Categories: Main News

ಎಲ್ಲರನ್ನೂ ಎಲ್ಲಾ ಕಾಲಕ್ಕೂ ಎಲ್ಲಾ ಸಂದರ್ಭದಲ್ಲೂ ವಂಚಿಸಲು ಸಾಧ್ಯವಿಲ್ಲ

ಎಲ್ಲರನ್ನೂ ಎಲ್ಲಾ ಕಾಲಕ್ಕೂ ಎಲ್ಲಾ ಸಂದರ್ಭದಲ್ಲೂ ವಂಚಿಸಲು ಸಾಧ್ಯವಿಲ್ಲ ಎಂಬ ಇಂಗ್ಲೀಷ್ ನಾಣ್ಣುಡಿ ಇದೆ.
ದೀರ್ಘಕಾಲದ ಅನುಭವದಲ್ಲಿ ಇದು ಸತ್ಯ ಎನಿಸುತ್ತದೆ.

ತಾತ್ಕಾಲಿಕವಾಗಿ ನಾವು ನಮ್ಮ ಮುಖವಾಡಗಳಲ್ಲಿ ಯಶಸ್ಸು ಗಳಿಸಬಹುದು. ಆದರೆ ನಿರಂತರವಾಗಿ ಮತ್ತು ಅದೇ ಗುಣಮಟ್ಟ ಬಹಳ ಕಾಲ ಉಳಿಸಿಕೊಳ್ಳಲಾಗದೆ ಕ್ರಮೇಣ ಯಾವುದೋ ಒಂದು ಸಂದರ್ಭದಲ್ಲಿ ಅಗ್ನಿ ಪರೀಕ್ಷೆ ಎದುರಾಗಿ ನಮ್ಮ ನಿಜ ವ್ಯಕ್ತಿತ್ವ ಬಯಲಾಗುತ್ತದೆ.

ಇದು ಎಲ್ಲಾ ಕ್ಷೇತ್ರಗಳಿಗು ಮತ್ತು ಎಲ್ಲಾ ಸಂಬಂಧಗಳಿಗೂ ಅನ್ವಯಿಸುತ್ತದೆ.

ಕ್ರೀಡೆ ಸಾಹಿತ್ಯ ಸಂಗೀತ ಕಲೆ ವಿಜ್ಞಾನ ರಾಜಕೀಯ ಸಂಘಟನೆ ಮತ್ಯಾವುದೇ ವಿಭಾಗವಾಗಿರಲಿ ನಮ್ಮ ವ್ಯಕ್ತಿತ್ವದಲ್ಲಿ ನಿಜ ಸಾಮರ್ಥ್ಯ ಇಲ್ಲದಿದ್ದಲ್ಲಿ ನಾವು ಕ್ರಮೇಣ ಕುಸಿಯತೊಡಗುತ್ತೇವೆ. ತಾತ್ಕಾಲಿಕ ಯಶಸ್ಸು ಮರೆಯಾಗುತ್ತದೆ. ಆಗ ನಾವು ಭ್ರಮನಿರಸನ ಹೊಂದಿ ಅಸಹಿಷ್ಣತೆ ಅಥವಾ ಖಿನ್ನತೆಗೆ ಒಳಗಾಗುತ್ತೇವೆ.

ಉದಾಹರಣೆಗೆ, ನೀವು ಯಾವುದೇ ಪ್ರಕಾರದ ಬರಹಗಾರರು ಆಗಿರಬಹುದು. ನಿಮ್ಮ ಒಳಗಿನ ವ್ಯಕ್ತಿತ್ವದ ಸಹಜ ಭಾವನೆಗಳ ಅನಾವರಣ ನಿಮ್ಮದಾಗಿರದೆ ಕೇವಲ ಅಕ್ಷರ ಜ್ಞಾನದ ಆಧಾರದಲ್ಲಿ ಪದಗಳ ಚಾಕಚಕ್ಯತೆಯ ಮೇಲೆ ಸಾಹಿತ್ಯ ರಚಿಸುತ್ತಿದ್ದರೆ ಪ್ರಾರಂಭದಲ್ಲಿ ಅದು ಒಂದಷ್ಟು ಯಶಸ್ಸು ತಂದುಕೊಡಬಹುದಾದರು ದೀರ್ಘಕಾಲದಲ್ಲಿ ಅದು ಜೊಳ್ಳು ಎಂದು ನಿಜವಾದ ಕಸುಬುದಾರರಿಗೆ ಅರ್ಥವಾಗುತ್ತದೆ.

ಚಾಲಕರೇ ಇರಬಹುದು, ಸಮಾಜ ಸುಧಾರಕರೇ ಇರಬಹುದು, ಮೆಕ್ಯಾನಿಕ್ ಆಗಿರಬಹುದು, ಅದರ ಬಗ್ಗೆ ಸಂಪೂರ್ಣ ನಿಯಂತ್ರಣ ಇದ್ದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ. ವಾಹನ ಚಲಾಯಿಸಿದ ಮಾತ್ರಕ್ಕೆ ಅಥವಾ ಸಂಗೀತದ ಒಂದು ವಾದ್ಯ ನುಡಿಸಿದ ಮಾತ್ರಕ್ಕೆ ನಾನು ಅದರಲ್ಲಿ ಪಂಡಿತ ಎಂದು ಭಾವಿಸಲು ಸಾಧ್ಯವಿಲ್ಲ.

ಹಾಗೆಯೇ,
ಸಂಬಂಧಗಳಲ್ಲಿಯೂ ಸಹ ತೋರಿಕೆಯ ಮನೋಭಾವ ಬಹಳ ದಿನ ಕಾಪಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಪ್ರೀತಿಯೋ, ಸ್ನೇಹವೋ, ಭಕ್ತಿಯೋ, ವಿನಯವೋ,ಧೈರ್ಯವೋ ಅದು ಆಳವಾಗಿ ಸ್ವಾಭಾವಿಕವಾಗಿ ನಮ್ಮ ವ್ಯಕ್ತಿತ್ವದಲ್ಲಿ ಅಂತರ್ಗತವಾಗಿದ್ದಾಗ ಮಾತ್ರ ಅದು ಬೇರೆಯವರಿಗೆ ಅರ್ಥವಾಗುತ್ತದೆ ಮತ್ತು ದೀರ್ಘಕಾಲ ಉಳಿಯುತ್ತದೆ. ಇಲ್ಲದಿದ್ದರೆ ಚಿಕ್ಕ ಮಗುವಿಗೂ ನಮ್ಮ ಕಪಟತನ ತಿಳಿದುಬಿಡುತ್ತದೆ.

ಗೆಳೆಯ ಗೆಳತಿಯರೆ, ನಮ್ಮ ಬರಹಗಳಲ್ಲಿ ನಿಜವಾದ ಸಾಮರ್ಥ್ಯ ಇದ್ದರೆ ಇಂದಲ್ಲಾ ನಾಳೆ ಅದು ಓದುಗರ ಮನಸ್ಸಿಗೆ ತಲುಪುತ್ತದೆ. ಇಲ್ಲದಿದ್ದರೆ ಹಾಗೆ ಮರೆಯಾಗುತ್ತದೆ.

ಈ ಕ್ಷಣದ ಹೊಗಳಿಗೆ ಮತ್ತು ತೆಗಳಿಕೆ ನಮ್ಮ ಒಟ್ಟು ಸಾಮರ್ಥ್ಯ ಅಥವಾ ಅಸಾಮರ್ಥ್ಯ ನಿರ್ಧರಿಸುವುದಿಲ್ಲ.

ಈ ಕಾಲಘಟ್ಟದಲ್ಲಿ ಪಂಥಗಳ ಬಲೆಯೊಳಗೆ ಬಂಧಿಯಾಗಿರುವ ಮನಸ್ಸುಗಳ ನಡುವೆ, ಅಪರಿಚಿತ ಮತ್ತು ಪರೋಕ್ಷ ಗೆಳೆತನ ಇನ್ನೂ ಗಟ್ಟಿಯಾಗಿ ಬೇರುಬಿಟ್ಟಿರದ ಸಮಯದಲ್ಲಿ ಇಲ್ಲಿನ ಟೀಕೆ ಮತ್ತು ಪ್ರೋತ್ಸಾಹ ಎರಡನ್ನೂ ಸಮಚಿತ್ತದಿಂದ ಸ್ವೀಕರಿಸಿ. ಅಹಂ ಅಥವಾ ನಿರ್ಲಕ್ಷ್ಯ ಎರಡೂ ಬೇಡ.

ಕಾಲನ ಪರೀಕ್ಷೆಯಲ್ಲಿ ನಮ್ಮ ಶಕ್ತಿ ಸಾಮರ್ಥ್ಯ ನಮ್ಮ ವ್ಯಕ್ತಿತ್ವದ ಭಾಗವೇ ಆಗಿದ್ದರೆ ಯಶಸ್ಸು ನಮ್ಮದಾಗುತ್ತದೆ. ಒಂದು ವೇಳೆ ವಿಫಲವಾದರೆ ಅದು ಕೂಡ ನಮ್ಮ ಸಾಮರ್ಥ್ಯದ ಇತಿಮಿತಿ ಎಂದು ಭಾವಿಸೋಣ.
ಸಾಧ್ಯವಾದಷ್ಟು ಸಮಚಿತ್ತ ಮನೋಭಾವ ಬೆಳೆಸಿಕೊಳ್ಳೋಣ.

ಈಗಿನ ವೇಗದ ಮತ್ತು ಸಂಪರ್ಕ ಕ್ರಾಂತಿಯ ಸಂದರ್ಭದಲ್ಲಿ ನಮ್ಮ ನೆಮ್ಮದಿಗಾಗಿ ಇದು ಅತ್ಯಂತ ಅವಶ್ಯ. ನೀವು ಆತುರಕ್ಕೆ ಬಿದ್ದರೆ ಈ ಸೋಷಿಯಲ್‌ ಮೀಡಿಯಾ ಬಹುಬೇಗ ನಿಮ್ಮನ್ನು ನಿರಾಸೆಗೆ ತಳ್ಳಿ ನೀವು ಭ್ರಮನಿರಸನ ಆಗುವಂತೆ ಮಾಡುತ್ತದೆ.

ಆದ್ದರಿಂದ ಇದೊಂದು ಅದ್ಬುತ ಮಾಯಾ ಜಾಲ. ನಿಮ್ಮ ಸಾಮರ್ಥ್ಯದ ಬಗ್ಗೆ ನಿಮಗೆ ವಿಶ್ವಾಸವಿದ್ದರೆ ನಿಧಾನವಾಗಿ ಮತ್ತು ನಿರಂತರವಾಗಿ ಇದರ ಉಪಯೋಗ ಪಡೆಯಬಹುದು.

ದ್ವೇಷಕಾರುವ, ಅಸೂಯೆಪಡುವ, ಉಡಾಫೆ ಅಭಿಪ್ರಾಯ ವ್ಯಕ್ತಪಡಿಸಿ ಮಜಾ ನೋಡುವ, ನಿಮ್ಮನ್ನು ಕೆಣಕುವ, ಇಲ್ಲದ ತಪ್ಪುಗಳನ್ನು ಹುಡುಕುವ, ಸರಿಯನ್ನು ತಪ್ಪು ಮಾಡುವ ವ್ಯಕ್ತಿಗಳು ಅಥವಾ ಗುಂಪುಗಳ ಅನೇಕ ಗುಣಗಳನ್ನು ಆದಷ್ಟೂ ಗುರುತಿಸಿ ಅವರಿಂದ ದೂರ ಇರಲು ಪ್ರಯತ್ನಿಸಿ.

ಕೇವಲ ಬರಹಗಳ, ಅಭಿಪ್ರಾಯಗಳ, ಪದಗಳ ಆಧಾರದ ಮೇಲೆ ಯಾರ ತನವನ್ನೂ ನಿರ್ಧರಿಸಬೇಡಿ. ಅವರ ಇಡೀ ವ್ಯಕ್ತಿತ್ವ ನಿಮಗೆ ಪರಿಚಯವಾಗಿ ಅದು ನಿಮಗೆ ಇಷ್ಟವಾದರೆ ಮಾತ್ರ ಗೆಳೆತನದ ಆಳಕ್ಕೆ ಹೋಗಿ.

ಇದು ಸೂಕ್ಷ್ಮ ಮನಸ್ಸಿನ ಗೆಳೆಯ ಗೆಳೆತಿಯರಿಗೆ ಮಾತ್ರ. ಭಂಡ ಸ್ವಭಾವದರು ಎಲ್ಲಿದ್ದರೂ – ಹೇಗಿದ್ದರೂ ತಮ್ಮ ಅಸ್ತಿತ್ವ ಉಳಿಸಿಕೊಳ್ಳುತ್ತಾರೆ.

  • ವಿವೇಕಾನಂದ. ಹೆಚ್.ಕೆ.
Team Newsnap
Leave a Comment
Share
Published by
Team Newsnap

Recent Posts

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ

ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More

September 16, 2024

ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಪ್ರಿಯಾಂಕ್‌ ಖರ್ಗೆ

ಬೆಂಗಳೂರು : ಪ್ರಿಯಾಂಕ್ ಖರ್ಗೆ ಅವರು ರಾಜ್ಯದಲ್ಲಿ ಒಟ್ಟು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದು ಹಂತಹಂತವಾಗಿ ತುಂಬಲಾಗುವುದು… Read More

September 16, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 16 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,800 ರೂಪಾಯಿ ದಾಖಲಾಗಿದೆ. 24… Read More

September 16, 2024

ಇಂದು ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ನಾಗಮಂಗಲಕ್ಕೆ ಭೇಟಿ

ಮಂಡ್ಯ: ಇಂದು ಬಿಜೆಪಿ ಸತ್ಯಶೋಧನಾ ಸಮಿತಿ ನಾಗಮಂಗಲದಲ್ಲಿ ಗಲಭೆ ನಡೆದ ಸ್ಥಳಕ್ಕೆ ಭೇಟಿ ನೀಡಲಿದೆ. ಬಿಜೆಪಿ ನಿಯೋಗ , ಇತ್ತೀಚೆಗಷ್ಟೇ… Read More

September 16, 2024

ಮತ್ತೊಮ್ಮೆ ಡೊನಾಲ್ಡ್​ ಟ್ರಂಪ್​ ಮೇಲೆ ಗುಂಡಿನ ದಾಳಿ

ವಾಷಿಂಗ್ಟನ್: ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಊಟ ಮಾಡಿ ಹೆಚ್ಚಿನ ಸಮಯವನ್ನು ಕಳೆಯುವ ಸ್ಥಳದಲ್ಲಿ ಗುಂಡಿನ ದಾಳಿ ನಡೆದಿದೆ.… Read More

September 16, 2024

ಅಭಿವೃದ್ಧಿ ಹರಿಕಾರ ,’ಕರ್ಮಯೋಗಿ’ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ

ನನ್ನ ತೊಂಬತ್ತನೆಯ ವಯಸ್ಸಿನಲ್ಲಿ ಹೆಜ್ಜೆ ಇಡುವಲ್ಲಿ ನಾನು ಇನ್ನೂ ತಕ್ಕಷ್ಟು ಆರೋಗ್ಯವಾಗಿದ್ದೇನೆ. ಮೈಕೈ ದೌರ್ಬಲ್ಯ ಬಹಳವೇನೂ ಬರಲಿಲ್ಲ. ಕನ್ನಡಕವಿಲ್ಲದೆ ಓದಬಲ್ಲೆ.… Read More

September 15, 2024