ಯುವ ವೈದ್ಯರು ಹಳ್ಳಿಗಳಿಗೆ ಹೋಗಿ ಸೇವೆ ಸಲ್ಲಿಸದಿದ್ದರೆ ಎಷ್ಟೇ ಸಂಖ್ಯೆಯ ಮೆಡಿಕಲ್ ಕಾಲೇಜು ನಿರ್ಮಿಸಿದರೂ ಒಂದೇ, ಬಿಟ್ಟರೂ ಒಂದೇ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ನಾಗಮಂಗಲದ ಆದಿಚುಂಚನಗಿರಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸುಧಾಕರ್ , ಆರೋಗ್ಯ ಕರ್ನಾಟಕದ ಕನಸು ನನಸಾಗಿಸಲು ಪ್ರಾಥಮಿಕ ಹಂತದ ಆರೋಗ್ಯ ಸೌಲಭ್ಯ ಉತ್ತಮವಾಗ ಬೇಕು ಎಂದರು.
1 ಸಾವಿರ ಜನರಿಗೆ 2.2 ಹಾಸಿಗೆ ಸಿಗಬೇಕು. ಆದರೆ ನಮ್ಮಲ್ಲಿ ಒಂದು ಹಾಸಿಗೆ ಇದೆ. ಹೆಚ್ಚಿನ ಆಸ್ಪತ್ರೆ ನಗರಗಳಲ್ಲಿವೆ. ವೈದ್ಯರು ಹಳ್ಳಿಗಳಿಗೆ ಹೋಗಿ ಕಾರ್ಯನಿರ್ವಹಿಸದಿದ್ದರೆ ಎಷ್ಟೇ ಸಂಖ್ಯೆಯ ಮೆಡಿಕಲ್ ಕಾಲೇಜು ನಿರ್ಮಿಸಿದರೂ ಒಂದೇ ಎಂದರು.
ಗ್ರಾಮೀಣ ಸೇವೆ ಉತ್ತೇಜಿಸಲು ನೇಮಕಾತಿ ನಿಯಮಗಳಲ್ಲಿ ಕೆಲ ಬದಲಾವಣೆಗೆ ಯತ್ನಿಸಲಾಗಿದೆ. ಹಳ್ಳಿಗಳಲ್ಲಿ ಕೆಲಸ ಮಾಡುವವರಿಗೆ ಹೆಚ್ಚಿನ ವೇತನ, ಬೇಗ ಬಡ್ತಿ, ಮಕ್ಕಳಿಗೆ ಶಿಕ್ಷಣ ಮೊದಲಾದ ಸೌಲಭ್ಯ ನೀಡಲು ಯತ್ನಿಸಲಾಗುತ್ತಿದೆ ಎಂದರು.
ನನ್ನ ಘಟನೆಯೇ ಸಾಕ್ಷಿ
ನನ್ನೂರು ಚಿಕ್ಕಬಳ್ಳಾಪುರದ ಹಳ್ಳಿ. ನಾನು ವೈದ್ಯ ವ್ಯಾಸಂಗ ಮಾಡುತ್ತಿದ್ದಾಗ ಹಳ್ಳಿಯಲ್ಲಿದ್ದ ತಾಯಿಗೆ ಆರೋಗ್ಯ ಹದಗೆಟ್ಟಿದೆ ಎಂದು ತಿಳಿಯಿತು. ನನ್ನೂರಿನಲ್ಲಿ ಆಂಬ್ಯುಲೆನ್ಸ್ ಸೌಲಭ್ಯ ಇರಲಿಲ್ಲ. ಇದರಿಂದಾಗಿ ನಾನು ತಾಯಿಯ ಬಳಿ ತಲುಪುವ ಹೊತ್ತಿಗೆ ನಿಧನರಾಗಿದ್ದರು. ಈ ರೀತಿ ಸರಿಯಾದ ಸಮಯಕ್ಕೆ ತುರ್ತು ಸೇವೆ ಸಿಗದೆ ಆತ್ಮೀಯರನ್ನು ಕಳೆದುಕೊಳ್ಳುವ ಘಟನೆ ನಡೆಯುತ್ತಲೇ ಇದೆ ಎಂದರು.
ಈಗ ನನಗೆ ಸಿಕ್ಕ ಅವಕಾಶದಲ್ಲಿ, ಆಂಬ್ಯುಲೆನ್ಸ್ ಸೇವೆಯಲ್ಲಿ ಬದಲಾವಣೆ ತಂದಿದ್ದೇನೆ. 2 ಲಕ್ಷ ಜನಸಂಖ್ಯೆಗೆ ಒಂದು ಆಂಬ್ಯುಲೆನ್ಸ್ ಇದ್ದು, ಈಗ ಪ್ರತಿ ಪಿಎಚ್ ಸಿಗೆ ಒಂದು ಆಂಬ್ಯುಲೆನ್ಸ್ ನೀಡಲಾಗುತ್ತಿದೆ. ಒಟ್ಟು 2,400 ಆಂಬ್ಯುಲೆನ್ಸ್ ದೊರೆಯಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 60 ಮೆಡಿಕಲ್ ಕಾಲೇಜುಗಳಿವೆ. ಹೊಸದಾಗಿ 4 ಕಾಲೇಜು ಆರಂಭಿಸಲಾಗಿದೆ. ಒಂದು ಹೊಸ ಕಾಲೇಜನ್ನು ಉದ್ಘಾಟನೆ ಯಾಗಿದೆ. ಇದು ಸೇರಿ ಒಟ್ಟು ಕಾಲೇಜುಗಳ ಸಂಖ್ಯೆ 65 ಕ್ಕೇರಿದೆ ಎಂದರು.
ಆದಿಚುಂಚನಗಿರಿ ಕಾಲೇಜು ಗ್ರಾಮೀಣ ಪ್ರದೇಶದಲ್ಲಿ ನೆಲೆಯಾಗಿರುವುದು ವಿಶೇಷವಾಗಿದ್ದು, ಸ್ವಾಮೀಜಿಗಳ ನಿಸ್ವಾರ್ಥ ಸೇವೆ ಹಾಗೂ ಗ್ರಾಮೀಣ ಪ್ರದೇಶದ ಬಗೆಗಿನ ಕಾಳಜಿಗೆ ಸಾಕ್ಷಿ. ಕೋವಿಡ್ ಬಂದ ಬಳಿಕ ಹತ್ತು ತಿಂಗಳಲ್ಲಿ ಆದಿಚುಂಚನಗಿರಿ ಸಂಸ್ಥೆ 9 ಸಾವಿರ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡಿದೆ ಎಂದರು.
ಬೆಂಗಳೂರು: ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಅಪಘಾತಕ್ಕೆ ವಿಶೇಷ ಚೇತನ ಬಲಿಯಾಗಿರುವ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಯಶವಂತಪುರದಿಂದ… Read More
ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,640 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ಸೆ.19ರಿಂದ ಮ ಆಡಳಿತಾಧಿಕಾರಿ ಮತ್ತು ಜಿಟಿಟಿಸಿಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ನೀಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ… Read More
ನವದೆಹಲಿ: ಇಂದು ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಅತಿಶಿ ಮರ್ಲೆನಾ ಸಿಂಗ್ ಆಯ್ಕೆಯಾಗಿದ್ದಾರೆ. ಅರವಿಂದ್ ಕೇಜ್ರಿವಾಲ್ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ ರಾಜೀನಾಮೆ… Read More
ಬೆಂಗಳೂರು : ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.… Read More
ಇಂದು 400 ವರ್ಷಗಳ ಹಿಂದಿನ ಪುರಾತನ ದೇವಸ್ಥಾನದಲ್ಲಿ ತಮಿಳಿನ ಸ್ಟಾರ್ ನಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ ದಾಂಪತ್ಯ… Read More
This website uses cookies.
Leave a Comment