February 24, 2026

Newsnap Kannada

The World at your finger tips!

delhi granny

ಅಂತ್ಯ ಸಂಸ್ಕಾರಕ್ಕೆ ಸಿದ್ದತೆ ನಡೆಯುವಾಗ ಎದ್ದು ಕುಳಿತ ವೃದ್ಧೆ !

Spread the love

ನವದೆಹಲಿ: ಅಂತ್ಯಸಂಸ್ಕಾರಕ್ಕೆ ಸಿದ್ದತೆ ನಡೆಸುವಾಗ ಕೊನೆ ಕ್ಷಣದಕಲ್ಲಿ ವೃದ್ಧೆ ಕಣ್ಣುಬಿಟ್ಟು ಕುಳಿತ ಘಟನೆ ಮಹಾರಾಷ್ಟ್ರ ದಲ್ಲಿ‌ ಜರುಗಿದೆ.‌

ಶಾಕುಂತಲಾ(76) ಎಂಬ ವೃದ್ದೆ ಕೊರೊನಾಗೆ ಬಲಿಯಾಗಿದ್ದರು.‌

ಮಹಾರಾಷ್ಟ್ರದ ಬಾರಾಮತಿ ಜಿಲ್ಲೆಯ ಮುಧಲೆ ಗ್ರಾಮದ ನಿವಾಸಿಯಾಗಿರುವ ಶಕುಂತಲಾ ಕಳೆದ ಕೆಲ ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಅವರಿಗೆ ಚಿಕಿತ್ಸೆ ನೀಡಿ ಆರೋಗ್ಯ ಸ್ಥಿತಿ ಹದಗೆಟ್ಟಾಗ ಬಾರಾಮತಿಗೆ ಕರೆದುಕೊಂಡು ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಶಾಕುಂತಲಾ ಪ್ರಜ್ಞೆತಪ್ಪಿದ್ದರು.

ಇದನ್ನು ಅರಿಯದ ಕುಟುಂಬಸ್ಥರು ಶಾಕುಂತಲಾ ಸಾವನ್ನಪ್ಪಿದಳು ಎಂದು ಗ್ರಾಮದವರಿಗೆ ತಿಳಿಸಿದರು. ಅದರಂತೆ ಗ್ರಾಮದಲ್ಲಿ ಅಂತಿಮ ಸಂಸ್ಕಾರಕ್ಕೆ ಸಿದ್ದತೆ ನಡೆಸಲು ಸೂಚಿಸಿದ್ದರು.

ಆದರೆ ಶಕುಂತಲಾ ಏಕಾಏಕಿ ಕಣ್ಣು ಬಿಟ್ಟು ಎದ್ದು ಕುಳಿತು ಕಣ್ಣೀರು ಹಾಕಿದ್ದಾರೆ. ಕುಟುಂಬಸ್ಥರು ಶಕುಂತಲಾ ಎದ್ದು ಕುಳಿತಿರುವುದನ್ನು ಆಶ್ಚರ್ಯ ಪಟ್ಟಿದ್ದಾರೆ. ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಲಾಯಿತು. ಈಗ ಆ ವೃದ್ದೆ
ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದಾರೆ.

error: Content is protected !!