Mandya

ಯುವ ಸಮುದಾಯ ರಕ್ತದಾನ ಮಾಡಿ ಮಾನವೀಯತೆ ತೋರಿ: ಪಿಇಟಿ ಅಧ್ಯಕ್ಷ ವಿಜಯಾನಂದ ಕರೆ

ಯುವಸಮುದಾಯ ರಕ್ತದಾನ ಮಾಡುವ ಮೂಲಕ ಮಾನವೀಯತೆ ಮೆರೆಯಬೇಕಿದೆ ಎಂದು ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯಾನಂದ ಹೇಳಿದರು.

ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನಲಲಿರುವ ಡಾ. ಎಚ್.ಡಿ ಚೌಡಯ್ಯ ಸಭಾಂಗಣದಲ್ಲಿ ರೋಟರಿ ಸಂಸ್ಥೆ, ಜನತಾ ಶಿಕ್ಷಣ ಟ್ರಸ್ಟ್, ಜಿಲ್ಲಾ ರಕ್ತನಿಧಿಕೇಂದ್ರ ಮಿಮ್ಸ್, ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಆಯೋಜಿಸಿದ್ದ ನಟ,ನಿರ್ದೇಶಕ ಕಿಚ್ಚ ಸುದೀಪ್ ಹುಟ್ಟುಹಬ್ಬ ಪ್ರಯುಕ್ತ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ದಿನಗಳಲ್ಲಿ ರಕ್ತಕ್ಕೆ ಭಾರಿ ಬೇಡಿಕೆ ಉಂಟಾಗಿದೆ, ಜೀವ ಉಳಿಸುವ ನಿಟ್ಟಿನಲ್ಲಿ ರಕ್ತದಾನಿಗಳು ಹೆಚ್ಚಾಗಬೇಕಿದೆ, ರಕ್ತಕ್ಕೆ ರಕ್ತವೇ ಔಷಧವಾಗಿದೆ ಎಂದು ನುಡಿದರು.

ದಕ್ಷಿಣಭಾರತದ ಖ್ಯಾನ ನಟರಲ್ಲಿ ಕಿಚ್ಚಸುದೀಪ್ ಒಬ್ಬರಾಗಿದ್ದಾರೆ. ಕನ್ನಡತನ ಮತ್ತು ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟದಲ್ಲಿ ವೀಕ್ಷಿಸುವಂತೆ ತಮ್ಮ ಅಭಿನಯದ ಮೂಲಕ ಗಮನ ಸೆಳೆದು ಕೋಟ್ಯಾಂತರ ಅಭಿಮಾನಿಗಳ ಸಂಪತ್ತನ್ನು ಹೊಂದಿದ್ದಾರೆ ಎಂದು ಹೇಳಿದರು.

ಬಳಿಕ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಧನಂಜಯ, ಅನೇಕ ರೋಗಿಗಳಿಗೆ ರಕ್ತದ ಅವಶ್ಯಕತೆಯಿದೆ. ಕೋವಿಡ್-೧೯ ದಿನಗಳಲ್ಲಿ ಜನರು ರಕ್ತದಾನ ಮಾಡಲು ಬರುತ್ತಿಲ್ಲ. ಇಂದಿನ ದಿನಗಳಲ್ಲಿ ಅಂಗಾಂಗದಾನ, ರಕ್ತದಾನ ಹೆಚ್ಚಾಗಬೇಕಿದೆ, ಆಕಸ್ಮಿಕ ಮೃತ ವ್ಯಕ್ತಿಯ ಕಣ್ಣು, ದೇಹದ ಅಂಗಗಳ ದಾನ ಮತ್ತೊಬ್ಬರಿಗೆ ಜೀವನದಾನ ಮಾಡುವುದು ಸಮಾಜ ಸೇವೆಯಗುತ್ತದೆ ಎಂದರು.

ನಂತರ ಮಾತನಾಡಿದ ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಎ.ಸಿ. ರಮೇಶ್ ಅವರು, ಕಿಚ್ಚ ಸುದೀಪ್ ಅಭಿಮಾನಗಳು ಮತ್ತು ರೋಟರಿ ಸಂಸ್ಥೆಯ ಸಹಯೋಗದಲ್ಲಿ ಸುದೀಪ್ ಹುಟ್ಟುಹಬ್ಬ ಅಂಗವಾಗಿ ಬೃಹತ್ ರಕ್ತದಾನ ಆಯೋಜಿಸಿ ದ್ದೇವೆ. ಹೆಚ್ಚು ರಕ್ತಸಂಗ್ರಹ ಮಾಡಿ ದಾಖಲೆ ನಿರ್ಮಿಸುವ ಹಂಬಲ ಸಂಸ್ಥೆಯದ್ದಾಗಿದೆ. ನಾಡಿನುದ್ದಗಲ್ಕೂ ಇರುವ ಕಿಚ್ಚ ಅಭಿಮಾನಿಗಳು ರಕ್ತದಾನದಾನದಲ್ಲಿ ಪಾಲ್ಗೊಂಡು ಮಾನವೀಯತೆ ಮೆರೆಯುತ್ತಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರೋಟರಿ ಸಂಸ್ಥೆ ಅಧ್ಯಕ್ಷ ಬರ್ನಾಡಪ್ಪ, ಕಾರ್ಯದರ್ಶಿ ಕೆ.ಎಂ. ಶಿವಕುಮಾರ್, ಮಂಜುನಾಥ್, ಅನುಪಮಾ, ಎಸ್. ನಾರಾಯಣ್,ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ಜಿಲ್ಲಾಧ್ಯಕ್ಷ ಎಂ.ಆರ್. ಸುರೇಶ್ ಅಭಿಮಾನಿಗಳಾದ ಶಿವಕುಮಾರ್,ಮಂಗಲ ಎಸ್.ಕುಮಾರ್, ರಮೇಶ್, ಪುನೀತ್, ಬಸವರಾಜ್ ಮತ್ತಿತರರಿದ್ದರು.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024