Literature

ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ

ನೀವು ಎಚ್ಚರಗೊಳ್ಳಿ – ಇತರರನ್ನೂ ಎಚ್ಚರಗೊಳಿಸಿ……….

ಸ್ವಾಮಿ ವಿವೇಕಾನಂದ..

ಇಲ್ಲದಿದ್ದರೆ…..
ಒಂದೇ ಕುಟುಂಬಗಳು,
ಒಂದೇ ಮನೆತನಗಳು,
ಒಂದೇ ರಕ್ತ ಸಂಬಂಧಗಳು,
ಒಂದೇ ಹಣ ದಾಹಿಗಳು,
ಒಂದೇ ಜಾತಿಯವರುಗಳು,
ಒಂದೇ ಭ್ರಷ್ಟಾಚಾರಿಗಳು,
ಒಂದೇ ಸುಳ್ಳುಗಾರರು,
ಒಂದೇ ಮತಾಂಧರು,
ಒಂದೇ ಮೌಢ್ಯದವರು,

ಹೀಗೆ ಅವರುಗಳೇ ನಮ್ಮ ಬದುಕನ್ನು ನಿಯಂತ್ರಿಸುತ್ತಾರೆ. ನಾವು ಅವರ ಅಡಿಯಾಳುಗಳಾಗಿ ಇಡೀ ನಮ್ಮ ಜೀವನವನ್ನು ಅವರ ನೆರಳಿನಲ್ಲಿ ಕಳೆಯಬೇಕಾಗುತ್ತದೆ. ನಮ್ಮ ಸ್ವಾತಂತ್ರ್ಯ, ನಮ್ಮ ಚಿಂತನೆ, ನಮ್ಮ ಕ್ರಿಯಾತ್ಮಕತೆಗೆ ಬೆಲೆಯೇ ಇರುವುದಿಲ್ಲ.

ಕರ್ನಾಟಕದ ವಿಧಾನಸಭೆಯ ಮೇಲ್ಮನೆ ಕೆಳಮನೆಗಳಿಗೆ ಆಯ್ಕೆಯಾಗುವ ಜನ ಪ್ರತಿನಿಧಿಗಳ ಗುಣಮಟ್ಟ ನೋಡಿದರೆ ಮತದಾರರ ಮಾನಸಿಕ ಸ್ಥಿತಿಯ ಬಗ್ಗೆ ಅನುಮಾನ ಉಂಟಾಗುತ್ತದೆ.

ಅದಕ್ಕಾಗಿಯೇ ಸ್ವಾಮಿ ವಿವೇಕಾನಂದರ ಮಾತಿನಂತೆ ನಾವು ಮಾತ್ರವಲ್ಲ ಇತರರನ್ನು ಎಚ್ಚರಗೊಳಿಸುವ ಜವಾಬ್ದಾರಿ ನಮ್ಮದಾಗಬೇಕು.

ಅದು ಯಾವ ನಿಟ್ಟಿನಲ್ಲಿ ಇರಬೇಕೆಂದರೆ……..

ಒಬ್ಬ ಅಧಿಕಾರಿಗೆ ಲಂಚದ ಹಣ ಇನ್ನೊಬ್ಬರ ಬೆವರು – ಎಂಜಲು ಎನಿಸಬೇಕು.

ಶ್ರೀಮಂತರ ಚಿನ್ನ, ಒಡವೆ, ಕಾರುಗಳ ಪ್ರದರ್ಶಕ ಮನೋಭಾವ, ಜನ ಸಾಮಾನ್ಯರಿಗೆ ಅಸಹ್ಯ ತರಿಸಬೇಕು.

ಕೋಟ್ಯಾಂತರ ರೂಪಾಯಿ ಖರ್ಚಿನ ಮದುವೆಗಳು,
ಪ್ರಜೆಗಳಿಗೆ ಬಹಳಷ್ಟು ಕೋಪ ಬರಿಸಬೇಕು.

ಈ ಮದುವೆಗಳ ಟಿವಿ ಚಾನಲ್ ನೇರ ಪ್ರಸಾರ ವೀಕ್ಷಕರಿಗೆ ವಾಕರಿಕೆ ಬರುವಂತಾಗಬೇಕು.

ಪುಢಾರಿಗಳಿಗೆ ಜೈಕಾರ ಹಾಕುವುದು ಜನರಿಗೆ ಅವಮಾನವೆನಿಸಬೇಕು.

ಅಯೋಗ್ಯ ಸ್ವಾಮಿ ಪಾದ್ರಿ ಮೌಲ್ವಿಗಳ ಕಾಲು ಮುಗಿಯಲು ಭಕ್ತರಿಗೆ ನಾಚಿಕೆಯಾಗಬೇಕು.

ಜ್ಯೋತಿಷಿಗಳ ಬಳಿ ಕೈ ತೋರಿಸಿ ಭವಿಷ್ಯವನ್ನು ಕೇಳುವವರಿಗೆ ತಮ್ಮ ಬಗ್ಗೆ ಕೀಳರಿಮೆ ಬರಬೇಕು.

ಜಾತಿಯ ಸಮಾವೇಶಗಳಲ್ಲಿ ಭಾಗವಹಿಸಲು ಜನರ ಮನಸ್ಸಿಗೆ ಕಹಿ ಎನಿಸಬೇಕು.

ಪ್ರಶಸ್ತಿಗಳಿಗೆ ಅರ್ಜಿ ಹಾಕುವ ಸಾಹಿತಿಗಳ ಮನಸ್ಸಿಗೆ ನೋವಾಗಬೇಕು.

ಸನ್ಮಾನಿಸಿಕೊಳ್ಳುವ ನಕಲಿ ಸಮಾಜ ಸೇವಕರಿಗೆ ಆತ್ಮಸಾಕ್ಷಿ ಚುಚ್ಚಬೇಕು.

ಬಡವರ ನರಳಾಟ ರಾಜಕಾರಣಿಗಳಿಗೆ ಕಣ್ಣೀರು ಬರಿಸಬೇಕು.

ಇಲ್ಲದವರ ಮುಂದೆ ಸೂಟು ಬೂಟುಗಳು ಅಸಹ್ಯ ಹುಟ್ಟಿಸಬೇಕು.

ಗುಡಿಸಲ ಮುಂದೆ ಭವ್ಯ ಬಂಗಲೆಗಳಲ್ಲಿರುವವರಿಗೆ ಪಶ್ಚಾತ್ತಾಪವಾಗಬೇಕು.

ವರದಕ್ಷಿಣೆಯ ಹಣ ತೆಗೆದುಕೊಳ್ಳುವವರಿಗೆ ಪ್ರಾಣಸಂಕಟವಾಗಬೇಕು.

ಹೀಗೆ ನಿಮಗನಿಸಿದಲ್ಲಿ ನೀವು ಮಾನವೀಯವಾಗಿರುವಿರೆಂದು ಭಾವಿಸಬಹುದು.

ಹೀಗೆ ನಿಮಗೆ ಆತ್ಮಾವಲೋಕನವಾದಲ್ಲಿ ನೀವು ನಾಗರಿಕರೆಂದು ಹೇಳಬಹುದು.

ಈ ಅರಿವು ನಿಮಗಾದಲ್ಲಿ ನಿಮ್ಮ ವ್ಯಕ್ತಿತ್ವ ಉತ್ತಮ ಮಟ್ಟದಲ್ಲಿ ರೂಪಗೊಂಡಿದೆಯೆಂದು ತಿಳಿಯಬಹುದು.

ಈ ಅರಿವು ಮೂಡುವವರೆಗೂ ನಾವಿನ್ನು ಅನಾಗರಿಕರು ಎಂದೇ ಪರಿಗಣಿಸಬೇಕು………

ವಿವೇಕಾನಂದ. ಹೆಚ್.ಕೆ.

Team Newsnap
Leave a Comment
Share
Published by
Team Newsnap

Recent Posts

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024