ಮುಂದಿನ ಸಿಎಂ ವಿಚಾರವಾಗಿ ನಮ್ಮ ಪಕ್ಷದ ಜಮೀರ್ ಅಹಮದ್ ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ. ಆದರೆ ಪಕ್ಷ ಕಟ್ಟುವ ಸಾಮರ್ಥ್ಯ, ಜವಾಬ್ದಾರಿ ಇರುವ ನಾಯಕ ಹಾಗೂ ಯಾರಿಗೆ ನಾಲಿಗೆ ಮೇಲೆ ಹಿಡಿತ ಇರುತ್ತದೆಯೋ ಅವರು ಈ ರೀತಿ ಮಾತನಾಡೋದಿಲ್ಲ ಎಂದು ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟಾಂಗ್ ಕೊಟ್ಟಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಶಾಸಕರಾದವರು ಈ ರೀತಿ ಮಾತನಾಡಬಾರದು. ಈ ಮಾತು ಮುಂದಿನ ಬಾರಿ ಅಧಿಕಾರ ಹಿಡಿಯುವ ಪಕ್ಷದ ಗುರಿಗೆ ಹಿನ್ನಡೆಯಾಗುತ್ತದೆ. ಮಾತನಾಡುವವರು ಇದನ್ನು ಅರಿತುಕೊಂಡು ಮಾತನಾಡಬೇಕು ಎಂದು ಹೇಳಿದರು.
ಅನಗತ್ಯ ಹಾಗೂ ಬಹಿರಂಗವಾಗಿ ಈ ವಿಚಾರ ಚರ್ಚೆ ಮಾಡದಂತೆ ಈಗಾಗಲೇ ನಮ್ಮ ಪಕ್ಷದಲ್ಲಿ ಸೂಚನೆ ನೀಡಲಾಗಿದೆ. ಆದರೂ ಕೂಡ ಈ ವಿಚಾರವಾಗಿ ಮಾತನಾಡಿದವರ ವಿರುದ್ಧ ಶಿಸ್ತು ಸಮಿತಿ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದರು.
ಮುಂದಿನ ಸಿಎಂ ವಿಚಾರವಾಗಿ ನಮ್ಮ ಪಕ್ಷದಲ್ಲಿ ವಿಭಿನ್ನ ಅಭಿಪ್ರಾಯ ಕೇಳಿಬರುತ್ತಿದೆ. ನಮ್ಮಲ್ಲಿ ಸಿಎಂ ಅರ್ಹತೆ ಇರುವವರು ಬಹಳ ಜನ ಇರುವುದರಿಂದ ಈ ಮಾತು ಕೇಳಿ ಬರುತ್ತಿದೆ. ಆದರೆ ಬಿಜೆಪಿಯವರಿಗೆ ಯಡಿಯೂರಪ್ಪ ಬಿಟ್ಟರೆ ಗತಿ ಇಲ್ಲ ಎಂದು ಖರ್ಗೆ ವ್ಯಂಗ್ಯವಾಡಿದ್ದಾರೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ