ಜೆಡಿಎಸ್ ಪಕ್ಷದ ಹಿರಿಯ ನಾಯಕ, ಮಾಜಿ ಶಾಸಕ ವೈಎಸ್ವಿ ದತ್ತ ಅವರು ಇಂದು ಬೆಳಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ನಿವಾಸಕ್ಕೆ ಬೆಂಬಲಿಗರೊಂದಿಗೆ ಭೇಟಿ ಕೊಟ್ಟಿದ್ದಾರೆ.
ಕಡೂರು ಕ್ಷೇತ್ರದ ನೂರಾರು ಬೆಂಬಲಿಗರೊಂದಿಗೆ ಆಗಮಿಸಿ ದತ್ತ ಅವರು, ಅಧಿವೇಶನದಲ್ಲಿ ರಾಗಿ ಬೆಳೆದ ರೈತರ ಸಮಸ್ಯೆಗಳು ಹಾಗೂ ರಾಗಿ ಖರೀದಿ ಬಗ್ಗೆ ಮಾತನಾಡಿ ಒತ್ತಾಯಿಸಲು ಮನವಿ ಮಾಡಿದರು.
ವೈ.ಎಸ್.ವಿ ದತ್ತ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಿ ಎಂದು ಬಹಿರಂಗವಾಗಿಯೇ ದತ್ತ ಬೆಂಬಲಿಗರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಅಭಿಮಾನಿಗಳು ಮನವಿ ಮಾಡುತ್ತಿದಂತೆ ‘ಸುಮ್ಮನಿರಿ’ ಎಂದು ವೈ.ಎಸ್.ವಿ. ದತ್ತ ಅವರು ಅಭಿಮಾನಿಗಳ ಮಾತನ್ನು ತಡೆಯುವ ಪ್ರಯತ್ನ ಮಾಡಿದರು.
ಆದರೂ ಬಿಡದ ದತ್ತ ಅಭಿಮಾನಿಗಳು ‘ಸಿದ್ದರಾಮಯ್ಯನವರೇ ಕೃಷ್ಣಮೂರ್ತಿ ಅವರ ಕಾಲದಿಂದಲೂ ನೀವು ಹೇಳಿದಂತೇ ಮಾಡಿದ್ದೀವಿ, ಇದೊಂದು ಬಾರಿ ದತ್ತ ಅವರಿಗೆ ಅವಕಾಶ ಮಾಡಿಕೊಡಿ’ ಎಂದು ಮನವಿ ಮಾಡಿದರು.
ಆದರೆ ಅಭಿಮಾನಿಗಳ ಬೇಡಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ಹೂಂ ಎಂದು ಸುಮ್ಮನಾದರು
ನಂತರ ಮಾತನಾಡಿದ ದತ್ತ ಅವರು, ನನ್ನ ಬೆಂಬಲಿಗರು, ಅಭಿಮಾನಿಗಳು ಅವರ ಅಭಿಪ್ರಾಯ, ಭಾವನೆಯನ್ನು ಸಿದ್ಧರಾಮಯ್ಯ ಬಳಿ ಹೇಳಿದ್ದಾರೆ. ಅವರ ಅಭಿಪ್ರಾಯ ತಪ್ಪು ಅಂತಲೂ ಹೇಳಲ್ಲ, ಸರಿ ಅಂತಲೂ ಹೇಳಲ್ಲ. ಈಗಲೇ ನಾನು ಆ ಬಗ್ಗೆ ಏನೂ ಹೇಳಲ್ಲ. ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಸದ್ಯಕ್ಕೆ ನನ್ನದು ಮೌನವೇ ಉತ್ತರ ಎಂದು ಹೇಳಿದರು.
- ರಾಜ್ಯದ ಹವಾಮಾನ ವರದಿ (Weather Report) 22-05-2022
- ಮುಂಬೈ ಇಂಡಿಯನ್ ಗೆ ರೋಚಕ ಗೆಲುವು – RCB ಸೆಮಿಫೈನಲ್ಸ್ ಗೆ DC ತಂಡ ಟೂರ್ನಿಯಿಂದ ಹೊರಕ್ಕೆ
- ಲೀಯಾ – ಪೀಟರ್ ‘ ಬರ್ತ್ ಡೇ’ ಶಾಪಿಂಗ್ಗೆ ಹೋಗಿದ್ದ ಪ್ರೇಮಿಗಳು : ಯುವಕನಿಂದ ಮಾಹಿತಿ
- ದೇಶದ ಜನತೆಗೆ ಸಿಹಿ ಸುದ್ದಿ:ಪೆಟ್ರೋಲ್, ಗ್ಯಾಸ್, ಸಿಮೆಂಟ್, ಗೊಬ್ಬರ, ಪ್ಲಾಸ್ಟಿಕ್, ಉಕ್ಕು ದರ ಇಳಿಕೆ
- ಕೇಂದ್ರ ಸರ್ಕಾರದಿಂದ ಅಬಕಾರಿ ಸುಂಕ ಇಳಿಕೆ! ಪೆಟ್ರೋಲ್ ಪ್ರತಿ ಲೀಟರ್ ಗೆ ₹ 8 ಡೀಸೆಲ್ ₹ 6 ಕಡಿತ
More Stories
ರಾಜ್ಯದ ಹವಾಮಾನ ವರದಿ (Weather Report) 22-05-2022
ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು-ಬೆಂಡಿಗೇರಿ ಪ್ರಕ್ಷುಬ್ಧ : ಪೊಲೀಸ್ ಬಂದೋಬಸ್ತು
ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ಬಿದ್ದವರು ಪ್ರೇಮಿಗಳಲ್ಲ – ಕೇವಲ ಸ್ನೇಹಿತರು