು ದಿನಗಳ ಹಿಂದೆ ಎಸ್ಪಿ ಕಚೇರಿ ಮುಂದೆಯೂ ರಂಪಾಟ ನಡೆಸಿದ್ದನು ಎಂಬ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ.
ನಿಖಿಲ್ ವಿರುದ್ಧ ಪೊಲೀಸ್ ಪೇದೆ ದೂರು?:
ನಿಖಿಲ್ ಗೂಂಡಾಗಿರಿ ವಿರುದ್ಧ ಪೊಲೀಸ್ ಪೇದೆಯೊಬ್ಬರು ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಕರ್ತವ್ಯನಿರತ ಪೇದೆ ಕೊಟ್ಟಿದ್ದ ದೂರಿಗೆ ಯಾವುದೇ ಎಫ್ಐಆರ್ ದಾಖಲಿಸಲು ಪೊಲೀಸರು ಹಿಂದೇಟು ಹಾಕಿದ್ದಾರೆ.
ಡಿಎಆರ್ ಪೇದೆ ಶಿವಕುಮಾರ್ ಎಸ್ಪಿ ಮನೆ ಮುಂದೆ ಪಹರೆಯಲ್ಲಿದ್ದರು. ಭಾನುವಾರ ಬೆಳಿಗ್ಗೆ ನಿಖಿಲ್ ಕುಡಿದು ಗಲಾಟೆ ಮಾಡುವಾಗ ಆತನನ್ನು ಎಸ್ಪಿ ಮನೆಗೆ ಪ್ರವೇಶಿಸಿದಂತೆ ಹೊರಗೆ ಕಳುಹಿಸಿದ್ದರು. ಮಂಡ್ಯ ಪಶ್ಚಿಮ ಠಾಣೆಗೆ ವಿವರವಾದ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್… Read More
ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More
ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್ಐಆರ್… Read More
ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More
ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More
ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More
This website uses cookies.
Leave a Comment