ಮಾಜಿ ಶಾಸಕ ಎ. ಮಂಜು ಕಾಂಗ್ರೆಸ್ ಸೇರ್ಪಡೆಗೆ ಕಸರತ್ತು?

Team Newsnap
1 Min Read

ಹಾಸನದ ಬಿಜೆಪಿ ನಾಯಕ ಎ. ಮಂಜು ಮತ್ತೆ ಕಾಂಗ್ರೆಸ್​ಗೆ ವಾಪಸ್ಸು ಬರುತ್ತಾರೆ ಎಂಬ ಪರೋಕ್ಷ ಸಂದೇಶ ಬೆಂಬಲಿಗರ ಮೂಲಕ ಡಿಕೆಶಿಗೆ ರವಾನೆ ಮಾಡಿ, ತೆರೆ ಮರೆಯಲ್ಲಿ ಕಾಂಗ್ರೆಸ್ ಸೇರುವ ಕಸರತ್ತು ಆರಂಭಿಸಿದ್ದಾರೆಂದು ಗೊತ್ತಾಗಿದೆ.

ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದವರು ಅರಕಲಗೂಡು ಮಾಜಿ ಶಾಸಕ ಎ ಮಂಜು. 2019ರಲ್ಲಿ ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಸ್ಪರ್ಧಿಸಿ ಪರಾಜಿತಗೊಂಡರು.

ಈಗ ಬಿಜೆಪಿಗೆ ಗುಡ್​ ಬೈ ಹೇಳಿ ಕಾಂಗ್ರೆಸ್ ಕದ ತಟ್ಟಲು ಸಜ್ಜಾಗಿದ್ದಾರೆ ಎಂದು ಗೊತ್ತಾಗಿದೆ.

ಬೆಂಗಳೂರಿನಲ್ಲಿ ಶನಿವಾರ ಸದಾಶಿವನಗರದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನಿವಾಸಕ್ಕೆ ​​ಎ. ಮಂಜು ಬೆಂಬಲಿಗರು ಭೇಟಿ ನೀಡಿದ್ದರು.

ಈ ವೇಳೆ ಹೇಗಾದರೂ ಸರಿ ಮತ್ತೆ ಎ. ಮಂಜುರನ್ನು ಕಾಂಗ್ರೆಸ್​ಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಬಿಜೆಪಿ ತೊರೆದಿರುವ ಎ. ಮಂಜು ತನ್ನ ಬೆಂಬಲಿಗರ ಮೂಲಕ ಕಾಂಗ್ರೆಸ್​ ಸೇರಲು ಡಿ.ಕೆ ಶಿವಕುಮಾರ್​ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂದು ಹೇಳಲಾಗಿದೆ.

Share This Article
Leave a comment