ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಪೊಲೀಸರು ಬಡವರಿಗೊಂದು ರೂಲ್ಸ್ ಶ್ರೀಮಂತರಿಗೊಂದು ರೂಲ್ಸ್ ಎಂಬಂತೆ ವರ್ತನೆ ಮಾಡುತ್ತಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯ ಮೇಲೆ ಸಂಚಾರಕ್ಕೆ ನಿರ್ಬಂಧ ಹೇರಿದ್ದರೂ ಪೊಲೀಸರು ತಮ್ಮ ಜೀಪ್ನ್ನು ನೀಡಿ ಡ್ಯಾಂ ಮೇಲೆ ಯುವಕನೋರ್ವನಿಗೆ ಚಲಾಯಿಸಲು ಅವಕಾಶ ನೀಡಿರುವುದು ಸಾಕಷ್ಟು ವಿವಾದಕ್ಕೆ ಎಡೆ ಮಾಡಿದೆ.
ಮಂಡ್ಯ ಜಿಲ್ಲೆಯ ಪೊಲೀಸರು ಬಡವರಿಗೊಂದು ಕಾನೂನು ಶ್ರೀಮಂತರಿಗೊಂದು ಕಾನೂನು ಎಂಬ ರೀತಿಯಲ್ಲಿ ವರ್ತಿಸುತ್ತಿದ್ದಾರೆ.
ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿ ತನ್ನ ಜೀಪ್ ಯುವಕನಿಗೆ ನೀಡಿದ್ದರಿಂದ ಡ್ಯಾಂ ಮೇಲೆ ಓಡಿಸಿದ್ದಾನೆ.
ಈ ಯುವಕ ಡ್ರೈವ್ ಮಾಡುವ ವೇಳೆ ಪೊಲೀಸ್ ಅಧಿಕಾರಿಯೇ ವೀಡಿಯೋ ಮಾಡಿದ್ದಾರೆ. ಯುವಕ ಈ ವಿಡಿಯೋಗೆ ಹೆಬ್ಬುಲಿ ಸಿನಿಮಾದ ಹಾಡು ಹಾಕಿ ವಾಟ್ಸಪ್ಗೆ ಹಾಕಿದ್ದಾನೆ.
ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ಜನ ಸಾಮಾನ್ಯರು ಪೊಲೀಸರ ಈ ನಡೆಗೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಬಡ ವ್ಯಾಪಾರಿ ಮೇಲೆ ಹಲ್ಲೆ
ಕೆಆರ್ಎಸ್ ಅಣೆಕಟ್ಟೆಯ ಭದ್ರತೆಯ ನೆಪದಲ್ಲಿ ಕೆಲವು ದಿನಗಳ ಹಿಂದೆ ಪೊಲೀಸ್ ಪೇದೆ ಹುಚ್ಚೇಗೌಡ, ಬೀದಿ ಬದಿ ವ್ಯಾಪಾರಿ ಮುದ್ದ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು.
ಬೃಂದಾವನದ ದ್ವಾರದ ಬಳಿ ಮುದ್ದ ವ್ಯಾಪಾರ ಮಾಡುವ ವೇಳೆ ಇಲ್ಲಿ ವ್ಯಾಪಾರ ಮಾಡಿದ್ದರೆ ಭದ್ರತೆಗೆ ಲೋಪವಾಗುತ್ತದೆ ಎಂದು ಹಲ್ಲೆ ಮಾಡಲಾಗಿತ್ತು. ವ್ಯಾಪಾರಿ ಮುದ್ದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More
ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More
ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್ನಲ್ಲಿ ಘೋಷಣೆ… Read More
ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More
ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More
This website uses cookies.
Leave a Comment