Trending

ಮದುವೆ ನಂತರ ಮಕ್ಕಳನ್ನು ಹೆರಲು ಆಧುನಿಕ ಮಹಿಳೆಯು ಬಯಸಲ್ಲ: ಸಚಿವ ಸುಧಾಕರ್

ಆಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸುತ್ತಾರೆ. ಮದುವೆ ಆದರೆ ಮಕ್ಕಳನ್ನು ಹೆರಲು ಬಯಸಲ್ಲ. ಇದು ಒಳ್ಳೆಯದಲ್ಲ ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಹೇಳಿರುವ ಮಾತುಗಳು ಇದೀಗ ವಿವಾದಕ್ಕೀಡಾಗಿದೆ.

ನಿಮ್ಹಾನ್ಸ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಚಿವರು, ವಿವಾಹಿತ ಸುಶಿಕ್ಷಿತ ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಪೇಚಿಗೆ ಸಿಲುಕಿದ್ದಾರೆ.

ಅವಿಭಕ್ತ ಕುಟುಂಬಗಳ ನಶಿಸುವಿಕೆ ವಿಚಾರ ಪ್ರಸ್ತಾಪದ ಸಚಿವರು
ಮುತ್ತಾತ-ಮುತ್ತಜ್ಜಿ ಇರುವುದು ಬಿಡಿ, ನಾವು ನಮ್ಮ ಹೆತ್ತವರು ನಮ್ಮ ಜೊತೆಗೆ ಇರಲು ಬಯಸಲ್ಲ. ಇವತ್ತು ಇದನ್ನು ಹೇಳಲು ಬೇಸರ ಆಗುತ್ತೆ ಎಂದರು

ಭಾರತದಲ್ಲಿ ಬಹಳಷ್ಟು ಅಧುನಿಕ ಮಹಿಳೆಯರು ಒಂಟಿಯಾಗಿರಲು ಬಯಸ್ತಾರೆ. ಒಂದು ವೇಳೆ ಅವರು ಮದುವೆ ಆದರೂ ಅವರು ಮಕ್ಕಳಿಗೆ ಜನ್ಮ ನೀಡಲು ಬಯಸಲ್ಲ. ಅವರು ಬೇರೆಯವರಿಗಾಗಿ ಮಗು ಹೆರಲು ಇಷ್ಟಪಡುತ್ತಾಳೆ. ಹೀಗಾಗಿ ನಮ್ಮ ಆಲೋಚನೆಯಲ್ಲಿ ವಿಚಿತ್ರ ಬದಲಾವಣೆ ಆಗಿದೆ, ಅದು ಒಳ್ಳೆಯದಲ್ಲ ಎಂದಿದ್ದಾರೆ.

ಬಹಳಷ್ಟು ಮಹಿಳೆಯರು ಮದುವೆಯಾದರೂ ಮಕ್ಕಳಿಗೆ ಜನ್ಮ ಕೊಡಲು ಹಿಂಜರಿಯುತ್ತಿದ್ದು, ಬಾಡಿಗೆ ತಾಯಂದಿರಿಂದ ಮಕ್ಕಳನ್ನು ಪಡೆಯುತ್ತಾರೆ. ಅವರ ಆಲೋಚನೆಯ ದೃಷ್ಟಿಕೋನವೇ ಸಂಪೂರ್ಣ ಬದಲಾಗಿದೆ. ಇಂತಹ ದೃಷ್ಟಿಕೋನ ಸೂಕ್ತವಲ್ಲ ಎಂದು ಹೇಳಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಚಿವರ ಹೇಳಿಕೆಗೆ ಭಾರೀ ಆಕ್ರೋಶ ಹಾಗೂ ಟೀಕೆ ವ್ಯಕ್ತವಾಗುತ್ತಿದೆ.

Team Newsnap
Leave a Comment
Share
Published by
Team Newsnap

Recent Posts

ಕ್ರೇಜಿವಾಲ್ ಗೆ ಮಧ್ಯಂತರ ಜಾಮೀನು ಪರಿಗಣನೆಗೆ ಸುಪ್ರೀಂ ಸೂಚನೆ

ನವದೆಹಲಿ : ಲೋಕಸಭೆ ಚುನಾವಣೆಯನ್ನು ಹಿನ್ನಲೆಯಲ್ಲಿ ರದ್ದಾಗಿರುವ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌… Read More

May 3, 2024

ಬಿಜೆಪಿ ಜೊತೆಗಿನ ಮೈತ್ರಿ ಸದ್ಯಕ್ಕೆ ನನಗೆ ಮುಖ್ಯ ಅಲ್ಲ: ಎಚ್ ಡಿ ಕೆ

ರಾಯಚೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತೀವ್ರ ಪೇಚಿಗೆ ಸಿಲುಕಿರುವ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ… Read More

May 3, 2024

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024