Trending

ದುಡ್ಡು ಜಾರಿ ಕೆಳಗೆ ಬಿತ್ತು ಸಾರ್ … ಸಿದ್ದರಾಮಯ್ಯರ ಕ್ಷಮೆ ಕೋರಿದ ಮುಸ್ಲಿಂ ಮಹಿಳೆ

ಬಾದಾಮಿಯ ಕೆರೂರು ಘರ್ಷಣೆ ಗಾಯಾಳುಗಳಿಗೆ ಸಾಂತ್ವನ ಹೇಳಿ, ಪರಿಹಾರವಾಗಿ ಕೊಟ್ಟಿದ್ದ 2 ಲಕ್ಷ ರೂ. ಹಣವನ್ನು ಮುಸ್ಲಿಂ ಮಹಿಳೆ ಸಿದ್ದರಾಮಯ್ಯರ ಕಾರಿನ ಮೇಲೆ ಎಸೆದಿದ್ದರು. ಆದರೆ ದುಡ್ಡು ಎಸೆದ ಮಹಿಳೆಯ ಸಹೋದರಿ ದಿಢೀರ್ ಯೂಟರ್ನ್ ಹೊಡೆದಿದ್ದು, ಸಿದ್ದರಾಮಯ್ಯ ಅವರಿಗೆ ಕ್ಷಮೆ ಕೋರಿದ್ದಾರೆ.

ದುಡ್ಡು ಎಸೆದ ಮಹಿಳೆ ರಜ್ಮಾ ಹಾಗೂ ಆಕೆಯ ಸಹೋದರಿ ಬಿಸ್ಮಿಲ್ಲಾ ಸಿದ್ದರಾಮಯ್ಯ ಅವರಿಗೆ ಕ್ಷಮೆ ಕೋರಿದ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ.

ನೀವು ನಮ್ಮ ಸಲುವಾಗಿ ಬಂದಿದ್ರೀ ಸರ್. ವೈಯಕ್ತಿಕ ಹಣ ಕೊಟ್ಟಿದ್ರಿ, ಆದ್ರೆ ನಾನು ನಮಗೆ ದುಡ್ಡು ಬೇಡ, ನ್ಯಾಯ ಬೇಕು ಎಂದು ನಿಮ್ಮ ಕಾರ್ ಬಳಿ ಬಂದೆವು. ಈ ವೇಳೆ ನಿಮ್ಮ ಕಾರು ಮುಂದೆ ಹೋದ ಪರಿಣಾಮ ನಮ್ಮ ಸಹೋದರಿ ಜಾರಿದ್ದರಿಂದ ದುಡ್ಡು ಕೆಳಗೆ ಬಿದ್ದಿತು ಎಂದು ಹೇಳಿದ್ದಾರೆ.

ಬಿಸ್ಮಿಲ್ಲಾ ಮಹಿಳೆ ಕೆರೂರು ಘರ್ಷಣೆಯಲ್ಲಿ ಗಾಯಗೊಂಡ ನಾಲ್ವರು ಸಹೋದರರ ಪೈಕಿ, ಮಹಮ್ಮದ್ ಹನೀಫ್ ಪತ್ನಿ.

ಕೆರೂರು ಗಲಭೆ ನಂತರ ನಡೆದ ಹಲ್ಲೆಯಿಂದಾಗಿ ಆಸ್ಪತ್ರೆಗೆ ದಾಖಲಾದ ಗಾಯಾಳುಗಳನ್ನು ಭೇಟಿ ಮಾಡಿ, ಗಾಯಾಳುಗಳಿಗೆ ಸಾಂತ್ವನ ಪರಿಹಾರ ನೀಡಲು ಮಾಜಿ ಸಿಎಂ ಸಿದ್ದರಾಮಯ್ಯ ಬಾಗಲಕೋಟೆ ಆಸ್ಪತ್ರೆಗೆ ಭೇಟಿ ಕೊಟ್ಟಿದ್ದರು. ‘ಚೆಸ್ ಬೋರ್ಡ್‌ʼನಂತೆ ಕಂಗೊಳಿಸುತ್ತಿದೆ ತಮಿಳುನಾಡಿನ ನೇಪಿಯರ್ ಸೇತುವೆ

ಈ ವೇಳೆ ಮುಸ್ಲಿಂ ಮಹಿಳೆ ನಮಗೆ ನ್ಯಾಯ ಬೇಕು. ದುಡ್ಡು ಬೇಡ ಎಂದು ಹೇಳಿದ್ದರೂ ಸಿದ್ದರಾಮಯ್ಯ ಬಲವಂತವಾಗಿ ದುಡ್ಡು ನೀಡಿದ್ದರು. ಅಲ್ಲಿಂದ ಮರಳಿ ಹಣವನ್ನು ವಾಪಸ್ ಕೊಡಲು ಕಾರು ಹಿಂಬಾಲಿಸಿದ ಮಹಿಳೆಯರನ್ನು ಸಿದ್ದರಾಮಯ್ಯ ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದರು.

ಆದರೆ ಮಹಿಳೆಯರು ಸಮಾಧಾನಕ್ಕೆ ಬಗ್ಗಲಿಲ್ಲ. ಆದರೆ ಇಲ್ಲಿಗೆ ಸುಮ್ಮನಾಗದ ಮಹಿಳೆ ರಾಜ್ಮ ಅವರು ಕಾರಿನ ಹಿಂದೆ ಹೋಗಿ ಹಣವನ್ನು ಬಿಸಾಕಿದ್ದಳು.

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024