ಐಪಿಎಲ್ 20-20ಯ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 82 ರನ್ಗಳ ಅದ್ಭುತ ವಿಜಯ ಸಾಧಿಸಿತು.
ದುಬೈನ ಶಾರ್ಜಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ ಆಕರ್ಷಕ ಪ್ರದರ್ಶನ ತೋರಿತು.
ಆರ್ಸಿಬಿಯ ಆರಂಭಿಕ ಬ್ಯಾಟ್ಸ್ಮನ್ಗಳಾಗಿ ಮೈದಾನಕ್ಕಿಳಿದ ಆರೋನಾ ಫಿಂಚ್ ಹಾಗೂ ದೇವದತ್ ಪಡಿಕಲ್ ಆಟಕ್ಕೆ ಉತ್ತಮ ಆರಂಭ ನೀಡಿದರು. ಫಿಂಚ್ 37 ಎಸೆತಗಳಲ್ಲಿ 47 ರನ್ ಗಳಿಕೆ ಮಾಡಿದರೆ, ಪಡಿಕ್ಕಲ್ 23 ಎಸೆತಗಳಿಗೆ 32 ರನ್ ಗಳಿಸಿದರು. ಪಡಿಕ್ಕಲ್ ನಂತರ ಮೈದಾನಕ್ಕೆ ಬಂದ ವಿರಾಟ್ ಕೊಹ್ಲಿ 28 ಬಾಲ್ಗಳಿಗೆ 33 ರನ್ ಗಳಿಸಿದರು. ಫಿಂಚ್ ಪೆವಿಲಿಯನ್ ಸೇರಿದ ನಂತರ ಮೈದಾನದಲ್ಲಿ ಅಬ್ಬರಿಸಿದ ಎಬಿ ಡಿ ವೀಲಿಯರ್ಸ್ 33 ಬಾಲ್ಗಳಿಗೆ 73 ರನ್ಗಳ ದೊಡ್ಡ ಮೊತ್ತವನ್ನು ತಂಡಕ್ಕೆ ನೀಡಿ ತಂಡ ಗೆಲ್ಲುವಲ್ಲಿ ಸಹಕಾರಿಯಾದರು. ಆರ್ಸಿಬಿ ತಂಡವು 20 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 194 ರನ್ ಗಳಿಸಿತು.
ಆರ್ಸಿಬಿ ನೀಡಿದ ಗುರಿಯನ್ನು ಬೆನ್ನಟ್ಟುವ ನಿಟ್ಟಿನಲ್ಲಿ ಕೆಕೆಆರ್ ತಂಡದಿಂದ ಟಿ. ಬಂಟನ್ ಹಾಗೂ ಶುಭಮನ್ ಗಿಲ್ ಅವರು ಆರಂಭಿಕ ಬ್ಯಾಟ್ಸ್ಮನ್ ಗಳಾಗಿ ಮೈದಾನಕ್ಕಿಳಿದರು. ಬಮನಟನ್ ಅವರು ಜೇವಲ8 ರನ್ಗಳಿಗೆ ಪೆವಿಯನ್ ಸೇರಿಕೊಂಡರು. ಗಿಲ್ ಅವರು 25 ಬಾಲ್ಗಳಿಗೆ 34 ರನ್ ಗಳಿಸಿ ತಂಡವನ್ನು ಮುನ್ನಡೆಸಲು ಪ್ರಯತ್ನಿಸಿದರೂ ಉಳಿದ ಆಟಗಾರರಲ್ಲಿ ಸಹಕಾರದ ಕೊರತೆ ಎದ್ದು ಕಂಡಿತು. ಕೆಕೆಆರ್ ತಂಡ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 112 ರನ್ ಗಳಿಸಿ ಸೋತಿತು.
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಗೋವಿಂದಪ್ಪ ಸಿದ್ದಾಪುರ ಎಂಬುವರು… Read More
This website uses cookies.
Leave a Comment