ಐಟಿ ಕಂಪನಿಗಳು ಕಚೇರಿಯನ್ನು ಶೀಘ್ರ ತೆರೆಯುವ ಅಗತ್ಯವಿಲ್ಲ. ಸಧ್ಯಕ್ಕೆ ವರ್ಕ್ ಫ್ರಂ ಹೋಂ ವ್ಯವಸ್ಥೆ ತುಂಬಾ ಸುರಕ್ಷಿತ. ಹೀಗಾಗಿ ಇನ್ನೂ ಕೆಲವು ತಿಂಗಳುಗಳ ಕಾಲ ಯಥಾ ಸ್ಥಿತಿ ಮುಂದುವರೆಸಿ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಗುರುವಾರ ವಿಧಾನಸಭೆ ಯಲ್ಲಿ ತಿಳಿಸಿದರು.
ಹೊಸಕೋಟೆಯ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಈ ಕೊರೊನಾ ಸಾಂಕ್ರಾಮಿಕ ರೋಗ ಕಡಿಮೆಯಾದ ನಂತರ ಪರಿಸ್ಥಿತಿ ನೋಡಿಕೊಂಡು ಐಟಿ-ಬಿಟಿ ಕಂಪೆನಿಗಳೇ ಕಚೇರಿಗಳನ್ನು ತೆರೆಯಲಿವೆ. ಸದ್ಯದ ಪರಿಸ್ಥಿತಿಯಲ್ಲಿ ಇನ್ನೂ ಕೂಡ ಉದ್ಯೋಗಿಗಳು ಕಚೇರಿಗೆ ಹೋಗಿ ಕೆಲಸ ಮಾಡಬಹುದಾದ ವಾತಾವರಣವಿಲ್ಲ ಎಂದು ಸ್ಪಷ್ಟವಾಗಿ ಹೇಳಿದರು.
ಐಟಿ ಬಿಟಿಯವರಿಗೆ ಕಚೇರಿಗಳನ್ನು ಆರಂಭಿಸಿ ಎಂದು ಸದ್ಯದ ಪರಿಸ್ಥಿತಿಯಲ್ಲಿ ಕಡ್ಡಾಯ ಮಾಡಲು ಸಾಧ್ಯವಿಲ್ಲ, ಅದರ ಬದಲು ಉದ್ಯೋಗಿಗಳು ತಾವಿರುವಲ್ಲಿಂದಲೇ ಅಥವಾ ತಮ್ಮ- ತಮ್ಮ ಮನೆಗಳಿಂದ ಕೆಲಸ ಮಾಡುವ ಸೌಲಭ್ಯವನ್ನು ಇನ್ನು ಕೆಲ ತಿಂಗಳುಗಳ ಮಟ್ಟಿಗೆ ಮುಂದೂಡುವಂತೆ ಸೂಚಿಸುತ್ತೇವೆ ಎಂದರು.
ಈ ನಡುವೆ ಶಾಸಕ ಗಣಪತಿ ಭಟ್ ಮಾಡಿ ಐಟಿ ಬಿಟಿ ಕಂಪನಿಗಳ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಿದರೆ ಟ್ಯಾಕ್ಸಿ, ಕಾರು ಇತ್ಯಾದಿ ವಾಹನ ನೌಕರರಿಗೆ, ಕ್ಯಾಂಟೀನ್ ಸೌಲಭ್ಯ ನೀಡುವ ನೌಕರರಿಗೆ ತೊಂದರೆ ಆಗಲಿದೆ ಎಂದು ಹೇಳಿದರೂ ಸಹ ಡಿಸಿಎಂ ಅಶ್ವತ್ಥ ನಾರಾಯಣ ಮಾತ್ರ ಸರ್ಕಾರದ ನಿಲುವನ್ನು ಈ ಹಂತದಲ್ಲಿ ಬದಲಿಸಲು ಆಗದು ಎಂದ ಸ್ಪಷ್ಟವಾಗಿ ಹೇಳಿದರು.
ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More
ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್… Read More
ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More
ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More
ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More
ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More
This website uses cookies.
Leave a Comment