crime

ಪ್ರೀತಿಯನ್ನು ಒಪ್ಪಿಕೊಳ್ಳದ ಯುವತಿಗ 14 ಬಾರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿ

ಪ್ರೇಮ ನಿವೇದನೆಯನ್ನು ಒಪ್ಪಲಿಲ್ಲ ಎಂಬ ಕಾರಣಕ್ಕಾಗಿ ಯುವಕನೊಬ್ಬ ವಿದ್ಯಾರ್ಥಿನಿಯನ್ನು 14 ಬಾರಿ ಇರಿದು, ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.

ಇದನ್ನು ಓದಿ –ರಾಜ್ಯಾದ್ಯಂತ ಏಕಕಾಲಕ್ಕೆ 50 ಕಡೆಗಳಲ್ಲಿ IT ದಾಳಿ: ಬೆಂಗಳೂರಿನ ಉದ್ಯಮಿಗಳಿಗೆ ಶಾಕ್

ತಮಿಳುನಾಡಿನ ತಿರುಚ್ಚಿಯಲ್ಲಿ 16 ವರ್ಷದ ವಿದ್ಯಾರ್ಥಿನಿ ಪ್ರೀತಿಯನ್ನು ನಿರಾಕರಿಸಿದ್ದಕ್ಕಾಗಿ 22 ವರ್ಷದ ಯುವಕ ಚಾಕುವಿನಿಂದ 14 ಬಾರಿ ಇರಿದಿದ್ದಾನೆ.

ಈ ಆರೋಪಿಯನ್ನು ಕೇಶವನ್ ಎಂದು ಗುರುತಿಸಲಾಗಿದೆ, ಪೊಲೀಸರು ಆತನನ್ನು ಹುಡುಕಲು ಮೂರು ವಿಶೇಷ ತಂಡಗಳನ್ನು ರಚಿಸಿಕೊಂಡಿದ್ದರು. ಆದರೆ ಅವನು ಶವವಾಗಿ ಪತ್ತೆಯಾಗಿದ್ದಾನೆ

ತಿರುಚ್ಚಿಯ ಅತಿಕುಲಂ ನಿವಾಸಿಯಾಗಿರುವ ವಿದ್ಯಾರ್ಥಿನಿ 11ನೇ ತರಗತಿ ಓದುತ್ತಿದ್ದಳು. ಪರೀಕ್ಷೆ ಮುಗಿಸಿ ಸಂತ್ರಸ್ತೆ ತನ್ನ ಸಂಬಂಧಿಯನ್ನು ಭೇಟಿಯಾಗಲು ತೆರಳುತ್ತಿದ್ದಾಗ ಆರೋಪಿ ಕೇಶವನ್ ಆಕೆಯನ್ನು ಹಿಂಬಾಲಿಸಿಕೊಂಡು ರೈಲ್ವೇ ಮೇಲ್ಸೇತುವೆ ಬಳಿ ತಡೆದಿದ್ದಾನೆ.

ಈ ವೇಳೆ ಕೇಶವನ್ ಸಂತ್ರಸ್ತೆಯನ್ನು ಪ್ರೀತಿಸುವಂತೆ ಒತ್ತಾಯಿಸಿದ್ದಾನೆ. ಆದರೆ ಆಕೆ ನಿರಾಕರಿಸಿದಳು
ತಕ್ಷಣ ಅವಳನ್ನು 14 ಬಾರಿ ಚುಚ್ಚಿದ್ದಾನೆ. ಸಹಾಯಕ್ಕಾಗಿ ಸಂತ್ರಸ್ತೆ ಕಿರುಚಿಕೊಂಡಿದ್ದಾಳೆ ಆರೋಪಿ ಚಾಕನ್ನು ಅಲ್ಲೇ ಎಸೆದು ಓಡಿ ಹೋಗಿದ್ದಾನೆ.

ಶವವಾಗಿ ಪತ್ತೆಯಾದ ಆರೋಪಿ :
ಈ ಘಟನೆಯನಂತರ ಮಂಗಳವಾರ ರಾತ್ರಿ ರೈಲ್ವೆ ಹಳಿ ಮೇಲೆ ಆರೋಪಿ ಕೇಶವನ್ ಶವವಾಗಿ ಪತ್ತೆಯಾಗಿದ್ದಾನೆ. ಕೇಶವನ್‍ನನ್ನು ಹಿಡಿಯಲು ಪೊಲೀಸರು ಮೂರು ತಂಡಗಳನ್ನು ರಚಿಸಿದಾಗ, ಮನಪ್ಪರೈ ಬಳಿಯ ರೈಲ್ವೆ ಹಳಿಗಳ ಮೇಲೆ ಶವವೊಂದು ಪತ್ತೆಯಾಗಿದೆ. ಪೊಲೀಸರು ಸ್ಥಳಕ್ಕೆ ಹೋಗಿ ಶವದ ಪಕ್ಕದಲ್ಲಿದ್ದ ಫೋನ್‍ನಲ್ಲಿ ಅವರ ಅಪ್ಪನಿಗೆ ಕರೆ ಮಾಡಿದ್ದಾರೆ. ಸ್ಥಳಕ್ಕೆ ಬಂದ ತಂದೆಯೂ ಅದು ಕೇಶವನ್ ಎಂದು ಗುರುತಿಸಿದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024