ದೆಹಲಿಯಿಂದ ಬಂದ ಕೆಲವರು 2500 ಕೋಟಿ ಕೊಡಿ ನಿಮ್ಮನ್ನು ಸಿಎಂ ಮಾಡ್ತೀವಿ ಅಂತಾ ಹೇಳಿದ್ದರು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಹಾಕಿದ್ದಾರೆ.
ಇದನ್ನು ಓದಿ : PSI ಪರೀಕ್ಷಾ ಅಕ್ರಮ : DYSP ಸಾಲಿ ಬಂಧನ – ನೇಮಕಾತಿ ವಿಭಾಗದ ಅಧಿಕಾರಿಗಳ ವಿಚಾರಣೆ
ಬೆಳಗಾವಿಯ ರಾಮದುರ್ಗದ ಕಾರ್ಯಕ್ರಮವೊಂದಲ್ಲಿ ಮಾತನಾಡಿದ ಯತ್ನಾಳ್ ಅವರು, ಕೆಲವರು ನಿಮಗೆ ಟಿಕೆಟ್ ಕೊಡಿಸುತ್ತೇವೆ, ದೆಹಲಿ ಕರೆದುಕೊಂಡು ಹೋಗ್ತೇವೆ. ಸೋನಿಯಾ ಗಾಂಧಿ ಭೇಟಿ ಮಾಡಿಸ್ತೀವಿ, ಜೆ.ಪಿ.ನಡ್ಡಾರನ್ನು ಭೇಟಿ ಮಾಡಿಸ್ತೀವಿ ಅಂತಾ ಹೇಳಿ ಬರ್ತಾರೆ. ಹಾಗೇ ನನ್ನ ಹತ್ತಿರವೂ ದೆಹಲಿಯಿಂದ ಒಂದಿಷ್ಟು ಬಂದಿದ್ದರು ಎಂದಿದ್ದಾರೆ.
ನಿಮ್ಮನ್ನು ಸಿಎಂ ಮಾಡ್ತೀವಿ 2,500 ಕೋಟಿ ರೆಡಿ ಮಾಡಿ ಕೊಳ್ಳಿ ಅಂತಾ ಹೇಳಿದರು ಆದ್ರೆ ನಾನು, 2500 ಕೋಟಿ ಅಂದ್ರೆ ಏನ್ ಅಂತಾ ತಿಳಿದಿರಿ. ಆ ಹಣ ಹೆಂಗ್ ಇಡೋದು? ಏನು ಕೋಣೆಯಲ್ಲಿ ಇಡೋದಾ ಅಥವಾ ಗೋದಾಮಿನಲ್ಲಿ ಇಡೋದಾ? ಎಂದು ಪ್ರಶ್ನಿಸಿದೆ ಎಂದು ಕಿಡಿಕಾರಿದ್ದಾರೆ.
ಟಿಕೆಟ್ ಕೊಡ್ತೀನಿ ಅಂತಾ ರಾಜಕಾರಣದಲ್ಲಿ ಎಲ್ಲಾ ಕಡೆ ಮೋಸ ಮಾಡ್ತಾರೆ. ಎಚ್ಚರಿಕೆಯಿಂದ ಇರಬೇಕು. ರಾಜಕಾರಣದಲ್ಲಿ ಯಾರೂ ದೆಹಲಿಗೆ ಹೋಗಿ ಹಾಳಾಗಬೇಡಿ ಎಂದು ಕರೆ ನೀಡಿದರು
ನಾನು ವಾಜಪೇಯಿಯವರ ಕೈಕೆಳಗೆ ಕೆಲಸ ಮಾಡಿದ್ದೇನೆ. ಅಡ್ವಾಣಿ, ರಾಜನಾಥಸಿಂಗ್, ಅರುಣ್ ಜೇಟ್ಲಿ ಅವರು ನನ್ನನ್ನು ಬಸನಗೌಡ ಅಂತಾ ಹೆಸರು ಹೇಳಿ ಕರೀತಿದ್ರು. ಅಂತಹ ವ್ಯಕ್ತಿಗೆ ಎರಡೂಸಾವಿರ ಕೋಟಿ ಸಜ್ಜ ಮಾಡಿ ಇಡಿ ಸಿಎಂ ಮಾಡ್ತೀವಿ ಅಂತಾ ಹೇಳ್ತಾರೆ. ನಡ್ಡಾರ ಮನೆಗೆ ಕರೆದುಕೊಂಡು ಹೋಗ್ತೀವಿ, ಅಮಿತ್ ಶಾ ಮನೆಗೆ ಕರೆದುಕೊಂಡು ಹೋಗ್ತೀವಿ ಅಂತಾರೆ ಎಂದು ದೂರಿದ್ದಾರೆ.
- ಅಕ್ರಮ ಜಾಹಿರಾತು ಫಲಕ ಕುಸಿತಕ್ಕೆ 14 ಸಾವು, 74 ಜನರು ಗಂಭೀರ
- ರೇವಣ್ಣ ರಿಲೀಸ್ : ಬಿಗ್ ರಿಲೀಪ್
- ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ
- ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್
- CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್
- ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ