ಈ ಘಟನೆಯಲ್ಲಿ ತಾಯಿ ಗೀತಾ ಹಾಗೂ ಮಕ್ಕಳಾದ ರಂತನ್ (7) ಹಾಗೂ ನಂದನ ಗಂಭೀರ ಗಾಯಗೊಂಡಿದ್ದಾರೆ.ಒಂದೇ ಕ್ಷೇತ್ರದಿಂದ ನನ್ನ ಸ್ಪರ್ಧೆ : ಮಾಜಿ ಸಿಎಂ ಸಿದ್ದರಾಮಯ್ಯ ಪ್ರಕಟ
ಅಂಕನಹಳ್ಳಿಯ ರಂಗಸ್ವಾಮಿ ಮನೆಗೆ ಬೆಂಕಿ ಹಚ್ಚಿದ ಆರೋಪಿ ಪತಿ ಎಂದು ಗುರುತಿಸಲಾಗಿದೆ.
ಅಂಕನಹಳ್ಳಿಯ ರಂಗಸ್ವಾಮಿ ಮತ್ತು ಗೀತಾ ದಂಪತಿ ನಡುವೆ ಜಮೀನು ವಿಚಾರವಾಗಿ ಪದೇಪದೇ ಜಗಳ ನಡೆಯುತ್ತಿತ್ತು.ಈ ವಿಚಾರವಾಗಿ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು.
ಜಮೀನು ಜಗಳದಿಂದ ಸಂಸಾರದಲ್ಲಿ ಗಲಾಟೆ ಹೆಚ್ಚಾಗಿತ್ತು. ಹೀಗಾಗಿ ಹೊಂದಾಣಿಕೆ ಇಲ್ಲದ ಕಾರಣ ಕಳೆದ ನಾಲ್ಕು ತಿಂಗಳಿನಿಂದ ಗೀತಾ ಪತಿಯಿಂದ ದೂರವಾಗಿದ್ದು, ತನ್ನ ಮಕ್ಕಳೊಂದಿಗೆ ದೊಡ್ಡಬೀಕನಹಳ್ಳಿ ಗ್ರಾಮದಲ್ಲಿ ವಾಸವಿದ್ದರು.
ಮಕ್ಕಳು ಗೀತಾ ಜೊತೆ ಇರುವ ಹಿನ್ನೆಲೆಯಲ್ಲಿ ಮಕ್ಕಳನ್ನು ನೋಡಲೆಂದು ರಂಗಸ್ವಾಮಿ ಆಗಾಗ ದೊಡ್ಡಬೀಕನಹಳ್ಳಿ ಗ್ರಾಮಕ್ಕೆ ಬರುತ್ತಿದ್ದನು. ಮಕ್ಕಳ ಜೊತೆ ಮಾತನಾಡಿ ಸಮಯ ಕಳೆದು ಹೋಗುತ್ತಿದ್ದನು.
ನಾಲ್ಕು ತಿಂಗಳಿನಿಂದ ಹೀಗೆ ನಡೆಯುತಿತ್ತು. ಅದೇ ರೀತಿ ನಿನ್ನೆ ಕೂಡ ರಂಗಸ್ವಾಮಿ ಮಕ್ಕಳನ್ನು ನೋಡಲು ದೊಡ್ಡಬೀಕನಹಳ್ಳಿ ಗ್ರಾಮದ ಮನೆಗೆ ಬಂದಿದ್ದಾನೆ. ಜಮೀನು ವಿಚಾರ ಇತ್ಯರ್ಥವಾಗದ ಕಾರಣ ಪತಿಯ ಮೇಲೆ ಕೋಪಗೊಂಡಿದ್ದ ಪತ್ನಿ ಗೀತಾ ಮಕ್ಕಳನ್ನು ನೋಡಲು ಅವಕಾಶ ಮಾಡಿಕೊಟ್ಟಿರಲಿಲ್ಲ. ಈ ಕಾರಣಕ್ಕೆ ಕೋಪಗೊಂಡ ರಂಗಸ್ವಾಮಿ ನಿನ್ನೆ ತಡರಾತ್ರಿ ಅಮಾನವೀಯ ಕೃತ್ಯ ಎಸಗಿದ್ದಾನೆ.
ಪತ್ನಿ ಗೀತಾ ಮೇಲೆ ತೀವ್ರ ಕೋಪಗೊಂಡಿದ್ದ ರಂಗಸ್ವಾಮಿ ಸ್ಥಳೀಯ ಪೆಟ್ರೋಲ್ ಬಂಕ್ಗೆ ತೆರಳಿ ಹತ್ತಾರು ಲೀಟರ್ ಪೆಟ್ರೋಲ್ ಖರೀದಿಸಿದ್ದಾನೆ.
ಬಳಿಕ ದೊಡ್ಡಬೀಕನಹಳ್ಳಿಯಲ್ಲಿರುವ ಪತ್ನಿ ಮತ್ತು ಮಕ್ಕಳು ನಿದ್ರೆಗೆ ಜಾರಿದ್ದ ವೇಳೆ ಮಧ್ಯರಾತ್ರಿ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ನೋಡ ನೋಡುತ್ತಿದ್ದಂತೆ ಮನೆ ಹೊತ್ತಿ ಉರಿದಿದೆ.
ಬೆಂಕಿಯ ಮಧ್ಯೆ ಸಿಲುಕಿದ್ದ ಗೀತಾ ಹಾಗೂ ಮಕ್ಕಳ ಸಹಾಯಕ್ಕೆ ಸ್ಥಳೀಯರು ಕೂಡಲೇ ಧಾವಿಸಿದ್ದಾರೆ. ಸ್ಥಳೀಯರ ನೆರವಿನಿಂದ ಮೂವರನ್ನು ಪ್ರಾಣಾಪಾಯದಿಂದ ಪಾರು ಮಾಡಲಾಗಿದೆ. ಘಟನೆಯಲ್ಲಿ ತಾಯಿ ಹಾಗೂ ಮಕ್ಕಳಿಗೆ ಕೈ ಹಾಗೂ ಕಾಲಿನ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಇನ್ನು ಪೆಟ್ರೋಲ್ನಿಂದ ಮನೆ ಹೊತ್ತಿ ಉರಿದ ಪರಿಣಾಮ ಮನೆಯಲ್ಲಿದ್ದ ವಸ್ತುಗಳು ಬೆಂಕಿಗಾಹುತಿಯಾಗಿದೆ.
ಈ ಘಟನೆ ಸಂಬಂಧ ಗೊರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ, ಆರೋಪಿ ರಂಗಸ್ವಾಮಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ.
ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More
ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More
ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More
ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More
ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More
ಬೆಂಗಳೂರು: ಮಹಿಳೆಯರ ಮೇಲಿನ ಸತತ ದೌರ್ಜನ್ಯದ ಆರೋಪಗಳ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣರನ್ನು ಜೆಡಿಎಸ್ ನಿಂದ ಅಮಾನತು ಮಾಡಲಾಗಿದೆ. ಈ… Read More
This website uses cookies.
Leave a Comment