ಅಪರಿಚಿತ ಯುವತಿ ಯುವಕನೊಬ್ಬನಿಗೆ ವೀಡಿಯೋ ಕಾಲ್ ಮಾಡಿ, ಬಳಿಕ ಅದರ ರೆಕಾರ್ಡ್ಗಳನ್ನು ಇಟ್ಟುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟ ಪ್ರಕರಣ ಕುರಿತು ಮೈಸೂರಿನ ಸೈಬರ್ ಕ್ರೈಂ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ
ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಯುವಕ ವಾಸುವಿಗೆ ಭಾನುವಾರ ಬೆಳಗ್ಗೆ ಯುವತಿಯೊಬ್ಬಳಿಂದ ವೀಡಿಯೋ ಕಾಲ್ ಬಂದಿದೆ.ಇದನ್ನು ಓದಿ –ಕಷ್ಟಗಳಿಗೆ ಹೆದರಿ ಮಗು ಕೊಂದು ಅತ್ಮಹತ್ಯೆಗೆ ಯತ್ನಿಸಿದ ತಾಯಿಯ ಸ್ಥಿತಿ ಗಂಭೀರ
ಆಕೆ ವೀಡಿಯೋ ಕಾಲ್ ಮಾಡುವುದಕ್ಕೂ ಮುನ್ನ ತನ್ನನ್ನು ಅಮೃತ ಎಂದು ಪರಿಚಯ ಮಾಡಿಕೊಂಡು ಚ್ಯಾಟ್ ಮಾಡಿದ್ದಾಳೆ. ಬಳಿಕ ವೀಡಿಯೋ ಕಾಲ್ ಮಾಡುತ್ತಲೇ ನಗ್ನಳಾಗಿದ್ದಾಳೆ.
ಯುವತಿಯ ಅವಸ್ಥೆ ಕಂಡು ಕಸಿವಿಸಿಗೊಂಡ ವಾಸು ತಕ್ಷಣವೇ ವೀಡಿಯೋ ಕಾಲ್ ಅನ್ನು ಕಟ್ ಮಾಡಿದ್ದಾನೆ. ಆದರೆ ಬಳಿಕ ಅದೇ ವೀಡಿಯೋ ಕಾಲ್ನ ರೆಕಾರ್ಡ್ ಇಟ್ಟುಕೊಂಡು ಯುವತಿ ಹಣಕ್ಕಾಗಿ ಡಿಮಾಂಡ್ ಮಾಡಿದ್ದಾಳೆ.
ಹಣ ಕೊಡದೇ ಹೋದರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವುದಾಗಿ ಬೆದರಿಕೆಯನ್ನೂ ಒಡ್ಡಿದ್ದಾಳೆ.
ಈ ಹಿನ್ನೆಲೆ ವಾಸು ತಕ್ಷಣವೇ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾನೆ. ಈ ಬಗ್ಗೆ ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಜಪ್ತಿ
- ಇಂದು ಕೆ.ಪಿ. ನಂಜುಂಡಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ
- ರಾಜಕೀಯ ಸ್ವಾರ್ಥಕ್ಕಾಗಿ ನೆರೆ ರಾಜ್ಯಕ್ಕೆ ಕಾವೇರಿ ನೀರು ಮಾರಿಕೊಂಡ ಕಾಂಗ್ರೆಸ್!
- Bengaluru Airport : ವಿಮಾನದಲ್ಲಿ ಅಕ್ರಮವಾಗಿ 10 ಅನಕೊಂಡ ಹಾವುಗಳ ಕಳ್ಳಸಾಗಾಟ
- ಏಪ್ರಿಲ್ 26ರಂದು ಮೈಸೂರಿನ ಪ್ರವಾಸಿ ತಾಣಗಳು ಬಂದ್
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India