ಗುಂಡ್ಲುಪೇಟೆ ತಾಲೂಕಿನ ನಡುರಸ್ತೆಯಲ್ಲೇ ಬೈಕ್ನಲ್ಲಿ ರೈಡ್ ಮಾಡುತ್ತಲೇ ಸಾರ್ವಜನಿಕವಾಗಿ ಲಿಪ್ಲಾಕ್ (ಪರಸ್ಪರ ಚುಂಬನ) ಮಾಡಿದ್ದ ಪ್ರೇಮಿಗಳಿಗೆ ಚಾಮರಾಜನಗರ ಪೊಲೀಸರು ಶಾಕ್ ನೀಡಿದ್ದಾರೆ.
ಈ ಘಟನೆಯ ಬಗ್ಗೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ, ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದು ಪತ್ತೆಹಚ್ಚಲು ಕ್ರಮ ಕೈಗೊಂಡರು.
ಬೈಕ್ ಸವಾರನ ವಿರುದ್ಧ ಚಾಮರಾಜನಗರ ಸಂಚಾರ ಠಾಣೆಯ ಪೊಲೀಸರು ಸಂಚಾರ ನಿಯಮ ಕಾನೂನು ಉಲ್ಲಂಘನೆ ಅಡಿಯಲ್ಲಿ ಸ್ವಪ್ರೇರಿತ ದೂರು ದಾಖಲು ಮಾಡಿಕೊಂಡರು.
ಮೊ.ನಂ: 39/2022 ಕಲಂ 279 IPC ಮತ್ತು 184 IMV ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
KA-10-EA-5121 ಪಲ್ಸರ್ ಬೈಕ್ನ RC ಮಾಲೀಕನಿಂದ ವಿವರ ಪಡೆದು, ಬೈಕ್ ಸವಾರ ಹೆಚ್.ಡಿ.ಕೋಟೆ ತಾಲೂಕಿನ ಶಿವಪುರ ಗ್ರಾಮದ ನಿವಾಸಿ ಎಸ್.ಸಿಸ್ವಾಮಿ ಅನ್ನು ವಶಕ್ಕೆ ಪಡೆದು ಕಾನೂನು ಕ್ರಮ ಕೈಗೊಂಡಿದ್ದಾರೆ.
ಚಾಮರಾಜನಗರದ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕ ತಿಮ್ಮರಾಜು, ಪಿಎಸ್ಐ ನಂದೀಶ್ಕುಮಾರ್ ಅವರ ನೇತೃತ್ವದಲ್ಲಿ ಸಿಬ್ಬಂದಿ ಸಿ.ಚಿಕ್ಕಣ್ಣ, ಬಿ.ಕೆ.ಜಯರಾಮು, ಜಿ.ಬಿ.ಮಹದೇವಸ್ವಾಮಿ, ಟಿ.ಕೆ.ಜಗದೀಶ್, ಪಿ.ನವೀನ್ಕುಮಾರ್ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು