ಲಾಭದ ಆಮಿಷವೊಡ್ಡಿ ಉದ್ಯಮಿಗೆ ಮಹಿಳೆಯೊಬ್ಬಳು 32 ಲಕ್ಷ ರು ಲಕ್ಷಾಂತರ ರು ವಂಚಿಸಿರುವ ಘಟನೆ ಬಗ್ಗೆ ಹುಬ್ಬಳ್ಳಿಯ ಸೈಬರ್ ಕ್ರೈಂ ಬ್ರಾಂಚ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹುಬ್ಬಳ್ಳಿಯ ಹೆಗ್ಗೇರಿ ಕಾಲೋನಿಯ ಉದ್ಯಮಿ ಗುರುಮೂರ್ತಿ ಎಂಬವರೇ ಮೋಸ ಹೋದವರು.
ಇವರಿಗೆ ಅಪರಿಚಿತರೊಬ್ಬರು ಪ್ಲಿಪ್ಕಾರ್ಟ್ ಕಂಪನಿಯ ಪ್ರಾಜೆಕ್ಟ್ನಲ್ಲಿ ಹೂಡಿಕೆ ಮಾಡಿದರೆ ಭರ್ಜರಿ ಲಾಭ ಗಳಿಸಬಹುದು ಎಂದು ನಂಬಿಸಿ ಬರೋಬ್ಬರಿ 32 ಲಕ್ಷ ವಂಚನೆ ಮಾಡಿದ್ದಾರೆ.
ದೂರುದಾರರಿಗೆ ಅಪರಿಚಿತ ಮಹಿಳೆ ಲಕ್ಷ್ಮೀ ಮೆಹರ್ ಎಂಬ ಹೆಸರಿನಲ್ಲಿ ಪರಿಚಯಿಸಿಕೊಂಡಿದ್ದಾಳೆ. ಪ್ಲಿಪ್ಕಾರ್ಟ್ ಕಂಪನಿಯ ಪ್ರಾಜೆಕ್ಟ್ ನಲ್ಲಿ ಹೂಡಿಕೆ ಮಾಡಿದರೆ ತುಂಬಾ ಲಾಭ ಗಳಿಸಬಹುದು ಎಂದು ಹೇಳಿ ವಿವಿಧ ಬ್ಯಾಂಕ್ ಖಾತೆಗಳಿಂದ ಹಂತ ಹಂತವಾಗಿ ಒಟ್ಟು 32 ಲಕ್ಷ ರೂ.ಗಳನ್ನು ಆನ್ಲೈನ್ ಮೂಲಕ ತನ್ನ ಖಾತೆಗೆ ವರ್ಗಾವಣೆ ಮಾಡಿಕೊಂಡು ಮೋಸ ಮಾಡಿದ್ದಾರೆ.
ಪದೇ ಪದೇ ಹಣ ಹಾಕು ಎಂದು ಕೇಳುತ್ತಿದ್ದಾಗ ವಂಚನೆ ಮಾಡಿರುವುದು ಬೆಳಕಿಗೆ ಬಂದಿದೆ.