ಎಂಬಿಎ ಪದವೀಧರೆ ಯುವತಿಗೆ ಉದ್ಯೋಗ ಸಿಗದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ. ಸಹನಾ (23) ವಿಷ ಸೇವಿಸಿ ಸಾವಿಗೆ ಶರಣಾದ ಯುವತಿ.
ಸಹನಾ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಕಟ್ಟಿಂಗೇರಿಯ ಅಕ್ಕನ ಮನೆಗೆ ಬಂದಾಗ ವಿಷ ಸೇವನೆ ಮಾಡಿದ್ದಾಳೆ. ಉಡುಪಿಯ ಮಿಷನ್ ಆಸ್ಪತ್ರೆ, ಕೆಎಂಸಿ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಹನಾ ಮೃತಪಟ್ಟಿದ್ದಾಳೆ.
ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ವಿಷ ಸೇವಿಸಿದ್ದಾಳೆ ಎಂದು ಸಹನಾ ಪೋಷಕರು ಹೇಳಿದ್ದಾರೆ. ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಮಾಡಿದ್ದಳು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ