ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ.
ಜಿಪಂ, ತಾಪಂ ಸದಸ್ಯರ ಸಂಖ್ಯೆ, ಕ್ಷೇತ್ರಗಳ ಗಡಿ ನಿಗದಿ ಮಾಡಿ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ನಿಗದಿಗೊಳಿಸಿದ್ದು, ಸೋಮವಾರ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ.
ಆಕ್ಷೇಪಣೆ ಸಲ್ಲಿಕೆಗೆ ಜನವರಿ 16 ಕೊನೆಯ ದಿನವಾಗಿದೆ.ಬೆಂಗಳೂರಿನಲ್ಲಿ ನಾಲ್ವರು ಕಂದಾಯ ಇಲಾಖೆ ಅಧಿಕಾರಿ ಅಮಾನತು
ಆನ್ ಲೈನ್ ಮೂಲಕ ಅಥವಾ ಖುದ್ದಾಗಿ ಅಥವಾ ಅಂಚೆಯ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ನಿಗದಿತ ದಿನಾಂಕದ ನಂತರ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. https//rdpr.karnataka.gov.in/rdc/public/ ನಲ್ಲಿ ಮುಖಪುಟದ ಎಡ ಭಾಗದಲ್ಲಿರುವ ಸಾರ್ವಜನಿಕರ ಸಲಹೆಗಳು ಎಂಬ ಶೀರ್ಷಿಕೆ ಕ್ಲಿಕ್ ಮಾಡಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಇಲ್ಲವೇ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, ಮೂರನೇ ಗೇಟ್, ಎರಡನೇ ಮಹಡಿ, ಕೊಠಡಿ ಸಂಖ್ಯೆ 222/ಎ ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀದಿ, ಬೆಂಗಳೂರು -1 ಈ ವಿಳಾಸಕ್ಕೆ ಆಕ್ಷೇಪಣೆ ಸಲ್ಲಿಸಬಹುದು.
ಕರಡು ಅಧಿಸೂಚನೆಯ ನಂತರ ಕ್ಷೇತ್ರಾವಾರು ವಿವರ :
ಬೆಂಗಳೂರು ನಗರ ಜಿಲ್ಲೆ 28, ಗ್ರಾಮಾಂತರ ಜಿಲ್ಲೆ 25, ಕೋಲಾರ 29, ರಾಮನಗರ 28, ಚಿಕ್ಕಬಳ್ಳಾಪುರ 29, ವಿಜಯನಗರ 28, ಬಳ್ಳಾರಿ 28, ಕೊಪ್ಪಳ 31, ರಾಯಚೂರು 38, ಬೀದರ್ 35, ಯಾದಗಿರಿ 28, ಹಾವೇರಿ 34, ವಿಜಯಪುರ 44, ಭಾಗಲಕೋಟೆ 35, ಉತ್ತರ ಕನ್ನಡ 54, ಕಲಬುರ್ಗಿ 48, ಗದಗ 25, ಧಾರವಾಡ 28, ಬೆಳಗಾವಿ 91, ಉಡುಪಿ 28, ದಕ್ಷಿಣ ಕನ್ನಡ 35, ಕೊಡಗು 25, ಚಾಮರಾಜನಗರ 28, ಚಿಕ್ಕಮಗಳೂರು 36, ಹಾಸನ 39, ಮಂಡ್ಯ 40, ಮೈಸೂರು 46, ಶಿವಮೊಗ್ಗ 31, ಚಿತ್ರದುರ್ಗ 37, ತುಮಕೂರು 57, ರಾಮನಗರ 28, ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಇದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು