Main News

ಆನಂದ್ ಸಿಂಗ್ ಮುನಿಸು ತಾರಕಕ್ಕೆ: ರಾಜೀನಾಮೆಗೆ ಮುಂದಾಗಿರುವ ವಿಜಯನಗರದ “ವೀರಪುತ್ರ’ ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದ ಖಾತೆ ಪ್ರಕಟವಾಗುತ್ತಿದ್ದಂತೆ ತಮಗೆ ದೊರೆತ ಖಾತೆ ಬಗ್ಗೆ ಅತೃಪ್ತಿ ಹೊರಹಾಕಿದ್ದ ಸಚಿವ ಆನಂದ್‌ಸಿಂಗ್ ಆಕ್ರೋಶ ಈಗ ತಾರಕಕ್ಕೇರಿದೆ.

ಮುಖ್ಯಮಂತ್ರಿಯ ದೂರವಾಣಿ ಕರೆಗೂ ಸಚಿವ ಆನಂದ್ ಸಿಂಗ್ ನಿರ್ಲಕ್ಷ್ಯ ಮಾಡಿರುವ ಸಂಗತಿ ವಿಷಯ ಬಹಿರಂಗವಾಗಿದ್ದು, ಬೊಮ್ಮಾಯಿ ಸಂಪುಟದಲ್ಲಿ ಒಂದು ವಿಕೆಟ್ ಪತನವಾಗುವ ಎಲ್ಲ ಲಕ್ಷಣಗಳು ಗೋಚರಿಸುತ್ತಿದೆ ಎಂಬುದು ರಾಜಕೀಯ ಪಂಡಿತರ ಅಭಿಪ್ರಾಯ.

ತಮಗೆ ದೊರೆತ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ಬಗ್ಗೆ ಅತೃಪ್ತಿಹೊಂದಿರುವ ಆನಂದ್ ಸಿಂಗ್ ಅವರೊಂದಿಗೆ ಈಗಾಗಲೇ ಮುಖ್ಯಮಂತ್ರಿ ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಇನ್ನೊಮ್ಮೆ ಚರ್ಚೆ ನಡೆಸುವ ಭರವಸೆಯನ್ನೂ ನೀಡಿದ್ದರು.
ಇದರಿಂದ ಸಮಾಧಾನಗೊಳ್ಳದ ಆನಂದ್ ಸಿಂಗ್ ಕಳೆದ ಭಾನುವಾರ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರವಿರುವ ಕವರ್ ನೀಡಿದ್ದು, ತಾವು ನೀಡಿರುವ ಗಡುವಿನೊಳಗೆ ಖಾತೆ ಬದಲಾವಣೆ ಬೇಡಿಕೆ ಈಡೇರಿಸದಿದ್ದರೆ ರಾಜೀನಾಮೆ ಅಂಗೀಕರಿಸುವಂತೆ ಹೇಳಿದ್ದಾರೆನ್ನಲಾಗಿದೆ.

ಈ ಮಧ್ಯೆ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿರುವ ತಮ್ಮ ಕಚೇರಿಯ ಮುಂದಿದ್ದ ‘ಶಾಸಕರ ಕಚೇರಿ’ ಎಂಬ ಫಲಕವನ್ನು ತೆರುವುಗೊಳಿಸಿರುವುದು ಹೊಸ ಬೆಳವಣಿಗೆಯಾಗಿದ್ದು, ಸಚಿವ ಸ್ಥಾನದ ಜತೆಗೆ ಶಾಸಕ ಸ್ಥಾನಕ್ಕೂ ಅವರು ರಾಜೀನಾಮೆ ನೀಡುವರೆಂಬ ಸುದ್ದಿ ವ್ಯಾಪಕವಾಗಿ ಹರಡಿದೆ.

ಇಂಧನ ಇಲ್ಲವೇ ಲೋಕೋಪಯೋಗಿ ಖಾತೆ ಬಗ್ಗೆ ಕಣ್ಣಿಟ್ಟಿದ್ದ ಆನಂದ್ ಸಿಂಗ್‌ಗೆ ಪರಿಸರ ಮತ್ತು ಪ್ರವಾಸೋದ್ಯಮ ಖಾತೆ ನೀಡಲಾಗಿತ್ತು. ಇದು ಪ್ರಕಟವಾಗುತ್ತಲೇ ‘ವಿಜಯನಗರದ ವೀರಪುತ್ರ’ತಮ್ಮ ಆಕ್ರೋಶವನ್ನು ಮಾಧ್ಯಮಗಳ ಮೂಲಕ ಹೊರಹಾಕಿದ್ದರು.

ತಾವು ಪಕ್ಷಕ್ಕೆ ಸಲ್ಲಿಸಿದ ಸೇವೆ ಪರಿಗಣಿಸಿಲ್ಲ ಎಂದು ರೋಷದಿಂದ ಹೇಳಿದ್ದರು. ಪ್ರಬಲ ಖಾತೆ ನಿಭಾಯಿಸುವ ಯೋಗ್ಯತೆ ತಮಗೆ ಇಲ್ಲವೆಂದರೆ ಅದನ್ನಾದರೂ ಹೇಳಬೇಕೆಂದು ಆಗ್ರಹಿಸಿದ್ದರು.

Team Newsnap
Leave a Comment
Share
Published by
Team Newsnap

Recent Posts

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024