ಶ್ರೀರಂಗಪಟ್ಟಣ :
ಆನೆಗಳ ಹಿಂಡು ದಾಳಿ ಮಾಡಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ಭಾನುವಾರ ಜರುಗಿದೆ
ಸಾಕಮ್ಮ ಲೇ. ಸಿದ್ದಪ್ಪ.(50) ಮೃತ ಕಾರ್ಮಿಕ ಮಹಿಳೆ.
ಭಾನುವಾರ ಬೆಳಿಗ್ಗೆ 8 ಗಂಟೆ ಸಮಯದಲ್ಲಿ ಜಮೀನಿನ ಬಳಿ ಕೆಲಸಕ್ಕೆ ಹೋಗಿದ್ದಾಗ ಸಲಗ ದಾಳಿ ಮಾಡಿದೆ.
ಸಾಕಮ್ಮ ಪೀಹಳ್ಳಿ ಗ್ರಾಮದ ಮಾಲೀಕ ರೋಬ್ಬರ ಜಮೀನಿಗೆ ಕೂಲಿ ಕೆಲಸಕ್ಕಾಗಿ ತೆರಳಿದ್ದರು ಇವರ ಜೊತೆ ಎಂಟಕ್ಕೂ ಹೆಚ್ಚು ಮಂದಿ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು
ಆನೆ ಪ್ರತ್ಯಕ್ಷವಾಗಿರುವ ಬಗ್ಗೆ ಯಾವುದೇ ಸುಳಿವು ಇಲ್ಲದ ಹಿನ್ನೆಲೆಯಲ್ಲಿ ಭಯ ಇಲ್ಲದೆ ಕೆಲಸ ಮಾಡುತ್ತಿದ್ದರು
ಕಬ್ಬಿನ ಗದ್ದೆಯಲ್ಲಿ ಬಿಡು ಬಿಟ್ಟಿದ್ದ ಆನೆಗಳ ಹಿಂಡಿನಲ್ಲಿದ್ದ ಸಲಗ ಈ ವೇಳೆ ಮಹಿಳೆಯರ ಮೇಲೆ ಏಕಾಏಕಿ ದಾಳಿ ಮಾಡಿದೆ. ತಪ್ಪಿಸಿಕೊಳ್ಳಲು ಸಾಕಮ್ಮ ಪ್ರಯತ್ನ ಮಾಡಿದರಾದರೂ ಅಷ್ಟರಲ್ಲಿ ಆನೆ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಇತರ ಕಾರ್ಮಿಕರು ಪಾರಾಗಿದ್ದಾರೆ,
ಅರಣ್ಯ ಇಲಾಖೆ ಸಿಬ್ಬಂದಿ ಆನೆ ಗಳ ಮೇಲೆ ಕಲ್ಲು ತೂರದಂತೆ ಮತ್ತು ಅವುಗಳ ಸಮೀಪ ಹೋಗದಂತೆ ಮನವಿ ಮಾಡಿದರೂ ರೊಚ್ಚಿಗೆದ್ದ ಜನತೆ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮಾಂತರ ಪೊಲೀಸರು ಮುಂದಿನ ಕ್ರಮ ವಹಿಸಿದ್ದಾರೆ.
- ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ
- SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ
- ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು
- ನಾಳೆ ( May 9 ) SSLC ಫಲಿತಾಂಶ ಪ್ರಕಟ
- ರಾಜ್ಯದ ಎರಡೂ ಹಂತದ ಮತದಾನದ ವಿವರ : ಮಂಡ್ಯ ಪ್ರಥಮ – ಬೆಂಗಳೂರು ದಕ್ಷಿಣ ಕೊನೆ
- ಹೆಚ್.ಡಿ ರೇವಣ್ಣಗೆ ಹೊಟ್ಟೆ ಉರಿ, ಎದೆನೋವು: ದಿಢೀರ್ ಆಸ್ಪತ್ರೆಗೆ ಶಿಫ್ಟ್!
- ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಇಬ್ಬರು ಸರ್ಕಾರಿ ನೌಕರರು ಸಾವು
- Lok Sabha Election 2024 : ಕರ್ನಾಟಕದಲ್ಲಿ ಶೇ. 9.45% ರಷ್ಟು ಮತದಾನ
- ಪ್ರಜ್ವಲ್ ಮಾತ್ರವಲ್ಲ , ತುಂಬ ರಾಜಕಾರಣಿಗಳ ವಿಡಿಯೋಗಳು ಸದ್ಯದಲ್ಲೇ ಹೊರಬರಲಿದೆ : ಕೆ ಎಸ್ ಈಶ್ವರಪ್ಪ