ನೆರೆಮನೆಯವನು ಪ್ರೀತಿಸುವಂತೆ ಕಿರುಕುಳ ಕೊಡುತ್ತಿದ್ದ ಹಿನ್ನೆಲೆ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ಜರುಗಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ವಸವೆ ಗ್ರಾಮದ ನಿವಾಸಿ ಕುಂಟಿಗೆಯ ಪಟೇಲ್ ಈಶ್ವರಪ್ಪ ಗೌಡ ಪುತ್ರಿ ವಿದ್ಯಾಶ್ರೀ(21) ಮೃತ ಯುವತಿ.
ವಿದ್ಯಾಶ್ರೀ ಹೊಸನಗರದ ಕೊಡಚಾದ್ರಿ ಪದವಿ ಕಾಲೇಜಿನಲ್ಲಿ ಬಿ.ಕಾಂ ಪದವಿ ವ್ಯಾಸಂಗ ಮಾಡುತ್ತಿದ್ದಳು. ನೆರೆ ಮನೆಯ ಯುವಕ ಶಶಾಂಕ್, ವಿದ್ಯಾಶ್ರೀ ಪ್ರತಿ ನಿತ್ಯ ಕಾಲೇಜಿಗೆ ತೆರಳುವ ವೇಳೆ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ.
ವಿದ್ಯಾಶ್ರೀ ಈ ಕಿರುಕುಳಕ್ಕೆ ಬೇಸತ್ತು ಏಪ್ರಿಲ್ 19 ರಂದು ಕ್ರಿಮಿನಾಶಕ ಸೇವಿಸಿದ್ದಳು. ಈ ಹಿನ್ನೆಲೆ ಪೋಷಕರು ಆಕೆಯನ್ನು ಮಣಿಪಾಲಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾಳೆ.
ಈ ಸಾವಿಗೆ ಶಶಾಂಕ್ ಕಾರಣ ಆತನನ್ನು ಬಂಧಿಸಿ ಎಂದು ವಿದ್ಯಾಶ್ರೀ ಸಹೋದರ ರಕ್ಷಿತ್ ಪೊಲೀಸರಿಗೆ ದೂರು ಕೊಟ್ಟಿದ್ದಾನೆ. ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು