Main News

ಚಿಕ್ಕಬಳ್ಳಾಪುರದಲ್ಲಿ ಮಾರಕ ಝಿಕಾ ವೈರಸ್‌ ಪತ್ತೆ

ಚಿಕ್ಕಬಳ್ಳಾಪುರ : ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿ ಸೊಳ್ಳೆಗಳನ್ನ ಪರೀಕ್ಷೆಗೆ ಒಳಪಡಿಸಿದಾಗ ಸೊಳ್ಳೆಗಳಲ್ಲಿ ಝಿಕಾ ವೈರಸ್ ಇರುವುದಕ್ಕೆ ಕಂಡುಕೊಳ್ಳಲಾಗಿದೆ.

ಸಲಕಾಯಲಬೆಟ್ಟ ಗ್ರಾಮ ಸೇರಿದಂತೆ ಸುತ್ತಮುತ್ತಲ 5 ಕಿಮೀ ವ್ಯಾಪ್ತಿಯಲ್ಲಿ ಆರೋಗ್ಯ ಇಲಾಖೆಯಿಂದ ರ‍್ಯಾಂಡಮ್‌ ಚೆಕಪ್‌ ಮಾಡಲಾಗುತ್ತಿದ್ದು, ತಲಕಾಯಲಬೆಟ್ಟ, ದಿಬ್ಬೂರಹಳ್ಳಿ, ವಡ್ಡಹಳ್ಳಿ, ಬಚ್ಚಹಳ್ಳಿ ಗ್ರಾಮದ 880 ಮನೆಗಳಲ್ಲಿ ಸರಿಸುಮಾರು 4,800 ಜನರ ಮೇಲೆ ಆರೋಗ್ಯ ಇಲಾಖೆ ನಿಗಾವಹಿಸಿದೆ ಅಂತ ಆರೋಗ್ಯ ಇಲಾಖೆ ತಿಳಿಸಿದೆ.

ಝಿಕಾ ವೈರಸ್ :

ಸೊಳ್ಳೆ ಕಡಿತದ ಮೂಲಕ ಝಿಕಾ ವೈರಸ್ ಸೋಂಕು ಹರಡುತ್ತದೆ. ಇದು ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾದಂತಹ ಸೋಂಕುಗಳನ್ನು ಹರಡುತ್ತದೆ. ಈ ವೈರಸ್ ಅನ್ನು ಮೊದಲು 1947ರಲ್ಲಿ ಉಗಾಂಡಾದಲ್ಲಿ ಗುರುತಿಸಲಾಯಿತು. ಕೇರಳದಲ್ಲಿ 2021ರಲ್ಲಿ ಮೊದಲ ಝಿಕಾ ವೈರಸ್ ಪ್ರಕರಣ ಪತ್ತೆಯಾಗಿತ್ತು

ಝಿಕಾ ವೈರಸ್ ನಿವಾರಣಾ ಕ್ರಮವೇನು:

ಈ ಸೋಂಕು ತಗುಲಿದವರಿಗೆ ಹೆಚ್ಚು ದ್ರವಾಹಾರ ಸೇವಿಸುವಂತೆ ತಿಳಿಸಲಾಗುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಳದ ಆಹಾರ ಸೇವಿಸಲು ಸಲಹೆ ನೀಡಲಾಗಿದೆ.

ಝಿಕಾ ಸೋಂಕಿನ ಲಕ್ಷಣಗಳೇನು:

ಸೋಂಕು ಅತಿ ಗಂಭೀರ ಸ್ವರೂಪ ತಾಳುವುದಿಲ್ಲ. ಈ ಸೋಂಕಿನಿಂದ ಸಾವು ಸಂಭವಿಸುವ ಸಾಧ್ಯತೆಯೂ ಕಡಿಮೆ. ಎರಡು ದಿನಗಳಿಂದ ಏಳು ದಿನಗಳವರೆಗೆ ಈ ಲಕ್ಷಣಗಳು ಇರುತ್ತವೆ. ಜಾಂಡಿಸ್ ಬಗೆಯ ಲಕ್ಷಣಗಳು ರೋಗಿಯಲ್ಲಿ ಗೋಚರವಾಗಬಹುದು. ಬದಲಾಗಬೇಕಿರುವುದು ರಾಜ್ಯದ ಹೆಸರಲ್ಲ…. ನಿರಭಿಮಾನದ ಕೆಸರು…. 

ಕಣ್ಣು ಕೆಂಪಗಾಗುವುದು, ಜ್ವರ, ಗಂಟು ನೋವು, ಕೀಲು, ಸ್ನಾಯು ನೋವು ಇದರ ಸಾಮಾನ್ಯ ಲಕ್ಷಣ. ತಲೆನೋವು, ಕೆಂಪು ಕಲೆಗಳೂ ಆಗುತ್ತವೆ.

Team Newsnap
Leave a Comment

Recent Posts

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024

SSLC ವಿದ್ಯಾರ್ಥಿಗಳಿಗೆ ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ಇಲ್ಲ: ಮಧು ಬಂಗಾರಪ್ಪ

ಬೆಂಗಳೂರು : ಶಿಕ್ಷಣ ಸಚಿವ ಮಧು ಬಂಗಾರಪ್ಪ , ಮುಂದಿನ ವರ್ಷದಿಂದ SSLC ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಲಾಗುವುದಿಲ್ಲ ಎಂದು… Read More

May 17, 2024

ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಾಸ್ಟೆಲ್ ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು : ಆನೇಕಲ್ ತಾಲೂಕಿನ ಚಂದಾಪುರ ಸಮೀಪದ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅರಸೀಕೆರೆ ಮೂಲದ ಕರಡಿಹಳ್ಳಿ… Read More

May 17, 2024

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024