April 2, 2025

Newsnap Kannada

The World at your finger tips!

police 1

ಮಂಡ್ಯ: KSRTC ಬಸ್ ಚಕ್ರಕ್ಕೆ ತಲೆಕೊಟ್ಟು ಯುವಕ ಆತ್ಮಹತ್ಯೆ ಗೆ ಶರಣು

Spread the love

ಮಂಡ್ಯ : ಜಿಲ್ಲೆಯ ಮದ್ದೂರಿನಲ್ಲಿ ಯುವಕನೊಬ್ಬ KSRTC ಬಸ್ ಚಕ್ರಕ್ಕೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಈ ದುರ್ಘಟನೆ ಮದ್ದೂರು KSRTC ಬಸ್ ನಿಲ್ದಾಣದ ಬಳಿ ನಡೆದಿದೆ.

ಮೃತ ಯುವಕನನ್ನು ತೂಬಿನಕೆರೆ ಗ್ರಾಮದ 23 ವರ್ಷದ ಅರುಣ್ ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಬಸ್ ಟರ್ನ್ ತೆಗೆದುಕೊಳ್ಳುವ ಸಂದರ್ಭದಲ್ಲಿ ಅರುಣ್ ಏಕಾಏಕಿ ಬಸ್ಸಿನ ಹಿಂಬದಿ ಚಕ್ರಕ್ಕೆ ತಲೆಕೊಟ್ಟಿದ್ದಾನೆ.

ಬಸ್ ಚಕ್ರ ತಲೆಗೆ ಹರಿದ ಪರಿಣಾಮ ಅರುಣ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಇದನ್ನು ಓದಿ -SSLC ಪಾಸಾದವರಿಗೆ ಸರ್ಕಾರಿ ಉದ್ಯೋಗ

ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮದ್ದೂರು ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Copyright © All rights reserved Newsnap | Newsever by AF themes.
error: Content is protected !!