ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಆರಂಭದ ಬಗ್ಗೆ ಮತ್ತೆ ಚರ್ಚೆಗಳು ಆರಂಭವಾಗಿವೆ. ನವೆಂಬರ್ ನಂತರ ಶಾಲೆಗಳು ಪುನರಾರಂಭವಾಗಬಹುದು ಎನ್ನಲಾಗುತ್ತಿದೆ.
ಕೇಂದ್ರ ಸರ್ಕಾರ ಅನ್ಲಾಕ್ 5.0 ಮಾರ್ಗಸೂಚಿಯನ್ನು ನವೆಂಬರ್ 30, 2020ರವರೆಗೆ ವಿಸ್ತರಣೆ ಮಾಡಿತ್ತು. ಅಲ್ಲದೇ ನವೆಂಬರ್ 30ರವರೆಗೆ ಶಾಲೆಗಳನ್ನು ಆರಂಭಿಸದಂತೆ ಆದೇಶ ಕೂಡ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲೆಗಳ ಆರಂಭದ ಬಗ್ಗೆ ಸದ್ಯದಲ್ಲಿಯೇ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದು ಬಂದಿದೆ.
ನವೆಂಬರ್ 17 ಪದವಿ ಕಾಲೇಜು
ಜೊತೆಗೆ ನವೆಂಬರ್ 2ರಿಂದ ಶಾಲಾ ಶಿಕ್ಷಕರು, ಸಿಬ್ಬಂದಿಗಳು ಮುಂದಿನ ಆದೇಶದವರೆಗೆ ಶಾಲೆಗಳಿಗೆ ಹಾಜರಾಗುವಂತೆ ಸೂಚಿಸಲಾಗಿದೆ. ಆದರೆ ವಿದ್ಯಾಗಮ ಸೇರಿದಂತೆ ಯಾವುದೇ ಶೈಕ್ಷಣಿಕ ಚಟುವಟಿಕೆಗಳನ್ನು ನಡೆಸುವಂತಿಲ್ಲ. ಈಗಾಗಲೇ ನ.17ರಿಂದ ಪದವಿ ಹಾಗೂ ಸ್ನಾತಕೋತ್ತರ ಕಾಲೇಜುಗಳನ್ನು ಪುನಾರಂಭಿಸಲು ಅನುಮತಿ ನೀಡಲಾಗಿದೆ.
ನವೆಂಬರ್ 2 ರಂದು ಸಭೆ
ಶಾಲೆಗಳ ಪುನರಾರಂಭದ ಬಗ್ಗೆ ಸಾರ್ಜಜನಿಕ ಶಿಕ್ಷಣ ಇಲಾಖೆ ನವೆಂಬರ್ ೨ರಂದು ಸಭೆಯನ್ನು ಕರೆದಿದೆ ಎನ್ನಲಾಗಿದೆ. ಅಂದು ನಡೆಯಲಿರುವ ಸಭೆಯಲ್ಲಿ ರಾಜ್ಯದಲ್ಲಿ ಶಾಲೆಗಳ ಆರಂಭ ಕುರಿತಂತೆ ಚರ್ಚೆ ನಡೆಸಲಿದೆ. ಈ ಸಭೆಯಲ್ಲಿನ ಚರ್ಚೆಯ ನಂತರ ಮುಖ್ಯಮಂತ್ರಿಗಳು ಶಿಕ್ಷಣ ತಜ್ಞರೊಂದಿಗೆ ಚರ್ಚಿಸಲಿದ್ದಾರೆ. ಆ ನಂತರ ಶಾಲೆಗಳನ್ನು ಪುನರಾರಂಭಿಸಬೇಕೇ ಅಥವಾ ಈ ವರ್ಷವನ್ನು ಶೂನ್ಯ ವರ್ಷ ಎಂದು ಪರಿಗಣಿಸಬೇಕೇ ಎಂಬ ಬಗ್ಗೆ ನಿರ್ಧಾರ ಹೊರಬೀಳಲಿದೆ.
ಶಿಕ್ಷಣ ಇಲಾಖೆಯ ಮೂಲಗಳಂತೆ ಮಾಹಿತಿಯ ಪ್ರಕಾರ, ನವೆಂಬರ್ ಕೊನೆಯ ವಾರದಲ್ಲಿ ಶಾಲೆಗಳ ಪುನರಾರಂಭದ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತಿದೆ. ಇದರಿಂದಾಗಿ ರಾಜ್ಯದಲ್ಲಿನ ಶಾಲೆ ಆವರಣ, ಶಾಲಾ ಕೊಠಡಿಗಳನ್ನು
ಸ್ವಚ್ಛಗೊಳಿಸುವಂತೆಯೂ ಸೂಚಿಸಿದೆ ಎನ್ನಲಾಗಿದೆ.
ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More
ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More
ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More
ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More
ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More
This website uses cookies.
Leave a Comment