Trending

ಅರಮನೆ ಆವರಣದಲ್ಲಿ ಅಂತಿಮ ಹಂತದ ಯೋಗ ತಾಲೀಮು ವೀಕ್ಷಿಸಿದ ಸಚಿವ ಸೋಮಶೇಖರ್

ವಿಶ್ವ ಯೋಗ ದಿನದಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿರುವ ಯೋಗ ಕಾರ್ಯಕ್ರಮದ ಅಂತಿಮ ಹಂತದ ತಾಲೀಮನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ವೀಕ್ಷಿಸಿದರು.

ಅರಮನೆ ಆವರಣದಲ್ಲಿ ಬೆಳಗ್ಗೆ 6.30ಕ್ಕೆ 10 ಸಾವಿರಕ್ಕೂ ಅಧಿಕ ಯೋಗಪಟುಗಳಿಂದ ಯೋಗ ತಾಲೀಮು ನಡೆಸಲಾಯಿತು.

ಯೋಗ ಕಾರ್ಯಕ್ರಮದ ಅಂಗವಾಗಿ ವೇದಿಕೆ ಸಿದ್ಧತೆ, ಯೋಗಪಟುಗಳಿಗೆ ಸ್ಥಳಾವಕಾಶ, ಕುಡಿಯುವ ನೀರಿನ ವ್ಯವಸ್ಥೆ, ಎಲ್ಲೆಲ್ಲಿ ಪ್ರವೇಶ ಕಲ್ಪಿಸಲಾಗಿದೆ ಎಂಬುದನ್ನು ಸಚಿವರು ವೀಕ್ಷಿಸಿದರು.

ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜೂನ್ 5 ಮತ್ತು 11ರಂದು ಯೋಗ ತಾಲೀಮು ನಡೆಸಲಾಗಿತ್ತು. ಇಂದು ಅಂತಿಮ ಹಂತದ ತಾಲೀಮು ನಡೆಸಲಾಗಿದೆ ಎಂದು ಹೇಳಿದರು.

51 ವಿವಿಧ ವರ್ಗದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಯೋಗ ಮಾಡಲಿದ್ದಾರೆ. ಪ್ರಧಾನಿ ಪಾಲ್ಗೊಳ್ಳುವ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆ ಪೂರ್ಣಗೊಂಡಿದೆ. ನಾಲ್ಕು ಕಡೆ ಪ್ರವೇಶ ಕಲ್ಪಿಸಲಾಗಿದೆ. ಬೆಳಗ್ಗೆ 5.30ಕ್ಕೆ ಪ್ರವೇಶದ್ವಾರ ಬಂದ್ ಆಗಲಿದೆ.

ಇದನ್ನು ಓದಿ : ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದ ಶಿವಮೊಗ್ಗ ಯುವಕನ ಮೃತದೇಹ ಪತ್ತೆ

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅರಮನೆ ಆವರಣಕ್ಕೆ ಭೇಟಿ ನೀಡಿ ಭದ್ರತಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿವೀಕ್ಷಣೆ ನಡೆಸಿದರು.

ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರು ಜೊತೆಯಲ್ಲಿದ್ದರು.

Team Newsnap
Leave a Comment
Share
Published by
Team Newsnap

Recent Posts

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024

ಬಿಜೆಪಿಯವರು ಏಕೆ ಪ್ರಜ್ವಲ್ ರೇವಣ್ಣ ಕೇಸ್ ಬಗ್ಗೆ ಮಾತನಾಡುತ್ತಿಲ್ಲ ?ಡಿ.ಕೆ.ಶಿವಕುಮಾರ್

ಬಾಗಲಕೋಟೆ : ಡಿಸಿಎಂ ಡಿ.ಕೆ.ಶಿವಕುಮಾರ್ , ಬಿಜೆಪಿ ಮುಖಂಡರು ಪ್ರಜ್ವಲ್ ರೇವಣ್ಣ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ? ಹೆಣ್ಣುಮಕ್ಕಳಿಗೆ ಸಾಂತ್ವನ… Read More

May 4, 2024

ರೇವಣ್ಣ ಅಪಹರಣ ಕೇಸ್‌ : ಎಸ್‌ಐಟಿ ವಿಶೇಷ ತಂಡದಿಂದ 40 ಕಡೆ ರೇಡ್‌

ಬೆಂಗಳೂರು : ನೆನ್ನೆ ವಿಶೇಷ ತನಿಖಾ ತಂಡ (ಎಸ್‌ಐಟಿ) , ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರಿಂದ ಲೈಂಗಿಕ ಶೋಷಣೆಗೆ ಒಳಗಾಗಿದ್ದಳು… Read More

May 4, 2024