February 25, 2026

Newsnap Kannada

The World at your finger tips!

youth

ಯಡಿಯೂರಪ್ಪನವರು ಸುರಿಸಿದ ಕಣ್ಣೀರಿನಿಂದ ಮನನೊಂದು ಯುವಕ ಆತ್ಮಹತ್ಯೆ !

Spread the love

ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದಕ್ಕೆ ಮನನೊಂದ ಬಿಎಸ್​ವೈ ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಬೊಮ್ಮಾಲಾಪುರ ದಲ್ಲಿ ಜರುಗಿದೆ.

ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ನಡೆದಿದೆ. ರವಿ (35) ಮೃತ ದುರ್ದೈವಿ.

ರವಿ ಹೋಟೆಲ್​ನಲ್ಲಿ ಕೆಲಸ ಮಾಡಿಕೊಂಡಿದ್ದ. ಯಡಿಯೂರಪ್ಪನವರ ಅಪ್ಪಟ ಅಭಿಮಾನಿ.‌ ನಿನ್ನೆ ಸಿಎಂ ಸ್ಥಾನಕ್ಕೆ ಬಿಎಸ್​ವೈ ರಾಜೀನಾಮೆ ಕೊಡುತ್ತಿದ್ದಂತೆ ಮಂಕಾಗಿದ್ದ. ರಾಜೀನಾಮೆ ಘೋಷಣೆಯ ವಿಡಿಯೋವನ್ನು ಪದೇಪದೆ ನೋಡಿದ ರವಿ, ಯಡಿಯೂರಪ್ಪ ಅವರು ಕಣ್ಣೀರು ಸುರಿಸಿದ್ದು ಬೇಸರ ತಂದಿದೆ ಎಂದು ಗ್ರಾಮದ‌ ಗುರುಸ್ವಾಮಿ ಬಳಿ ಹೇಳಿಕೊಂಡಿದ್ದ. ರಾತ್ರಿವರೆಗೂ ಇದೇ ಬೇಸರದಲ್ಲಿದ್ದ. ಬೆಳಗ್ಗೆ ಅವನ ಕ್ಯಾಂಟೀನ್ ಬಳಿಗೆ ಬಂದಾಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

2017ರಲ್ಲಿ ನಡೆದ ಉಪಚುನಾವಣೆಗೆ ಹಾಲಿ ಶಾಸಕ ನಿರಂಜನ್ ಕುಮಾರ್ ಪರ ಬಿ.ಎಸ್.ಯಡಿಯೂರಪ್ಪ ಪ್ರಚಾರ ಮಾಡಲು ಗುಂಡ್ಲುಪೇಟೆಗೆ ಆಗಮಿಸಿದ್ದರು.‌ ಈ ವೇಳೆ ಅವರ ಜತೆಗೆ ರವಿ ಊರುಕೇರಿಗಳನ್ನು ಸುತ್ತಿದ್ದ. ಮಾತು ಮಾತಿ.

error: Content is protected !!