ದೇಶಾದ್ಯಂತ ಶತಕೋಟಿ ಲಸಿಕೆ ಹಾಕಿಸಿದ ಸಂಭ್ರಮ ಆಚರಣೆಯಾದ ಬೆನ್ನಲ್ಲೇ ಶನಿವಾರ ಬೆಳಗ್ಗೆ ಲಸಿಕೆ ಪಡೆದ ಮಹಿಳೆಯೊಬ್ಬರು ಕೆಲವೇ ಕ್ಷಣಗಳಲ್ಲಿ ಸಾವಿಗೀಡಾಗಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿ ಮಂಗಳಾ (36) ಎಂಬ ಮಹಿಳೆ ಬೆಳಗ್ಗೆ ಹೆಗ್ಗನಹಳ್ಳಿಯ ಸರ್ಕಾರಿ ಆಸ್ಪತ್ರೆಯಲ್ಲಿ ಕರೊನಾ ಲಸಿಕೆ ಪಡೆದು ಮನೆಗೆ ಮರಳುವಷ್ಟರಲ್ಲಿ ಸಾವಿಗೀಡಾಗಿದ್ದಾರೆ.
ಲಸಿಕೆ ಹಾಕಿಸಿಕೊಂಡು ಮರಳುತ್ತಿದ್ದ ಮಂಗಳಾ, ಮನೆ ಸಮೀಪದ ಮಾರುಕಟ್ಟೆ ಬಳಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.
ಕೂಡಲೇ ಸಾರ್ವಜನಿಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಂಗಳಾ ಮೃತಪಟ್ಟಿದ್ದಾರೆ.
ಮಂಗಳಾ ಸಾವಿಗೆ ನಿಜವಾದ ಕಾರಣ ಏನು ಎಂಬುದು ಇನ್ನೂ ಖಚಿತವಾಗಿ ತಿಳಿದುಬಂದಿಲ್ಲ.
ವೈದ್ಯಕೀಯ ಪರೀಕ್ಷೆ ವರದಿ ಬಂದ ಬಳಿಕವಷ್ಟೇ ಸಾವಿಗೆ ಏನು ಕಾರಣ ಅಂತ ನಿಖರವಾಗಿ ತಿಳಿಯಲಿದೆ. ಸದ್ಯ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ