ಜೆಡಿಎಸ್ ಪಕ್ಷದ ಹಿರಿಯ ನಾಯಕ, ಮಾಜಿ ಶಾಸಕ ವೈಎಸ್ವಿ ದತ್ತ ಅವರು ಇಂದು ಬೆಳಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ನಿವಾಸಕ್ಕೆ ಬೆಂಬಲಿಗರೊಂದಿಗೆ ಭೇಟಿ ಕೊಟ್ಟಿದ್ದಾರೆ.
ಕಡೂರು ಕ್ಷೇತ್ರದ ನೂರಾರು ಬೆಂಬಲಿಗರೊಂದಿಗೆ ಆಗಮಿಸಿ ದತ್ತ ಅವರು, ಅಧಿವೇಶನದಲ್ಲಿ ರಾಗಿ ಬೆಳೆದ ರೈತರ ಸಮಸ್ಯೆಗಳು ಹಾಗೂ ರಾಗಿ ಖರೀದಿ ಬಗ್ಗೆ ಮಾತನಾಡಿ ಒತ್ತಾಯಿಸಲು ಮನವಿ ಮಾಡಿದರು.
ವೈ.ಎಸ್.ವಿ ದತ್ತ ಅವರನ್ನು ಕಾಂಗ್ರೆಸ್ ಗೆ ಸೇರಿಸಿಕೊಳ್ಳಿ ಎಂದು ಬಹಿರಂಗವಾಗಿಯೇ ದತ್ತ ಬೆಂಬಲಿಗರು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.
ಅಭಿಮಾನಿಗಳು ಮನವಿ ಮಾಡುತ್ತಿದಂತೆ ‘ಸುಮ್ಮನಿರಿ’ ಎಂದು ವೈ.ಎಸ್.ವಿ. ದತ್ತ ಅವರು ಅಭಿಮಾನಿಗಳ ಮಾತನ್ನು ತಡೆಯುವ ಪ್ರಯತ್ನ ಮಾಡಿದರು.
ಆದರೂ ಬಿಡದ ದತ್ತ ಅಭಿಮಾನಿಗಳು ‘ಸಿದ್ದರಾಮಯ್ಯನವರೇ ಕೃಷ್ಣಮೂರ್ತಿ ಅವರ ಕಾಲದಿಂದಲೂ ನೀವು ಹೇಳಿದಂತೇ ಮಾಡಿದ್ದೀವಿ, ಇದೊಂದು ಬಾರಿ ದತ್ತ ಅವರಿಗೆ ಅವಕಾಶ ಮಾಡಿಕೊಡಿ’ ಎಂದು ಮನವಿ ಮಾಡಿದರು.
ಆದರೆ ಅಭಿಮಾನಿಗಳ ಬೇಡಿಕೆಗೆ ಯಾವುದೇ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ಹೂಂ ಎಂದು ಸುಮ್ಮನಾದರು
ನಂತರ ಮಾತನಾಡಿದ ದತ್ತ ಅವರು, ನನ್ನ ಬೆಂಬಲಿಗರು, ಅಭಿಮಾನಿಗಳು ಅವರ ಅಭಿಪ್ರಾಯ, ಭಾವನೆಯನ್ನು ಸಿದ್ಧರಾಮಯ್ಯ ಬಳಿ ಹೇಳಿದ್ದಾರೆ. ಅವರ ಅಭಿಪ್ರಾಯ ತಪ್ಪು ಅಂತಲೂ ಹೇಳಲ್ಲ, ಸರಿ ಅಂತಲೂ ಹೇಳಲ್ಲ. ಈಗಲೇ ನಾನು ಆ ಬಗ್ಗೆ ಏನೂ ಹೇಳಲ್ಲ. ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಸದ್ಯಕ್ಕೆ ನನ್ನದು ಮೌನವೇ ಉತ್ತರ ಎಂದು ಹೇಳಿದರು.
ಹೆಚ್.ಡಿ ರೇವಣ್ಣಗೆ ಮಧ್ಯಾಹ್ನದಿಂದ ಹೊಟ್ಟೆ ಉರಿ, ಎದೆನೋವು ಬೌರಿಂಗ್ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿದ್ದ ಎಸ್ಐಟಿ ಅಧಿಕಾರಿಗಳು ಎದೆ ಉರಿ… Read More
ಬೆಂಗಳೂರು : ಸೋಮವಾರ ಬಾಗಲಕೋಟೆ ಮತ್ತು ಬೀದರ್ ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿತರಾಗಿದ್ದ ಸರ್ಕಾರಿ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಸಹಾಯಕ… Read More
ನವದೆಹಲಿ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನದಲ್ಲಿ ಶೇ. 9.45% ರಷ್ಟು ಮತದಾನವಾಗಿದೆ ಎಂದು ಎಂದು ಚುನಾವಣಾ… Read More
ಶಿವಮೊಗ್ಗ : ರಾಷ್ಟ್ರ ಮಟ್ಟದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈ ಪ್ರಕರಣ ಸದ್ದು ಮಾಡುತ್ತಿದ್ದು, ಪ್ರಜ್ವಲ್… Read More
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮೊದಲ ಬಾರಿಗೆ ಪ್ರಜ್ವಲ್ ರೇವಣ್ಣ (Prajwal Revanna) ವಿಡಿಯೋ ಪ್ರಕರಣಕ್ಕೆ… Read More
ಮಂಡ್ಯ :ನೆನ್ನೆ ಮಳೆಯಿಂದಾಗಿ ಮರವೊಂದು ಕಾರಿನ ಮೇಲೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ನಗರದ ಜನರಲ್… Read More
This website uses cookies.
Leave a Comment