filmy

ಯಶ್ ಕಟೌಟ್ ಕಟ್ಟುವ ಮುನ್ನ ವಿದ್ಯುತ್ ತಂತಿ ತಗುಲಿ ಮೂವರು ಯುವಕರ ಸಾವು :ಮೂವರಿಗೆ ಗಾಯ

  • ಕೂಲಿ ಮಾಡಿ ಬದುಕುತ್ತಿದ್ದರು, ಕುಟುಂಬಕ್ಕೆ ಆಧಾರವಾಗಿದ್ದರು ಈ ಯುವಕರು

ಗದಗ: ನಟ ಯಶ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಟೌಟ್ ನಿಲ್ಲಿಸುತ್ತಿದ್ದಾಗ ಮೂವರು ಯುವಕರಿಗೆ ವಿದ್ಯುತ್ ತಗುಲಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ.

ಹನಮಂತ ಹರಿಜನ (21), ಮುರಳಿ ನಡವಿನಮನಿ (20) ನವೀನ್ ಗಾಜಿ (19) ಮೃತ ಯುವಕರು.

ಈ ಮೃತ ಯುವಕರು ಸೂರಣಗಿ ಗ್ರಾಮದ ನಿವಾಸಿಗಳು. ಯಶ್ ಬರ್ತ್ ಡೇಗಾಗಿ ಅಭಿಮಾನಿಗಳು ಗ್ರಾಮದಲ್ಲಿ ಕಟೌಟ್ ಕಟ್ಟಲು ಮುಂದಾಗಿದ್ದರು.

ಕಟೌಟ್ ಮೇಲೆ ಎತ್ತುತ್ತಿದ್ದಾಗ ಮೇಲೆ ಹಾದು ಹೋಗಿದ್ದ ಯುವಕರಿಗೆ ವಿದ್ಯುತ್ ಶಾಕ್ ತಗುಲಿದೆ. ಈ ವೇಳೆ ಅಲ್ಲೇ ನಿಂತುಕೊಂಡಿದ್ದ ಮಂಜುನಾಥ್ ಹರಿಜನ, ದೀಪಕ ಹರಿಜನ, ಪ್ರಕಾಶ ಮ್ಯಾಗೇರಿ ಎಂಬುವವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಗ್ರಾಮದ ವಿಜಯ್ ದುರಂತದ ಬಗ್ಗೆ ಮಾಹಿತಿ ನೀಡಿ, . ನಾವು ವಿಚಾರ ತಿಳಿದು ಅಲ್ಲಿಗೆ ಹೋಗಿದ್ದೇವು. ತಮ್ಮ ಗ್ರಾಮದ ಜನರಿಗೆ ಸರ್ಪ್ರೈಸ್ ಕೊಡಬೇಕು ಅಂದುಕೊಂಡು ರಾತ್ರಿ 12 ಗಂಟೆಗೆ ಮಾತುಕತೆ ನಡೆಸಿ ಕಟೌಟ್ ಹಾಕಲು ಮುಂದಾಗಿದ್ದರು. ಆದರೆ ವಿಧಿ ಬರಹ ಬೇರೆಯದ್ದೇ ಆಗಿತ್ತು. 8 ರಿಂದ 10 ಹುಡುಗರು ಸೇರಿ ಕಟೌಟ್ ರೆಡಿ ಮಾಡಿದ್ದರು. ಅದಕ್ಕೆ ಕಬ್ಬಿಣದ ರಾಡ್ ಗಳನ್ನು ಬಳಸಿದ್ದರಿಂದ ಅನಾಹುತ ಆಗಿದೆ.

ಕಟೌಟ್ ರೆಡಿ ಮಾಡಿದ ಮೇಲೆ ಎತ್ತಿ ನಿಲ್ಲಿಸಲು ಪ್ರಯತ್ನಿಸಿದ್ದಾರೆ. ಈ ವೇಳೆ ಮೇಲೆ ಹಾದು ಹೋಗಿದ್ದ 11 ಕೆವಿ ವಿದ್ಯುತ್ ಲೈನ್ ಗೆ ತಾಗಿ ಅನಾಹುತ ಆಗಿದೆ. ಮೂವರು ಹುಡುಗರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ವಿದ್ಯುತ್ ಲೈನ್ ಗೆ ಕಟೌಟ್ ತಗುಲುತ್ತೆ ಎಂದು ಗೊತ್ತಿರಲಿಲ್ಲ. ಈ ರೀತಿಯ ಘಟನೆ ನಡೆಯಬಾರದಿತ್ತು. ಇದೊಂದು ಅಭಿಮಾನದ ದುರಂತ.

Team Newsnap
Leave a Comment

Recent Posts

ಎಸ್ ಎಸ್ ಎಲ್ ಸಿ ಕಡಮೆ ಅಂಕ : ಮದ್ದೂರಿನಲ್ಲಿ ಇಬ್ಬರ ವಿದ್ಯಾರ್ಥಿ ಗಳು ಆತ್ಮಹತ್ಯೆ

ಮದ್ದೂರು : ಎಸ್ ಎಸ್ ಎಲ್ ಸಿ ಪರೀಕ್ಷೆ ಯಲ್ಲಿ ಕಡಿಮೆ ಅಂಕ ಬಂದಿದೆ ಎಂದು ಮನನೊಂದ ವಿ ಇಬ್ಬರ… Read More

May 9, 2024

ಸೋಮವಾರದ ತನಕವೂ ರೇವಣ್ಣ ಜೈಲು ಹಕ್ಕಿ

ಬೆಂಗಳೂರು : ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಸದ್ಯ ನಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಹೆಚ್‌ಡಿ ರೇವಣ್ಣ ಸೋಮವಾರದವರೆಗೆ… Read More

May 9, 2024

SSLC ಫಲಿತಾಂಶ : ಬಾಲಕಿಯರೇ ಮೇಲುಗೈ ಉಡುಪಿ ಪ್ರಥಮ- ಯಾದಗಿರಿ ಕೊನೆ

ಎಸ್ಎಸ್ಎಲ್ ಸಿ 2024ರ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.ಉಡುಪಿಗೆ ಪ್ರಥಮ ಸ್ಥಾನ ಲಭ್ಯವಾಗಿದೆ.8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅವರಲ್ಲಿ… Read More

May 9, 2024

ರೇವಣ್ಣ ಕೇಂದ್ರ ಕಾರಾಗೃಹಕ್ಕೆ ಶಿಪ್ಟ್ : 4567 ಖೈದಿ ಸಂಖ್ಯೆ ನೀಡಿಕೆ

ಬೆಂಗಳೂರು : ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಜೆಡಿಎಸ್​ ಶಾಸಕ ಹಾಗೂ ಮಾಜಿ ಸಚಿವ ಹೆಚ್.… Read More

May 8, 2024

SSLC ಫಲಿತಾಂಶ ಪರಿಶೀಲಿಸಲು ಸುಲಭ ಹಂತಗಳು : ವಿವರ

ಬೆಂಗಳೂರು: ನಾಳೆ ( ಮೇ 9 ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ SSLC ಪರೀಕ್ಷೆ-… Read More

May 8, 2024

ಈಜು ಕಲಿಯಲು ಹೋದ 10 ವರ್ಷದ ಬಾಲಕ ನೀರುಪಾಲು

ರಾಯಚೂರು: ತಾಲೂಕಿನ ಹೆಂಬೆರಾಳ ಗ್ರಾಮದಲ್ಲಿ ಈಜು ಕಲಿಯಲು ಹೋಗಿದ್ದ ಬಾಲಕ ನೀರುಪಾಲಾದ ಘಟನೆ ನಡೆದಿದೆ. ವಿನಾಯಕ (10) ಜೇಗರ್‌ಕಲ್ ಮಲ್ಲಾಪೂರು… Read More

May 8, 2024