ಮಂಡ್ಯ ಜಿಲ್ಲೆಯ ಪಾಂಡವಪುರದಲ್ಲಿ ಉಚಿತ ಗಣೇಶ ಮೂರ್ತಿ ಪಡೆದುಕೊಳ್ಳಲು ಯುವಕರು ಮುಗಿಬಿದ್ದಿದ್ದಾರೆ.
ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ. ಇಂದ್ರೇಶ್ ಗಣೇಶ ಮೂರ್ತಿಗಳನ್ನು ಉಚಿತವಾಗಿ ವಿತರಿಸಿದರು. ಗಣೇಶೋತ್ಸವ ನೆಪದಲ್ಲಿ ಚುನಾವಣೆ ಪ್ರಚಾರಕ್ಕೆ ಮುಂದಾಗಿದ್ದಾರೆ.ನಾಳೆ ನಟಿ ರಮ್ಯಾ ಕೊಡುವ ಗುಡ್ ನ್ಯೂಸ್ ಏನು ಗೊತ್ತಾ?
ಉಚಿತ ಗಣೇಶ ಮೂರ್ತಿ ವಿತರಿಸುವುದಾಗಿ ಹತ್ತು ದಿನಗಳ ಮುಂಚೆಯೇ ಘೋಷಣೆ ಮಾಡಿದ್ದರು. ನೋಂದಣಿ ಮಾಡಿಕೊಳ್ಳುವಂತೆ ಮೇಲುಕೋಟೆ ಕ್ಷೇತ್ರದ ಜನರಿಗೆ ಇಂದ್ರೇಶ್ ಕರೆ ನೀಡಿದ್ದರು.
ಉಚಿತವಾಗಿ ಗಣೇಶ ಮೂರ್ತಿ ಸಿಗುತ್ತದೆ ಎಂಬ ಆಸೆಯಿಂದ ನೂರಾರು ಸಂಖ್ಯೆಯಲ್ಲಿ ಯುವಕರು ಆಗಮಿಸಿದ್ದರು. ಗಣೇಶ ಮೂರ್ತಿಗಾಗಿ ನಾ ಮುಂದು ತಾ ಮುಂದೆ ಎಂದು ಮುಗಿಬಿದ್ದಿದ್ದರು.
ಮೊದಲಿಗೆ ಇಂದ್ರೇಶ್ ಅವರು ತರಿಸಿದ್ದ 600 ಗೌರಿ-ಗಣೇಶ ಮೂರ್ತಿ ಕ್ಷಣಾರ್ಧದಲ್ಲಿ ಖಾಲಿ ಆಯಿತು.
ಯುವಕರ ಸಂಖ್ಯೆ ಹೆಚ್ಚಿದ್ದರಿಂದ ಸ್ಥಳೀಯವಾಗಿ ಮತ್ತಷ್ಟು ಗಣೇಶ ಮೂರ್ತಿ ತರಿಸಿ ಹಂಚಲಾಯಿತು. ಫ್ರೀ ಗಣೇಶನಿಗಾಗಿ ನೂಕು ನುಗ್ಗಲು ಕೂಡ ಹೆಚ್ಚಿತ್ತು. ಪರಿಸ್ಥಿತಿ ನಿಭಾಯಿಸಲು ಇಂದ್ರೇಶ್ ಬೆಂಬಲಿಗರು ಹರಸಾಹಸ ಪಟ್ಟರು.
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
- SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ
- ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ
- ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
- ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ
- ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ
ಆದರೂ ಕೆಲ ಯುವಕರ ತಂಡಕ್ಕೆ ಗಣೇಶ ಸಿಗದೇ ನಿರಾಸೆಯಾಯಿತು.