Main News

ಡಿವೈಎಸ್ಪಿ ಲಕ್ಷ್ಮೀ ಗೆ ಮನು ಜೊತೆ ವಿವಾಹೇತರ ಸಂಬಂಧವಿತ್ತೆ?

ಡಿವೈಎಸ್ಪಿ ಲಕ್ಷ್ಮೀ ಆತ್ಮಹತ್ಯೆ ಹಿಂದೆ ಅಡಗಿರುವ ಸತ್ಯಗಳು ಪೋಲಿಸರ ತನಿಖೆಯಲ್ಲಿ ಬದಲಾಗುತ್ತಿವೆ.

ಪತಿಯಿಂದ ದೂರಿವಿದ್ದ ಡಿವೈಎಸ್‌ಪಿ ಲಕ್ಷ್ಮಿ ತಮ್ಮ ಆಪ್ತ ಸ್ನೇಹಿತ ಮನೋಹರ್ ಜೊತೆಗೆ ಅಕ್ರಮ ಸಂಬಂಧವನ್ನು ಹೊಂದಿದ್ದರು ಎನ್ನುವ ಸ್ಪೋಟಕ ಮಾಹಿತಿ ಹರಿದಾಡುತ್ತಿದೆ.

ಈ ಸಂಬಂಧದಿಂದಾಗಿ ತಾನು ಪತ್ನಿ, ಮಕ್ಕಳಿನಿಂದ ದೂರ ಉಳಿದಿದ್ದೆ ಎನ್ನುವ ಸಂಗತಿಯನ್ನು ಮನೋಹರ್ ವಿಚಾರಣೆ ವೇಳೆ ಬಾಯಿ ಬಿಟ್ಟಿದ್ದಾನೆ. ಈ ಮಾಹಿತಿಯನ್ನು ಬಂಧಿತರಾದ ಪ್ರಜ್ವಲ್ ಹಾಗೂ ಧರ್ಮೇಗೌಡ ಕೂಡ ಒಪ್ಪಿಕೊಂಡಿದ್ದಾರೆ ಎಂದು ಪೋಲಿಸ್ ಮೂಲಗಳು ಹೇಳಿವೆ.

ಸಂಬಂಧ ಹೇಗೆ ಗಟ್ಟಿಯಾಯಿತು? :

ಪರಿಚಯಸ್ಥರ ಮೂಲಕ ಬಿಬಿಎಂಪಿ ಕ್ಲಾಸ್ 1 ಗುತ್ತಿಗೆದಾರ ಮನೋಹರ್ ಡಿವೈಎಸ್ಪಿ ಲಕ್ಷ್ಮಿಗೆ ಪರಿಚಯವಾಗಿದ್ದ. ಈ ನಡುವೆ ಮನು ಹಾಗೂ ಲಕ್ಷ್ಮಿ ಇಬ್ಬರ ನಡುವೆ ತೀರ ಆಪ್ತ ಸಂಬಂಧ ಶುರುವಾಯಿತು. ಮನುನನ್ನು ಲಕ್ಷ್ಮಿ ತೀರ ಹಚ್ಚಿಕೊಂಡಿದ್ದರು. ಲಾಕ್‌ ಡೌನ್‌ ಟೈಮ್‌ ನಲ್ಲಿ ಇವರಿಬ್ಬರನ್ನು ಇನ್ನಿಲ್ಲದ ಹಾಗೇ ಹತ್ತಿರ ಮಾಡಿತ್ತು ಎನ್ನಲಾಗಿದೆ.

ಈ ಸಂಬಂಧ ಎಲ್ಲಿಯವರೆಗೂ ಮುಂದುವರೆದಿತ್ತು ಎಂದರೆ ನೀನು ನಿನ್ನ ಹೆಂಡತಿ ಮಕ್ಕಳನ್ನು ಬಿಟ್ಟು ಬರೆಬೇಕು ನನ್ನ ಜೊತೆಯಲ್ಲಿ ಇರಬೇಕು ಎಂದು ಲಕ್ಷ್ಮೀ ಹಠ ಮಾಡುವಷ್ಟು ಅತಿರೇಕಕ್ಕೆ ಹೋಗಿತ್ತು ಎಂದು ಹೇಳಲಾಗಿದೆ. ಈ ಕಾರಣ ಮನು, ಲಕ್ಷ್ಮೀ ನಡುವೆ ಕೆಲವು ಬಾರಿ ಗಲಾಟೆ ಮಾಡಿದ್ದರು.

ಇದೇ ವಿಷಯಕ್ಕೆ ಲಕ್ಷ್ಮಿ ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರಂತೆ. ಲಕ್ಷ್ಮಿ ಮನು ವಿಶಯದಲ್ಲಿ ತೀರ ಸೆನ್ಸಿಟಿವ್‌ ಆಗಿ ನಡೆದುಕೊಳ್ಳುತ್ತಿದ್ದರಂತೆ. ಇದಲ್ಲದೇ ಲಕ್ಷ್ಮಿ ಆತ್ಮಹತ್ಯೆ ಮಾಡಿಕೊಳ್ಳುವ ದಿನ ನಡೆದ ಪಾರ್ಟಿಯಲ್ಲಿ ಗುಂಡಿನ ಗಮ್ಮತ್ತಿನಲ್ಲಿ ಗಲಾಟೆ ಮಾಡಿ ಕೊಂಡಿದ್ದಾರೆ. ಲಕ್ಷ್ಮೀ ಚೀರಾಟ ಕೂಗಾಟ ಮಾಡಿದ್ದಾರೆ. ಕೊನೆಗೆ ರೂಂ ಗೆ ನೇಣು ಹಾಕಿಕೊಂಡಿದ್ದಾರೆ.

ಒಟ್ಟಿನಲ್ಲಿ ಲಕ್ಷ್ಮಿ ಬಗ್ಗೆ ಹರಿದಾಡುತ್ತಿರುವ ಅನೈತಿಕ ಸಂಬಂಧದ ಬಗ್ಗೆ ಪೊಲೀಸ್‌ ಇಲಾಖೆಯ ತನಿಖೆಯಿಂದಲೇ ತಿಳಿದು ಬರಬೇಕಾಗಿದೆ. ಲಕ್ಷ್ಮಿ ಅವರ ಚಾರಿತ್ರ್ಯದ ಬಗ್ಗೆ ನಾನಾ ಮಂದಿ ನಾನಾ ರೀತಿಯಲ್ಲಿ ಮಾತನಾಡುತ್ತಿದ್ದಾರೆ, ಈ ಬಗ್ಗೆ ಸತ್ಯ ಹೊರ ಬಂದರೇ ಎಲ್ಲದಕ್ಕೂ ಉತ್ತರ ಸಿಗಲಿದೆ

Team Newsnap
Leave a Comment
Share
Published by
Team Newsnap
Tags: DYSP

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024