Main News

ಜಿಪಂ ತಾಪಂ ಚುನಾವಣೆ:ಕ್ಷೇತ್ರ ಮರು ವಿಂಗಡಣೆ ಕರಡು ಪಟ್ಟಿ ಪ್ರಕಟ

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವಿಂಗಡಣೆ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ.

ಜಿಪಂ, ತಾಪಂ ಸದಸ್ಯರ ಸಂಖ್ಯೆ, ಕ್ಷೇತ್ರಗಳ ಗಡಿ ನಿಗದಿ ಮಾಡಿ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ನಿಗದಿಗೊಳಿಸಿದ್ದು, ಸೋಮವಾರ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ.

ಆಕ್ಷೇಪಣೆ ಸಲ್ಲಿಕೆಗೆ ಜನವರಿ 16 ಕೊನೆಯ ದಿನವಾಗಿದೆ.ಬೆಂಗಳೂರಿನಲ್ಲಿ ನಾಲ್ವರು ಕಂದಾಯ ಇಲಾಖೆ ಅಧಿಕಾರಿ ಅಮಾನತು

ಆನ್ ಲೈನ್ ಮೂಲಕ ಅಥವಾ ಖುದ್ದಾಗಿ ಅಥವಾ ಅಂಚೆಯ ಮೂಲಕ ಆಕ್ಷೇಪಣೆ ಸಲ್ಲಿಸಬಹುದಾಗಿದೆ.

ನಿಗದಿತ ದಿನಾಂಕದ ನಂತರ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. https//rdpr.karnataka.gov.in/rdc/public/ ನಲ್ಲಿ ಮುಖಪುಟದ ಎಡ ಭಾಗದಲ್ಲಿರುವ ಸಾರ್ವಜನಿಕರ ಸಲಹೆಗಳು ಎಂಬ ಶೀರ್ಷಿಕೆ ಕ್ಲಿಕ್ ಮಾಡಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಇಲ್ಲವೇ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, ಮೂರನೇ ಗೇಟ್, ಎರಡನೇ ಮಹಡಿ, ಕೊಠಡಿ ಸಂಖ್ಯೆ 222/ಎ ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀದಿ, ಬೆಂಗಳೂರು -1 ಈ ವಿಳಾಸಕ್ಕೆ ಆಕ್ಷೇಪಣೆ ಸಲ್ಲಿಸಬಹುದು.

ಕರಡು ಅಧಿಸೂಚನೆಯ ನಂತರ ಕ್ಷೇತ್ರಾವಾರು ವಿವರ :

ಬೆಂಗಳೂರು ನಗರ ಜಿಲ್ಲೆ 28, ಗ್ರಾಮಾಂತರ ಜಿಲ್ಲೆ 25, ಕೋಲಾರ 29, ರಾಮನಗರ 28, ಚಿಕ್ಕಬಳ್ಳಾಪುರ 29, ವಿಜಯನಗರ 28, ಬಳ್ಳಾರಿ 28, ಕೊಪ್ಪಳ 31, ರಾಯಚೂರು 38, ಬೀದರ್ 35, ಯಾದಗಿರಿ 28, ಹಾವೇರಿ 34, ವಿಜಯಪುರ 44, ಭಾಗಲಕೋಟೆ 35, ಉತ್ತರ ಕನ್ನಡ 54, ಕಲಬುರ್ಗಿ 48, ಗದಗ 25, ಧಾರವಾಡ 28, ಬೆಳಗಾವಿ 91, ಉಡುಪಿ 28, ದಕ್ಷಿಣ ಕನ್ನಡ 35, ಕೊಡಗು 25, ಚಾಮರಾಜನಗರ 28, ಚಿಕ್ಕಮಗಳೂರು 36, ಹಾಸನ 39, ಮಂಡ್ಯ 40, ಮೈಸೂರು 46, ಶಿವಮೊಗ್ಗ 31, ಚಿತ್ರದುರ್ಗ 37, ತುಮಕೂರು 57, ರಾಮನಗರ 28, ಜಿಲ್ಲಾ ಪಂಚಾಯಿತಿ ಸದಸ್ಯರ ಸಂಖ್ಯೆ ಇದೆ.

Team Newsnap
Leave a Comment

Recent Posts

ಅಧಿಕೃತವಾಗಿ ಪ್ರಜ್ವಲ್ ರೇವಣ್ಣ ಜೆಡಿಎಸ್ ಪಕ್ಷದಿಂದ ಅಮಾನತು

ಹುಬ್ಬಳ್ಳಿ : ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಬಳಿಕ ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತು ಮಾಡಿ ಜೆಡಿಎಸ್… Read More

April 30, 2024

ನಾಳೆಯಿಂದ 14 ಕ್ಷೇತ್ರಗಳಲ್ಲಿ 2ನೇ ಹಂತದ ಅಂಚೆ ಮತದಾನ

ಬೆಂಗಳೂರು : ರಾಜ್ಯದ ಎರಡನೇ ಹಂತದ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಗತ್ಯ ಸೇವೆಗಳ ಇಲಾಖೆಗಳ ಸಿಬ್ಬಂದಿಗೆ ನಾಳೆಯಿಂದ 3 ದಿನಗಳ… Read More

April 30, 2024

SSLC ಪರೀಕ್ಷೆ : ಮೇ.10ರಂದು ಫಲಿತಾಂಶ ಪ್ರಕಟ

ಬೆಂಗಳೂರು : ಮೇ 10ರಂದು - ಪ್ರಸಕ್ತ ಸಾಲಿನ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಇಲಾಖೆ ಎಲ್ಲಾ ರೀತಿಯ ಸಿದ್ದತೆಗಳನ್ನು… Read More

April 30, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಏಪ್ರಿಲ್ 30 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,550 ರೂಪಾಯಿ ದಾಖಲಾಗಿದೆ. 24… Read More

April 30, 2024

5 ವಿದ್ಯಾರ್ಥಿಗಳ ಕಾವೇರಿ ನದಿಯಲ್ಲಿ ಮುಳುಗಿ ದುರ್ಮರಣ

ರಾಮನಗರ : ಮೇಕೆದಾಟು (Mekedatu) ಬಳಿಯ ಸಂಗಮದ ಕಾವೇರಿ ನದಿಯಲ್ಲಿ ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ… Read More

April 29, 2024

ಎಸ್.ಎಂ ಕೃಷ್ಣ ಆರೋಗ್ಯದಲ್ಲಿ ಏರುಪೇರು; ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಸಿಎಂ ಎಸ್.ಎಂ ಕೃಷ್ಣ (91) ಆರೋಗ್ಯದಲ್ಲಿ ಏರುಪೇರು ಆಗಿದೆ. ವೈದ್ಯರ ಸೂಚನೆ ಮೇರೆಗೆ ಮಣಿಪಾಲ್ ಆಸ್ಪತ್ರೆಗೆ ಎಸ್.ಎಂ… Read More

April 29, 2024