ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಹಾಗೂ ಎರಡನೇ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದೆ
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೋರಖ್ಪುರ (ನಗರ) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆ ಅಥವಾ ಮಥುರಾದಿಂದ ಸ್ಪರ್ಧಿಸಲಿದ್ದಾರೆ ಎಂಬ ವರದಿಗಳು ಬಂದಿದ್ದವು.
ಆದರೆ ಮೊದಲ ಹಂತದ 57 ಹಾಗೂ ಎರಡನೇ ಹಂತದ 38 ಸೀಟುಗಳಲ್ಲಿ ಸ್ಪರ್ಧಿಸಲಿರುವ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಬಿಡುಗಡೆ ಮಾಡಿದ್ದಾರೆ.
ಯೋಗಿ ಆದಿತ್ಯನಾಥ್ ಗೋರಖ್ಪುರ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.
2017ರವರೆಗೆ ಸತತ ಐದು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಪ್ರಬಲ ಕ್ಷೇತ್ರದಿಂದಲೇ ಯೋಗಿ ಆದಿತ್ಯನಾಥ್ ಅವರನ್ನು ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ. ಪಕ್ಷ ಹೇಳುವ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಯೋಗಿ ಅವರು ಹೇಳಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಿಜೆಪಿ ಯೋಗಿ ಆದಿತ್ಯನಾಥ್ ಅವರನ್ನು ಗೋರಖ್ಪುರಕ್ಕೆ ಕಳುಹಿಸಿರುವುದು ನನಗೆ ಇಷ್ಟವಾಗಿದೆ. ಯೋಗಿ ಅಲ್ಲೇ ಉಳಿಯಬೇಕು, ಅಲ್ಲಿಂದ ಬರುವ ಅಗತ್ಯವಿಲ್ಲ ಎಂದು ತಿವಿದಿದ್ದಾರೆ.
ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More
2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
This website uses cookies.
Leave a Comment